ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಿನ ನಿತ್ಯ ಜನರೊಂದಿಗೆ ಬೆರತು ಕಚೇರಿಯಲ್ಲಿ ಕೂತು ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಿ ಕೆಲಸ ಮಾಡಿದಾಗ ನಿಮ್ಮ ಬಗ್ಗೆ ಯಾವುದೇ ದೂರುಗಳು ಬರುವುದಿಲ್ಲ ಎಂದು ತಾಪಂ ಇಒ ಶಶಿಧರ್.

by | 01/01/24 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಜ.1 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ದಿನ ನಿತ್ಯ ಜನರೊಂದಿಗೆ ಬೆರತು ಕಚೇರಿಯಲ್ಲಿ ಕೂತು ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಿ ಕೆಲಸ ಮಾಡಿದಾಗ ನಿಮ್ಮ ಬಗ್ಗೆ ಯಾವುದೇ ದೂರುಗಳು ಬರುವುದಿಲ್ಲ ಎಂದು ತಾಪಂ ಇಒ ಶಶಿಧರ್ ಕಿವಿಮಾತು ಹೇಳಿದರು,


ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಪಂ ಪಿಡಿಓ , ಕಾರ್ಯದರ್ಶಿ, ಕಡವಸೂಲಿಗಾರ, ಕಂಪ್ಯೂಟರ್ ಆಪರೇಟ್ ಗಳಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಿಬ್ಬಂದಿಗಳಿಂದ ಆಯೋಜಿಸಿದ್ದ ಹೊಸ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು
ಸರಕಾರಗಳಿಂದ ಬರುವ ಸುತ್ತೋಲೆಗಳನ್ನು ನಿರ್ಲಕ್ಷ ವಹಿಸದೆ ಅವುಗಳನ್ನು ಸಕಾಲಕ್ಕೆ ಪಾಲನೆ ಮಾಡುತ್ತಾ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ಗ್ರಾಮಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಗ್ರಾಮಗಳ ಅಗತ್ಯ ಮೂಲ ಭೂತ ಸೌಲಭ್ಯಗಳ ಕ್ರಿಯಾಯೋಜನೆ ರೂಪಿಸಿ ಅನುಮೋದನೆ ಪಡೆದು ಅನುಷ್ಠಾನಗೊಂಡ ಕಾಮಗಾರಿಗಳನ್ನು ನಿಗಧಿತ ಅವದಿಯೋಗಳಗೆ ಗುಣ ಮಟ್ಟ ಕಾಮಗಾರಿಗಳನ್ನು ನಿರ್ಮಿಸ,
ಗ್ರಾಮದಲ್ಲಿ ಆಸ್ತಿಗಳ ಸರ್ವೆಕಾರ್ಯ ಮಾಡುವ ಮೂಲಕ ಆನ್ ಲೈನ್ ಗೆ ಅಳವಡಿಸಬೇಕು, ಇ-ಸ್ವತ್ತು ನಿಗಧಿತ ಅವಧಿಯೊಳಗೆ ಜನರನ್ನು ಕಚೇರಿಗೆ ಅಲೆದಾಡಿಸದೆ ಮಡಿಕೊಡಬೇಕು, ಕರವಸೂಲಿ ಮಾಡಿದ ಹಣವನ್ನು ದುರ್ಬಳಕೆ ಮಾಡದೆ ವಸುಲಾತಿಯಾದ ಹಣವನ್ನು ಬ್ಯಾಂಕಿಗೆ ಪಾವತಿ ಮಾಡಬೇಕು. ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಾಮಗಾರಿಗಳ ಗುಣ ಮಟ್ಟ ಹಾಗೂ ಚೆಕ್ ಲೀಸ್ಟ್ ಪ್ರಕಾರ ಕಡತಗಳನ್ನು ಸಿದ್ದ ಪಡಿಸಬೇಕು.


ಗ್ರಾಮೀಣ ಜನರಿಗೆ ಕುಡಿಯುವ ನೀರು, ಸ್ವಚ್ಚತೆ ಬೀದಿ ದೀಪ, ನೈರ್ಮಲ್ಯ, ಇ-ಸ್ವತ್ತು ಖಾತೆಗಳನ್ನು ನೀಡಿದರೆ ಯಾರೂ ನಿಮ್ಮ ಬಗ್ಗೆ ಆರೋಪಗಳನ್ನು ಮಾಡುವುದಿಲ್ಲ ನಿಗಧಿತ ಅವಧಿಯೊಳಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಿ ಹಾಗೂ ಸಾರ್ವನಿಕರು ನಿಮಗೆ ದೂರವಾಣಿ ಕರೆ ಮಾಡಿದಾಗ ಸ್ವೀಕರಿಸಿ ಮಾತನಾಡಿ ಮಾಹಿತಿ ಪಡೆದುಕೊಳ್ಳಿ ಹಾಗೂ ಮಾಹಿತಿ ನೀಡಿ ಅವರ ಸಂಪರ್ಕಕ್ಕೆ ನೀವು ಸದಾ ಸಿಗುವಂತಾಗ ಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನರೇಗಾ ಸಹಾಯಕ ನಿರ್ಧೇಶಕ ಸಂತೋಷ್, ತಾಪಂ ಸಹಾಯಕ ನಿರ್ಧೇಶಕ ಸಂಪತ್ ಕುಮಾರ್, ಲೆಕ್ಕಾಧಿಕಾರಿ ಕೆಂಚಪ್ಪ, ಸಹಾಯಕ ಲೆಕ್ಕಾಧಿಕಾರಿ ದಿವಾಕರ್, ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ದೇವೇಂದ್ರಪ್ಪ, ಮಾಜಿ ಅಧ್ಯಕ್ಷ ದೇವರಾಜ್, ಜಿಲ್ಲಾ ಪಿಡಿಒಗಳ ಸಂಘದ ಮಾಜಿ ಅಧ್ಯಕ್ಷ ಗುಂಡಪ್ಪ ಇತರರಿದ್ದರು.
ಇದೇ ಸಂದರ್ಭದಲ್ಲಿ ತಾಪಂ ಕಚೇರಿಯ ವಿಶೇಷ ಚೇತನ ಪ್ರಥಮರ್ಜೆ ಸಹಾಯಕ ನೌಕರನಿಂದ ಕೇಕ್ ಕತ್ತರಿಸುವ ಮೂಲಕ ಪಿಡಿಒಗಳ ಕ್ಷೇಮಾಭಿವೃದ್ಧಿ ಸಂಘ ಹೊಸ ವರ್ಷಾಚರಣೆ ಆಚರಣೆ ಮಾಡಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page