ಗ್ರಾಮೀಣ ಭಾಗದ ಓವರ್ ಹೆಡ್ ಟ್ಯಾಂಕ್, ಚಿಕ್ಕಟ್ಯಾಂಕ್, ನೆಲ ತೊಟ್ಟಿಗಳು, ಪೈಪ್ ಲೈನ್ ಲಿಕೇಜ್ಸೇರಿ ನೀರಿನ ಸಂಪರ್ಕದ ಸಮಸ್ಯೆ ಇದ್ದಲ್ಲಿಕೂಡಲೇ ಬಗೆಹರಿಸಬೇಕು. ಯಾವುದೇ ಕಾರಣಕ್ಕೂ ಸ್ವಚ್ಚತೆಗೆ ನಿರ್ಲಕ್ಷ್ಯ ವಹಿಸಬಾರದು.ಶಾಸಕ ಟಿ.ರಘುಮೂರ್ತಿ.

by | 21/08/23 | ಸುದ್ದಿ


ತುರನೂರು ಆ.21. ಗ್ರಾಮೀಣ ಪ್ರದೇಶದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯಮಾರಾಟ ಮಡುತ್ತಿದ್ದು ಇದರಿಂದ ಹಳ್ಳಿಗಳಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತಿದ್ದು ಕುಟುಂಬಗಳು ಬೀದಿಗೆ ಬರುವ ಮುನ್ನ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. ಚಿತ್ರದುರ್ಗ ತಾಲೂಕಿನ ಚಳ್ಕಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿಯ
ಗ್ರಾಮದಲ್ಲಿ ತಾಲೂಕು
ಅಧಿಕಾರಿಗಳ ಸಮ್ಮುಖದಲ್ಲಿ ಹೋಬಳಿ ಮಟ್ಟದ“ಜನಸ್ಪಂದನ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯಮಾರಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಶಾಲಾ ಕಾಲೇಜ್ ಸಾರ್ವಜನಿಕ ಸ್ಥಳಗಳು ಕುಡುಕರ ಹಡ್ಡೆಗಳಾಗಿವೆ. ನಾನು ಶಾಸಕನಾಗಿ ಹತ್ತು ವರ್ಷಗಳು ಕಳೆದರೂ ಕ್ಷೇತ್ರದಲ್ಲಿ ಹೊಸ ಮದ್ಯದ ಅಂಗಡಿ ಹಾಗೂ ಸ್ಥಳಾಂತರ ಮಾಡಲು ಬಿಟ್ಟಿಲ್ಲ ಅಂತದರಲ್ಲಿ ಎಗ್ಗೆಲ್ಲದೆ ಅಕ್ರಮ ಮದ್ಯಮಾರಾಟವಾಗುತ್ತಿದ್ದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳ ಹಾಗೂ ಚರಂಡಿಗಳ ಸಚವಚ್ಚತೆಗೆ ಅಧಿಕಾರಿಗಳು ತೆರಳಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು. ಕೆಲಸ ಮಾಡದೆ ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧಮುಲಾಜಿಲ್ಲದೇ ಕ್ರಮ ಜರುಗಿಸುತ್ತೇನೆ
ಎಂದು‌ಅಧಿಕಾರಿಗಳಿಗೆ ಖಡಕ್ಸೂ‌ಚನೆ ನೀಡಿದರು.
ಇಂದು ನನ್ನ ಕ್ಷೇತ್ರದಲ್ಲಿ ಎಂಎಸ್ಎಲ್ ಮತ್ತು ಹಳೆ ಬಾರ್
ಗಳು ಬಿಟ್ಟು ಕಳೆದ ಹತ್ತು ವರ್ಷದಲ್ಲಿ ಒಂದು ಸಹ‌ಹೊಸ ಬಾರ್ ಪರವಾನಗಿ ನೀಡಿಲ್ಲ.ಆದರೆ‌ಹಳ್ಳಿಗಳಲ್ಲಿ ಗೂಡು ಅಂಗಡಿಗಳಲ್ಲಿ ಮಧ್ಯ‌ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು
ಬರುತ್ತಿದ್ದು ಅಂತವರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿಬೇಕು ಎಂದರು.
