ಹಿರಿಯೂರು:
ಗ್ರಾಮಗಳಲ್ಲಿ ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಸ್ಥಳದಲ್ಲಿಯೇ ಸಂಬಂಧ ಪಟ್ಟಂತಹ ಅಧಿಕಾರಿಗಳು ಭೇಟಿ ನೀಡಿ, ಗ್ರಾಮಗಳ ಜನರ ಸಮಸ್ಯೆಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ಆ ಸಮಸ್ಯೆಗಳನ್ನು ಬಗ್ಗೆಹರಿಸಬೇಕು ಎಂಬುದಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ತಾಲ್ಲೂಕಿನ ಜೆಜೆಹಳ್ಳಿ ಪಂಚಾಯಿತಿ ಹಾಗೂ ಕರಿಯಾಲ ಪಂಚಾಯಿತಿ ಎಲ್ಲಾ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಭೇಟಿ ನೀಡಿ, ಗ್ರಾಮಸ್ಥರ ಕುಂದುಕೊರತೆಗಳನ್ನು ಆಲಿಸಿ ನಂತರ ಅವರು ಮಾತನಾಡಿದರು.
ಗ್ರಾಮಗಳಲ್ಲಿ ಜನರಿಗೆ ಅಗತ್ಯವಾದ ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ಗ್ರಾಮ ಪಂಚಾಯತಿ ಪಿಡಿಒಗಳು ವಿಫಲರಾಗಿದ್ದು, ಪಂಚಾಯತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಬರುವುದಕ್ಕೂ ಮುಂಚೆ ಅಧಿಕಾರಿಗಳು ಎಚ್ಚೆತ್ತುಕೊಂಡು, ತುರ್ತು ಕೆಲಸ ಮಾಡಬೇಕು ಎಂಬುದಾಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು,
ಗ್ರಾಮಗಳಲ್ಲಿ ಇರತಕ್ಕಂತಹ ನೀರಿನ ಸಮಸ್ಯೆ ವಿದ್ಯುತ್ ಸಮಸ್ಯೆ ರಸ್ತೆಗಳ ಅಭಿವೃದ್ಧಿ ಬಗ್ಗೆ ಗ್ರಾಮಸ್ಥರಲ್ಲಿ ಕುಂದು ಕೊರತೆ ಬಗ್ಗೆ ವಿಚಾರಿಸಿದ, ಅವರು ಗ್ರಾಮದ ಎಲ್ಲಾ ಸಮಸ್ಯೆಗಳನ್ನು ಶೀಘ್ರವಾಗಿ ಪರಿಸಬೇಕು, ಸಣ್ಣ ಸಣ್ಣ ವಿಚಾರಕ್ಕೆಲ್ಲ ನಗರದಲ್ಲಿರುವ ನನ್ನ ಕಚೇರಿಗೆ ಜನರನ್ನು ಅಲೆಯುವಂತೆ ಮಾಡಬೇಡಿ ಎಂಬುದಾಗಿ ಅಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿರಮೇಶ್, ಜಿಲ್ಲಾಪಂಚಾಯತಿ ಮಾಜಿ ಸದಸ್ಯ ನಾಗೇಂದ್ರ ನಾಯ್ಕ್, ಮುಖಂಡರುಗಳಾದ ಪಿ.ಎಸ್.ಪಾತಯ್ಯ, ಜೆಜೆಹಳ್ಳಿ ಪಂಚಾಯತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪುಟ್ಟರಾಜು, ಅಧ್ಯಕ್ಷ ಮಂಜುನಾಥ್, ನರಸಿಂಹಸ್ವಾಮಿ, ಮಾಜಿ ಎಪಿಎಂಸಿ ಅಧ್ಯಕ್ಷ ವೇದಮೂರ್ತಿ, ಮಾಜಿ ತಾಲೂಕು ಪಂಚಾಯತಿ ಸದಸ್ಯ ತಿಪ್ಪಮ್ಮ, ಫಕೃದ್ದೀನ್, ಚಿತ್ರಲಿಂಗಪ್ಪ, ಶ್ರೀನಿವಾಸ್ ನಾಯಕ, ಗಿರೀಶ್, ಕಾರ್ಮಿಕ ಘಟಕದ ಅಧ್ಯಕ್ಷ ಶಿವಕುಮಾರ್, ಜೆಜಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಅಲ್ತಾಫ್, ಕರಿಯಲ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿಜಯಮ್ಮ, ಉಪಾಧ್ಯಕ್ಷ ರಾಮಣ್ಣ, ಪ್ರಶಾಂತ್, ಗ್ರಾಮ ಪಂಚಾಯತಿ ಸದಸ್ಯೆ ಮಂಜುಳಾಉಮೇಶ್, ಗ್ರಾಮ ಪಂಚಾಯತಿ ಸದಸ್ಯ ಭರತ್, ಆಲಿ ಸಾಬ್, ಮಂಗಳಮ್ಮ, ಶಬನಾ, ಪರ್ವಿನ್, ಕೃಷ್ಣಪ್ಪ ಮಾರಣ್ಣ, ಭೂತೇಶ್, ಮೈಲಾರಪ್ಪ, ಪಾತಪ್ಪ, ರಮೇಶ್, ಪರಶುರಾಮಣ್ಣ, ನಾಗರಾಜ್, ನಾಗೇಂದ್ರಪ್ಪ, ಮಹೇಶ್, ಸೀನಪ್ಪ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments