ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು. ಬೀದಿ ದೀಪ. ಸ್ವಚ್ಚತೆ. ಇ-ಸ್ವತ್ . ಖಾತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಿದರೆ ನಿಮ್ಮ ಮೇಲೆ ಯಾವುದೇ ಆರೋಪಗಳು ದೂರುಗಳು ಬರುವುದಿಲ್ಲ ಜಿಪಂ ಸಿಇಒ ಸೋಮಶೇಖರ್.

by | 09/09/23 | ಸುದ್ದಿ

ಚಳ್ಳಕೆರೆ ಸೆ.9. ಮುಂಗಾರು ಮಳೆ ಕೈಕೊಟ್ಟಿದ್ದು ಅಂತರ್ಜಲ ಮಟ್ಟ ಕುಸಿಯುವ ಸಾಧ್ಯ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಸ್ವಚ್ಚತೆ ಬಗ್ಗೆ ಹೆಚ್ಚು ಗಮನ ಹರಿಸುವಂತೆ ಜಿ ಪಂ ಸಿಇಒ.ಜೆ.ಸೋಮಶೇಖರ್ ಕಿವಿಮಾತು ಹೇಳಿದರು.
ನೂತನವಾಗಿ ಜಿಪಂ ಅಧಿಕಾರಿ ಸ್ವೀಮರಿಸಿ ಪ್ರಥಮಬಾರಿಗೆ ಚಳ್ಳಕೆರೆ ತಾಲೂಕಿನ ಸಾಣೀಕೆರೆ. ಬೆಳಗೆರೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ನರೇಗಾ .ಅಮೃತಸರ ಹಾಗೂ ಘನ ತ್ಯಾಜ್ಯ ಘಟಕಗಳಿಗೆ ಭೇಟಿ ನೀಡಿ ಅನುಷ್ಠಾನಗೊಂಡ ಕಾಮಗಾರಿಗಳ ಕಡತಗಳನ್ನು ಪರಿಶೀಲನೆ ನಡೆಸಿ ನಂತರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಪಂ ಪಿಡಿಒ ಗಳಿಗೆ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ‌ಭಾಗವಹಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರ ಬೀದಿ ದೀಪ. ಸ್ವಚ್ಚತೆ. ಇ-ಸ್ವತ್ . ಖಾತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಿದರೇ ನಿಮ್ಮ ಮೇಲೆ ಯಾವುದೇ ಆರೋಪಗಳು ದೂರುಗಳು ಬರುವುದಿಲ್ಲ ಕಚೇರಿಗೆ ಬಂದ ಜನರನ್ನು ಅಲೆದಾಡಿಸದೇ ಕೆಲಸ ಮಾಡಿಕೊಟ್ಟರೆ ಜನರ ಮೆಚ್ಚಿಗೆಗೆ ಪಾತ್ರರಾಗಿ ಜನರ ಮನದಲ್ಲಿ ಉಳಿಯುತ್ತೀರಿ. ನರೇಗಾ ಯೋಜನೆಯಡಿಯಲ್ಲಿ ಗುಣ ಮಟ್ಟದ ಕಾಮಗಾರಿಗಳನ್ನು ಮಾಡುವ ಜತೆಗೆ ಗ್ರಾಮೀಣ ಭಾಗದ ದುಡಿಯುವ ಕೂಲಿ ಕಸರ್ಮಿಕರ ಕೈಗಳಿಗೆ ಕೆಲಸ ನೀಡುವಂತಹ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಿ . ಕುಡಿಯುವ ನೀರಿನ ಮೂಲಗಳ ಸ್ವಚ್ಚತೆ ಹಾಗೂ ಪೈಪ್ ಲೈನ್ ದುರಸ್ಥಿ ಪಡಿಸ ಬೇಕು ಚಿತ್ರದುರ್ಗದ ತಾಲೂಕಿನ ಕಾವಡಿಗರ ಹಟ್ಟಿಯ ಘಟನೆ ಮತ್ತೆ ಎಲ್ಲೂ ಮರುಕಳಿಸ ಬಾರದು. ಗ್ರಾಮಪಂಚಾಯ್ ಗಳಲ್ಲಿ‌ನಿಗಧಿ ಪಡಿಸಿದ ದಿನಾಂಕದೊಳಗೆ ಸಾಮಾನ್ಯ ಸಭೆ.ಗ್ರಾಮಸಭೆ.ವಾರ್ಡ್ ಸಭೆ ಹಾಗೂ ಅನ್ ಲೈನ್ ಸಭೆಗಳನ್ನು ಆಯೋಜಿಸಿ ಪಂಚತಂತ್ರದಲ್ಲಿ ಎಲ್ಲಾ ಮಾಹಿತಿಯನ್ನು ಅಳವಡಿಸಬೇಕು.

ಅಧಿಕಾರಿಗಳು ಯಾವುದೇ ಲೋಪವೆಸಗೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಕಾರ್ಯದರ್ಶಿ ಕೊರಮ ತಿಮ್ಮಪ್ಪ. ಜಿಪಂ‌ ಯೋಜನಾಧಿಕಾರಿ ಸತೀಶ್ ರೆಡ್ಡಿ. ಕಾರ್ಯಪಾಲಕ ಅಭಿಯಂತರ (ಪಂ.ರಾ) ಹನುಮಂತಪ್ಪ. ತಾಪಂ ಇಒ ಹೊನ್ನಯ್ಯ ಜಿ ,ನರೇಗಾ ಸಹಾಯಕ ನಿರ್ದೇಶಕ ಸಂತೋಷ್. ಜಿಲ್ಲಾ ಎ‌.ಡಿ.ಪಿ.ಸಿ,ಜಿಲ್ಲಾ ಐ ಇ.ಸಿ ಹಾಗೂ ಎಡಿ.ಪಿ.ಎಂ.ಯು ಹಾಗೂ ತಾಲ್ಲೂಕಿನ ಎಲ್ಲಾ ಪಿ.ಡಿ.ಓ.ತಾಂತ್ರಿಕ ಸಹಾಯಕರು ತಾ.ಪಂ ಹಾಗೂ ಇತರೆ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page