ಗ್ರಾಮಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾದರೂ ಕ್ರಿಯಾ ಯೋಜನೆ ರೂಪಿಸಲು ಇಚ್ಚಾಶಕ್ತಿ ತೋರದ ಜನಪ್ರತಿನಿಧಿ ಹಾಗೂ ಅಧಿಕಾರಿಗಳು…!

by | 29/12/23 | ಜನಧ್ವನಿ


ಚಳ್ಳಕೆರೆ ಜನಧ್ವನಿ ವಾರ್ತೆ ಡಿ.29 ಬರಗಾಲ ಎಂಬ ಹಣೆ ಪಟ್ಟಿಕೊಂಡಿರುವ ಬಯಲು ಸೀಮೆಯ ಗ್ರಾಮಗಳ ಅಭಿವೃದ್ಧಿ ಗೆ ಹಣ ಬಂದು ಖಾತೆ ಬಿದ್ದರೂ ಅನುಷ್ಠಾನ ಮಾಡಲು ಜನಪ್ರತಿನಿಧಿಗಳ ಇಚ್ಚಾ ಶಕ್ತಿಕೊರತೆಯಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ. ಹೌದು ಇದು ಚಳ್ಳಕೆರೆ ತಾಲೂಕಿನ 40 ಗ್ರಾಮಪಂಚಾಯಿತಿ ಗಳ ಅಭಿವೃದ್ಧಿಗೆಂದು 15 ನೇ ಹಣಕಾಸು ಯೋಜನೆಯಡಿ ಲಕ್ಷ ಲಕ್ಷ ರೂ ಹಣ ಬಂದು ಸುಮಾರು ವರ್ಷವೇ ಕಳೆಯಲು ಬಂದರೂ ಇನ್ನು 4 ಗ್ರಾಮಪಂಚಾಯಿತಿ ವ್ರಾಪ್ತಿಯಲ್ಲಿ ಕ್ರಿಯಾಯೋಜನೆ ರೂಪಿಸಲು ಇಚ್ಚಾಶಕ್ತಿ ತೋರುತ್ತಿಲ್ಲ ದೇವರು ವರ ಕೊಟ್ಟರೂ ಪೂಜಾರಿ ವರಕೊಡಲಿಲ್ಲ . ಅಪ್ಪ ಅಮ್ಮನ ಕಿತ್ತಾಟದಲ್ಲಿ ಕೂಸು ಬಡವಾಯ್ತು ಎಂಬ ಹಿರಿಯರ ಅನುಭವದ ಮಾತಿನಂತೆ ಸದಸ್ಯರ ಅಧಿಕಾರಿಗಳ ತಿಕ್ಕಾಟದಲ್ಲಿ ಗ್ರಾಮಗಳ ಅಭಿವೃದ್ಧಿ ಕುಂಠಿತಕ್ಕೆ ಮಾರಕ ಎಂಬಂತಾಗಿದೆ.

