ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆ ಬಿಡುಗಡೆಯಾದ ಅನುದಾನ ದುರುಪಯೋಗ-ಹಳ್ಳ ಹಿಡಿದ ಸ್ವಚ್ಚಭಾರತ ಘನ ತ್ಯಾಜ್ಯ ಘಟಕ ಕಾಮಗಾರಿ..

by | 17/11/23 | ತನಿಖಾ ವರದಿ

ಚಳ್ಳಕೆರೆ ಜನಧ್ವನಿ ವಾರ್ತೆ 17 ನೂತನ ಗ್ರಾಮ
ಪಂಚಾಯ್ತಿ ಕಟ್ಟಡ ನಿರ್ಮಾಣಕ್ಕೆಂದು ಆನುದಾನ ಬಿಡುಗಡೆಯಾಗಿ ವರ್ಷ ಕಳೆದರೂ ಕಟ್ಟಡಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮಪಂಚಾಯಿತಿ ಕಟ್ಟಡ ನಿರ್ಮಾಣಕ್ಕೆಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್‌.ಈಶ್ವರಪ್ಪ‌ಅಧಿಕಾರವದಿಲ್ಲಿ 17-4-2022 ರಂದು 26 ಲಕ್ಷ ಅನುದಾನ ಬಿಡುಗಡೆಯಾಗಿರುತ್ತದೆ. ಈ ಅನುದಾನವನ್ನು ನಿರ್ಮಿತಿ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಬಿಡುಗಡೆ ಮಾಡುವಂತೆ ಜಿಲ್ಲಾಪಂಚಾಯ್ ಸಿಇಒ ಆದೇಶ ಮಾಡುತ್ತಾರೆ ಇವರ ಆದೇಶದ ಮೇರೆಗೆ ದಿನಾಂಕ6-8-2022 ರಂದು ಗ್ರಾಪಂ‌ ಅಂದಿನ ಅಧ್ಯಕ್ಷೆ ಲಕ್ಷ್ಮಮ್ಮ‌ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಗ್ರಾಮಪಂಚಾಯಿತಿ‌ ಕಟ್ಟಡ ನಿರ್ಮಾಣಕ್ಕೆ ನಿರ್ಮಿತಿ ಕೇಂದ್ರಕ್ಕೆ ನೀಡಲು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುತ್ತಾರೆ ಸಭೆಯ ನಡುವಳಿ ಬರೆಯುತ್ತಾರೆ ಆದರೆ ಅನುದಾನ ಮಾತ್ರ ನಿರ್ಮಿತಿ ಕೇಂದ್ರಕ್ಕೂ ನೀಡದೆ ಕಟ್ಟಡ ನಿರ್ಮಿಸದೆ ಸುಮಾರು 10 ಲಕ್ಷ ರೂ ಗೂ ಅಧಿಕ ಹಣ ಬಿಡಿಸಿ ಬೇರೆ ಉದ್ದೇಶಕ್ಕೆ ಬಿಡಿಸಿ ವರ್ಗ1 ರ ಅನುದಾನ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ . ಇದು ಬೇಲಿಯೇ ಹೊಲ ಎದ್ದು ಮೇಯ್ದಂತಾಗಿದೆ.
*ಅನುದಾನದ ಹೊಳೆ*
ಕೇಂದ್ರ ಹಾಗೂ ರಾಜ್ಯ ಸರಕಾರ ಗ್ರಾಮೀಣ ಭಾಗದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಸ್ಥಳೀಯ ಪಂಚಾಯತ್‌ಗಳಿಗೆ ಅನುದಾನದ ಹೊಳೆಯನ್ನು ಹರಿಸುತ್ತಿದ್ದರೂ ಗ್ರಾಮಗಳ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದೆ.
*ಹಳ್ಳಹಿಡಿದ ಸ್ವಚ್ಛ ಭಾರತ್* ಸ್ವಚ್ಚ ಭಾರತ್ ಪರಿಕಲ್ಪನೆಯಡಿ
ಗ್ರಾಮ ಮಟ್ಟದಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ
ಸಾವಯವ ಗೊಬ್ಬರ ಬಳಕೆಗೆ ಉತ್ತೇಜನ
ನೀಡುವುದಲ್ಲದೆ, ವೈಜ್ಞಾನಿಕವಾಗಿ ಕಸ ವಿಲೇವಾರಿ
ಮಾಡುವ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂ.ಗಳಲ್ಲಿ ಘನ
ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸುವ ಮಹತ್ತರ
ಯೋಜನೆಗೆ ಜನಪ್ರತಿನಿಧಿಗಳಿಂದಲೇ ವಿಘ್ನ
ಎದುರಾಗಿದೆ.
ಸರಕಾರಿ ಗೋಮಾಳದಲ್ಲಿ ನರೇಗಾದಡಿ 10 ಲಕ್ಷ ಹಾಗೂ 15ನೇ ಹಣಕಾಸು
ಯೋಜನೆಯಡಿ ಕೇಂದ್ರವು ಸ್ವಚ್ಛಭಾರತ್ ಅಭಿಯಾನ
ಆರಂಭಿಸಿದೆ. ಇದರಡಿ ಗ್ರಾ.ಪಂ.ಗಳಿಗೆ ತ್ಯಾಜ್ಯ
ವಿಲೇವಾರಿ ಘಟಕ ಸ್ಥಾಪನೆಗೆ ಸರಕಾರಗಳು ಹಣ
ಬಿಡುಗಡೆ ಮಾಡುತ್ತಿವೆ. ಅದರಲ್ಲಿ ಗೋಪನಹಳ್ಳಿಯಲ್ಲಿ
ತ್ಯಾಜ್ಯ ಘಟಕ ನಿರ್ಮಿಸಿ ಸುಮಾರು ಎರಡು ವರ್ಷಗಳು‌
ಕಳೆದರೂ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ
ನಿರ್ಲಕ್ಷ್ಯತೆಯಿಂದ ಮಹತ್ತರ ಯೋಜನೆಗೆ ಎಳ್ಳು
ನೀರು ಬಿಟ್ಟಂತಾಗಿದೆ.
ಗ್ರಾ.ಪಂ.ಸದಸ್ಯರು ಯಾವುದೇ ಸಿವಿಲ್ ಕಾಮಗಾರಿ
ನಡೆಸುವಂತಿಲ್ಲ ಎಂದು ಕಾನೂನು ಹೇಳುತ್ತಿದೆ. ಈ
ಕಾಮಗಾರಿ ಹೊಣೆಯನ್ನು ಅಂದಿನ ಗ್ರಾ.ಪಂ. ಅಧ್ಯಕ್ಷ ಹಾಗೂ‌ಉಪಾಧ್ಯಕ್ಷ ಇಬ್ಬರು ವಹಿಸಿದ್ದರು. ಅಧ್ಯಕ್ಷ-ಉಪಾಧ್ಯಕ್ಷರ ಗದ್ದುಗೆಯ ಮುಸುಕಿನ ಜಗಳದಲ್ಲಿ ಘನ ತ್ಯಾಜ್ಯ ಘಟಕಕಾಮಗಾರಿ ಸುಮಾರು ಎರಡು ವರ್ಷಗಳಿಂದಲೂ ಕಾಮಗಾರಿ ಪೂರ್ಣಗೊಳ್ಳದೆ ಅರೆ ಬರೆಯಾಗಿ ನಿಂತಿದೆ.
ನರೇಗಾದಲ್ಲಿ 1.60 ಲಕ್ಷ ರೂ. 15ನೇಹಣಕಾಸು ಯೋಜನೆಯಡಿ 3 ಲಕ್ಷ ಕಾಮಗಾರಿ ಜಿಲ್
ಪಡೆದಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವರೇ ಕಾದು ನೋಡ ಬೇಕಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page