ಗ್ರಾಮೀಣ ಭಾಗದ ಓವರ್ ಹೆಡ್ ಟ್ಯಾಂಕ್, ಚಿಕ್ಕಟ್ಯಾಂಕ್, ನೆಲ ತೊಟ್ಟಿಗಳು, ಪೈಪ್ ಲೈನ್ ಲಿಕೇಜ್ಸೇರಿ ನೀರಿನ ಸಂಪರ್ಕದ ಸಮಸ್ಯೆ ಇದ್ದಲ್ಲಿಕೂಡಲೇ ಬಗೆಹರಿಸಬೇಕು. ಯಾವುದೇ
ಕಾರಣಕ್ಕೂ ಸ್ವಚ್ಚತೆಗೆ ನಿರ್ಲಕ್ಷ್ಯ ವಹಿಸಬಾರದು.ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು. ಬಯಲು ಶೌಚದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.ಕಾಮಗಾರಿಗಳನ್ನ ಪೂರ್ಣಗೊಳಿಸಲು ಸೂಚನೆ:
ತುರುವನೂರು ಹೋಬಳಿಯಲ್ಲಿ ಅರ್ಧಕ್ಕೆ ಸ್ಥಗಿತವಾಗಿರುವ ಕಾಮಗಾರಿ ಶೀಘ್ರವಾಗಿ‌ ಪೂರ್ಣಗೊಳಿಸಬೇಕು. ಕಾಮಗಾರಿಗೆ ಅಡೆತಡೆ‌ಇದ್ದರೆ ನೇರವಾಗಿ ನನ್ನ ಗಮನಕ್ಕೆ ತಂದರೆ
ಸರಿಪಡಿಸಿ ಕಾಮಗಾರಿ ಪೂರ್ಣಗೊಳಿಸಲು‌ ಸಹಕಾರ ನೀಡುತ್ತೇನೆ. ಅಧಿಕಾರಿಗಳು ಕೆಲಸ ಮಾಡದೇ ನೆಪ ಹೇಳಿದರೆ ನಾನು ಸುಮ್ಮನಿರಲ್ಲಎಲ್ಲಾ ಇಲಾಖೆಯವರು ತಮ್ಮ ಕೆಲಸ
ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಕುರಿ ಕಳ್ಳರ ಬಗ್ಗೆ ನಿಗಾ ವಹಿಸಿ: ತುರುವನೂರು ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳರ ಹಿಡಿಯಲು ಪೋಲಿಸ್ ಇಲಾಖೆ ಗಮನ ಹರಿಸಬೇಕು. ಒಂದು ಕುರಿ ಕಳ್ಳತನ ಕೇಸ್ ಏನು‌ ಅಂತ ಅಸಡ್ಡೆ ತೋರದೆ ಕೇಸ್ ದಾಖಲಿಸಿಕೊಂಡು
ಕಳ್ಳರಿಗೆ ಬಲೆ ಬೀಸಿ ಹಿಡಿಯಬೇಕು ಮತ್ತು ಇಂತಹ
ಪ್ರಕರಣಗಳು ಮರುಕಳಿಸಬಾರದು ಎಂದರು.ಸ್ಮಶಾನ ಸಮಸ್ಯೆ, ರಸ್ತೆ ಸಮಸ್ಯೆ, ನಿವೇಶನ‌ ಸಮಸ್ಯೆಗಳು, ಹೊಲದ ರಸ್ತೆಗಳು, ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಪಿಂಚಣಿ, 94
ಸಿ ಹಕ್ಕು ಪತ್ರ ಸೇರಿ ಯಾವುದೇ ಸಮಸ್ಯೆಗಳು
ಇದ್ದರು ಕೂಡಲೇ ಗಮನ ಹರಿಸಿ‌ ಇತ್ಯರ್ಥಗೊಳಿಸಬೇಕು. ಎಲ್ಲವನ್ನು ಇಓ ಅಧಿಕಾರಿಗಳ ನಿರಂತರ ಸಂಪರ್ಕದ ಮೂಲಕ
ಬಗೆಹರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗವೇಣಿ,
ತಾಲೂಕು ಪಂಚಾಯತಿ ಇಓ ಹನುಮಂತಪ್ಪಡಿವೈಎಸ್ಪಿ ಅನಿಲ್ ಕುಮಾರ್,ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕ
