ಗ್ರಾಮಪಂಚಾಯತಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ತನಿಖೆ ನಡೆಸುವಂತೆ ರೈತಸಂಘದಿಂದ ಒತ್ತಾಯ

by | 04/12/23 | ಪ್ರತಿಭಟನೆ


ಹಿರಿಯೂರು :
ತಾಲೂಕಿನ ಯಾವ ಗ್ರಾಮ ಪಂಚಾಯತಿಯಲ್ಲೂ ಈ ಸ್ವತ್ತು ಖಾತೆ ಮಾಡುತ್ತಿಲ್ಲ, ಖಾಸಗಿ ಕಂಪ್ಯೂಟರ್ ಸೆಂಟರ್ ಗಳಲ್ಲಿ ಮಾಡಲಾಗುತ್ತಿದ್ದು, ಈ ಸ್ವತ್ತು ಖಾತೆಗೆ 1,50,000 ದಿಂದ ಕನಿಷ್ಠ 10,000 ದವರೆಗೆ ಹಣ ಪಡೆಯುತ್ತಿದ್ದಾರೆ ಎಂಬುದಾಗಿ ರೈತಸಂಘದ ತಾಲ್ಲೂಕು ಅಧ್ಯರಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆಪಾದಿಸಿದ್ದಾರೆ.
ನಗರದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಬಗ್ಗೆ ಮನವಿಪತ್ರ ಸಲ್ಲಿಸಿ ಅವರು ಮಾತನಾಡಿದರು.
ತಾಲ್ಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಕಾಯ್ದೆ ಕಾನೂನುಗಳನ್ನು ಉಲ್ಲಂಘನೆ ಮಾಡಿ, ಅಕ್ರಮವಾಗಿ, ಕಾನೂನುಬಾಹಿರವಾಗಿ, ನಡೆಯುತ್ತಿರುವ ಅವ್ಯವಹಾರಗಳ ಕುರಿತು ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮಕೈಗೊಳ್ಳುವಂತೆ ಅವರು ಒತ್ತಾಯಿಸಿದರು
ಕೆಲವು ಗ್ರಾಮ ಪಂಚಾಯಿತಿಗಳಲ್ಲಿ ರಾಜ ಪ್ರಮುಖರು, ರಾಜ್ಯಪಾಲರ ಹೆಸರಿನಲ್ಲಿ ಮತ್ತು ಶಿಕ್ಷಣಕ್ಕೆ ಮೀಸಲಿರಿಸಿದ ಸ್ಥಳ, ಸರ್ಕಾರಿ ಜಾಗ, ಗುಂಡು ತೋಪು, ಗ್ರಾಮ ಠಾಣಾ ಜಾಗಗಳಲ್ಲಿ ಈ ಸ್ವತ್ತು ಖಾತೆ ಮಾಡಲಾಗಿರುತ್ತಿದೆ ಹಣ ಕೊಡದೆ ಇದ್ದಲ್ಲಿ 2/3 ವರ್ಷ ಕಳೆದರೂ ಈ ಸ್ವತ್ತು ಖಾತೆ ಮಾಡಿಕೊಡುವುದಿಲ್ಲ.
ಅಲ್ಲದೆ ನಗರ ಹಾಗೂ ಗ್ರಾಮ ಸಭೆ ನಡೆಸದೆ ವಸತಿ ಯೋಜನೆ ಫಲಾನುಭವಿಗಳನ್ನು ಪಂಚಾಯತಿಯಲ್ಲಿ ಆಯ್ಕೆಮಾಡಲಾಗುತ್ತಿದ್ದು, ತಾಲೂಕಿನಲ್ಲಿ ವಿವಿಧ ವಸತಿ ಯೋಜನೆಗಳಲ್ಲಿ ಸುಮಾರು 5000ಕ್ಕೂ ಹೆಚ್ಚು ಮನೆಗಳು ಬೋಗಸ್ಸಾಗಿವೆ ಅನೇಕ ಬಾರಿ ಮನವಿ ಮಾಡಿದರು ಇದುವರೆಗೂ ತನಿಖೆ ನಡೆಸಿ ಕ್ರಮಕೈಗೊಂಡಿಲ್ಲ.
ಉದ್ಯೋಗ ಖಾತರಿ ಯೋಜನೆಯಲ್ಲಿ ಹಲವಾರು ಗ್ರಾಮ ಪಂಚಾಯಿತಿಯಲ್ಲಿ ಕಾಮಗಾರಿ ನಡೆಸದೆ ಬಿಲ್ ಪಡೆದಿರುತ್ತಾರೆ ಮತ್ತು ರೈತರ ಕಾಮಗಾರಿಗಳಿಗೆ ಎನ್ ಎಂ ಆರ್ ಹಾಕದೆ ಅನೇಕ ಬಾರಿ ಜೋರು ಮಾಡುತ್ತಾರೆ ಮತ್ತು ರೈತರ ಕಾಮಗಾರಿಗಳಿಗೆ ಇದುವರೆಗೂ ಸಪ್ಲೇ ಬಿಲ್ ಕೊಟ್ಟಿರುವುದಿಲ್ಲ.
ಉದ್ಯೋಗ ಖಾತರಿ ಇಂಜಿನಿಯರ್ ಸರಿಯಾಗಿ ಕಾರ್ಯನಿರ್ವಹಿಸದೆ ಫಲಾನುಭವಿಗಳಿಗೆ ಎಂ ಬಿ ಬರೆಯಲು ಕೊಡುತ್ತಾರೆ. ಕಂಪ್ಯೂಟರ್ ಆಪರೇಟರ್ ಕೆಲವು ಅವರ ಪರಿಚಯಸ್ತರ ಅಕೌಂಟ್ ಗೆ ಹಣ ಹಾಕಿಕೊಳ್ಳುತ್ತಾರೆ ಮತ್ತು ಪಂಚಾಯತಿಯಲ್ಲಿ ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ.
ಜಲಜೀವನ್ ಯೋಜನೆ ಕಾಮಗಾರಿಯಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ, ಗ್ರಾಮಗಳಲ್ಲಿ ಐ ಮಾಕ್ಸ್ ಅಳವಡಿಸುವಲ್ಲಿ ಬಾರಿ ಅವ್ಯವಾರ ನಡೆದಿದೆ, ಗ್ರಾಮ ನೈರ್ಮಲ್ಯ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದ್ದು ಪೆನಾಯಿಲ್, ಬ್ಲಿಚಿಂಗ್ ಪೌಡರ್ ಬಳಸುತ್ತಿಲ್ಲ, ಇವುಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಬೇಕು ಎಂದರಲ್ಲದೆ,
ಪಂಚಾಯತಿ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು ಮತ್ತು ವಾಣಿಜ್ಯ ಕಂಪನಿಗಳಲ್ಲಿ ಉತ್ಪಾದನೆಗೆ ಅನುಗುಣವಾಗಿ ತೆರಿಗೆ ವಸೂಲಾತಿ ಮಾಡದೆ ಅಧಿಕಾರಿಗಳು ಕಂಪನಿಯ ಮಾಲೀಕರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಂದಾಯ ವಸೂಲಾತಿ ಆಗುತ್ತಿಲ್ಲ. ಅನೇಕ ಕೈಗಾರಿಕೆ ಮತ್ತು ವಾಣಿಜ್ಯ ಕಂಪನಿಗಳ ವಿರುದ್ಧ ಸಾರ್ವಜನಿಕರು ದೂರು ನೀಡಿದರೂ ಯಾವುದೇ ಕ್ರಮವಹಿಸುತ್ತಿಲ್ಲ ಎಂದು ದೂರಿದರು.
ಗ್ರಾಮ ಪಂಚಾಯತಿಗಳಲ್ಲಿ ಸರ್ಕಾರಿ ದಾಖಲೆಗಳನ್ನು ಸಾರ್ವಜನಿಕ ಮಾಹಿತಿ ಹಕ್ಕು ಅಧಿನಿಯಮ 2005 ರ ಅಡಿಯಲ್ಲಿ ಅರ್ಜಿ ಸಲ್ಲಿಸಿದರು ಮಾಹಿತಿ ಕೊಡುತ್ತಿಲ್ಲ.ತಾಲೂಕು ಪಂಚಾಯಿತಿ ಆಡಳಿತ ಅವಧಿ ಮುಗಿದಾಗಿನಿಂದ ಇಂದಿನವರೆಗೆ ಎಲ್ಲಾ ಅನುದಾನಗಳ ಕಾಮಗಾರಿಗಳ ತನಿಖೆ ನಡೆಸಬೇಕು ಎಂದರಲ್ಲದೆ,
ಈ ಎಲ್ಲಾ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಅಭಿವೃದ್ಧಿ ಅಧಿಕಾರಿಗಳು ಮತ್ತು ರೈತ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಎಲ್ಲಾ ದಾಖಲೆಗಳನ್ನು ಸಭೆಗೆ ಒಪ್ಪಿಸುತ್ತೇವೆ. ಆದ್ದರಿಂದ ತಾವುಗಳು ಸಮಗ್ರ ತನಿಖೆ ನಡೆಸಲು ಜಿಲ್ಲಾ ಮಟ್ಟದ ವಿಶೇಷ ತಂಡ ರಚಿಸಿ ತನಿಖೆ ನಡೆಸಿ ತಪ್ಪಿತಸ್ತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ಶಿವಣ್ಣ ತಿಮ್ಮಾರೆಡ್ಡಿ, ರಂಗಸ್ವಾಮಿ, ಅರಳಿಕೆರೆ ತಿಪ್ಪೇಸ್ವಾಮಿ, ಜಗನ್ನಾಥ್, ಜಯಣ್ಣ, ದೇವೇಂದ್ರಪ್ಪ, ರಾಮಣ್ಣ, ಗೌಡಪ್ಪ, ನಾರಾಯಣಪ್ಪ, ಕೆಂಚಪ್ಪ, ರಾಜಪ್ಪ, ದೊರೆಸ್ವಾಮಿ, ಈಶ್ವರಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page