ಚಳ್ಳಕೆರೆ ತಾಲೂಕಿನ 40 ಗ್ರಾಮಪಂಚಾಯಿತಿ ಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ಕುಡಿತುವ ನೀರು.ನೈರ್ಮಲ್ಯ. ರಸ್ತೆ.ಸೇರಿಂದ ಮೂಲಭೂತ ಸಮಸ್ಯೆಗಳ ಅಭಿವೃದ್ಧಿಗೆಂದು 2023-24 ನೇ ಸಾಲಿನ 15 ನೇ ಹಣ ಕಾಸು ಯೋಜನೆಯಡಿ 17.4273976 ಕೋಟಿ ಅನುದಾನ ಬಿಡುಗಡೆ ಮಾಡಿದ್ದು 36 ಗ್ರಾಮಪಂಚಾಯಿಗಳು ಕ್ರಿಯಾಯೋಜನೆ ರೂಪಿಸಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಪ್ರಾರಂಭಿಸಲು ಮುಂದಾದರೆ ಇನ್ನು ಗೋಪನಹಳ್ಳಿ ಸುಮಾರು 41 ಲಕ್ಷ ರೂ. ಹಿರೆಹಳ್ಳಿ ಸುಮಾರು 50ಲಕ್ಷರೂ.ಜಾಜೂರು ಸುಮಾರು ಸುಮಾರು 43 ಲಕ್ಷ ರೂ . ಚನ್ನಮ್ಮನಾಗತಿಹಳ್ಳಿ ಸುಮಾರು 50 ಲಕ್ಷರೂ ಬಿಡುಗಡೆಯಾಗಿ ಆರ್ಥಿಕವರ್ಷ ಮುಗಿಯಲು ಇನ್ನು ಕೆಲವೇ ದಿನಗಳಯ ಬಾಕಿ ಇದ್ದರೂ ಸಹ ಜನಪ್ರತಿನಿಗಳ ಹಾಗೂ ಅಧಿಕಾರಿಗಳ ನಡುವಿನ ತಿಕ್ಕಾಟ. ಇಚ್ಛಾಶಕ್ತಿ ಕೊರತೆಯಿಂಸ ಕೋಟಿಗಟ್ಟಲೇ ಅನುದಾನ, ಖರ್ಚು ಮಾಡುವುದಿರಲಿ ಕ್ರಿಯಾ ಯೋಜನೆ ತಯಾರಿಸಲು ಮುಂದಾಗದೆ ಇರುವುದು ವಿಪರ್ಯಾಸದ ಸಂಗತಿ….!

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆಂದು ಸುಮಾರು ಎಂಟು ತಿಂಗಳ ಹಿಂದೆಯೇ 15 ನೇ ಹಣಕಾಸು ಯೋಜನೆಯಡಿ 40 ಗ್ರಾಮಪಂಚಾಯಿಗಳ ಜನಗಳ ಆದಾರದ ಮೇಲೆ ಅನುದಾನ ಹಂಚಿಕೆ ಮಾಡಿ 40 ಗ್ರಾಮಪಂಚಾಯಿಗಳಿಗೆ ಸುಮಾರು17.5 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಗ್ರಾಮೀಣ ಜನರಿಗೆ ಅಗಯ್ಯ ಮೂಲ ಭೂತ ಸೌಕರ್ಯಗಳ ಪಟ್ಟಿ ಮಾಡಿ ತಾಲೂಕು ಪಂಚಾಯತ್ ಹಾಗೂ ಜಿಲ್ಲಾಪಂಚಾಯತ್ ಕಚೇರಿಗಳಿಗೆ ಕ್ರೀಯಾಯೋಜನೆ ಕಳಿಸಿ ಅನುಮೋದನೆ ಪಡೆದು ಅನುಷ್ಠಾನಗೊಂಡ ಕಾಮಗಾರಿಗಳನ್ನು ಪ್ರಾರಂಭಿಸ ಬೇಕು ಆದರೆ ಅನುಷ್ಠಾ ಇರಲಿ ಇನ್ನು ನಾಲ್ಕು ಗ್ರಾಮಪಂಚಾಯಿತಿ ಕಚೇರಿಯಲ್ಲಿ ಕ್ರಿಯಾ ಯೋಜನೆ ರೂಪಿಸರಲು ಸದಸ್ಯರು ಇಚ್ಚಾಶಕ್ತಿತೋರದೆ ನಿರ್ಲಕ್ಷವಹಿಸಿರುವುದು ಬೆಳಕಿದೆ ಬಂದಿದೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಅಭಿವೃದ್ಧಿಗೆ ಬಂದ ಅನುದಾನ ಕ್ರಿಯಾಯೋಜನೆ ಮಾಡದೆ ಇರುವ ಗ್ರಾಮಪಂಚಾಯಿತಿ ಗಳಯ ಕೂಡಲೇ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಗೆ ಮುಂದಾಗುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page