ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಿನ ನಿತ್ಯ ಜನರೊಂದಿಗೆ ಬೆರತು ಕಚೇರಿಯಲ್ಲಿ ಕೂತು ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಿ ಕೆಲಸ ಮಾಡಿದಾಗ ನಿಮ್ಮ ಬಗ್ಗೆ ಯಾವುದೇ ದೂರುಗಳು ಬರುವುದಿಲ್ಲ ಎಂದು ತಾಪಂ ಇಒ ಶಶಿಧರ್.

by | 01/01/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.1 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಿನ ನಿತ್ಯ ಜನರೊಂದಿಗೆ ಬೆರತು ಕಚೇರಿಯಲ್ಲಿ ಕೂತು ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಿ ಕೆಲಸ ಮಾಡಿದಾಗ ನಿಮ್ಮ ಬಗ್ಗೆ ಯಾವುದೇ ದೂರುಗಳು ಬರುವುದಿಲ್ಲ ಎಂದು ತಾಪಂ ಇಒ ಶಶಿಧರ್ ಕಿವಿಮಾತು ಹೇಳಿದರು,


ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಪಂ ಪಿಡಿಓ , ಕಾರ್ಯದರ್ಶಿ, ಕಡವಸೂಲಿಗಾರ, ಕಂಪ್ಯೂಟರ್ ಆಪರೇಟ್ ಗಳಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಬ್ಬಂದಿಗಳಿಂದ ಆಯೋಜಿಸಿದ್ದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
ಸರಕಾರಗಳಿಂದ ಬರುವ ಸುತ್ತೋಲೆಗಳನ್ನು ನಿರ್ಲಕ್ಷ ವಹಿಸದೆ ಅವುಗಳನ್ನು ಸಕಾಲಕ್ಕೆ ಪಾಲನೆ ಮಾಡುತ್ತಾ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಗ್ರಾಮಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಗ್ರಾಮಗಳ ಅಗತ್ಯ ಮೂಲ ಭೂತ ಸೌಲಭ್ಯಗಳ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆದು ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗಧಿತ ಅವದಿಯೋಗಳಗೆ ಗುಣ ಮಟ್ಟ ಕಾಮಗಾರಿಗಳನ್ನು ನಿರ್ಮಿಸ,
ಗ್ರಾಮದಲ್ಲಿ ಆಸ್ತಿಗಳ ಸರ್ವೆಕಾರ್ಯ ಮಾಡುವ ಮೂಲಕ ಆನ್ ಲೈನ್ ಗೆ ಅಳವಡಿಸಬೇಕು, ಇ-ಸ್ವತ್ತು ನಿಗಧಿತ ಅವಧಿಯೊಳಗೆ ಜನರನ್ನು ಕಚೇರಿಗೆ ಅಲೆದಾಡಿಸದೆ ಮಡಿಕೊಡಬೇಕು, ಕರವಸೂಲಿ ಮಾಡಿದ ಹಣವನ್ನು ದುರ್ಬಳಕೆ ಮಾಡದೆ ವಸುಲಾತಿಯಾದ ಹಣವನ್ನು ಬ್ಯಾಂಕಿಗೆ ಪಾವತಿ ಮಾಡಬೇಕು. ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಗುಣ ಮಟ್ಟ ಹಾಗೂ ಚೆಕ್ ಲೀಸ್ಟ್ ಪ್ರಕಾರ ಕಡತಗಳನ್ನು ಸಿದ್ದ ಪಡಿಸಬೇಕು.


ಗ್ರಾಮೀಣ ಜನರಿಗೆ ಕುಡಿಯುವ ನೀರು, ಸ್ವಚ್ಚತೆ ಬೀದಿ ದೀಪ, ನೈರ್ಮಲ್ಯ, ಇ-ಸ್ವತ್ತು ಖಾತೆಗಳನ್ನು ನೀಡಿದರೆ ಯಾರೂ ನಿಮ್ಮ ಬಗ್ಗೆ ಆರೋಪಗಳನ್ನು ಮಾಡುವುದಿಲ್ಲ ನಿಗಧಿತ ಅವಧಿಯೊಳಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಿ ಹಾಗೂ ಸಾರ್ವನಿಕರು ನಿಮಗೆ ದೂರವಾಣಿ ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿ ಮಾಹಿತಿ ಪಡೆದುಕೊಳ್ಳಿ ಹಾಗೂ ಮಾಹಿತಿ ನೀಡಿ ಅವರ ಸಂಪರ್ಕಕ್ಕೆ ನೀವು ಸದಾ ಸಿಗುವಂತಾಗ ಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನರೇಗಾ ಸಹಾಯಕ ನಿರ್ಧೇಶಕ ಸಂತೋಷ್, ತಾಪಂ ಸಹಾಯಕ ನಿರ್ಧೇಶಕ ಸಂಪತ್ ಕುಮಾರ್, ಲೆಕ್ಕಾಧಿಕಾರಿ ಕೆಂಚಪ್ಪ, ಸಹಾಯಕ ಲೆಕ್ಕಾಧಿಕಾರಿ ದಿವಾಕರ್, ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಮಾಜಿ ಅಧ್ಯಕ್ಷ ದೇವರಾಜ್, ಜಿಲ್ಲಾ ಪಿಡಿಒಗಳ ಸಂಘದ ಮಾಜಿ ಅಧ್ಯಕ್ಷ ಗುಂಡಪ್ಪ ಇತರರಿದ್ದರು.
ಇದೇ ಸಂದರ್ಭದಲ್ಲಿ ತಾಪಂ ಕಚೇರಿಯ ವಿಶೇಷ ಚೇತನ ಪ್ರಥಮರ್ಜೆ ಸಹಾಯಕ ನೌಕರನಿಂದ ಕೇಕ್ ಕತ್ತರಿಸುವ ಮೂಲಕ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ ಹೊಸ ವರ್ಷಾಚರಣೆ ಆಚರಣೆ ಮಾಡಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page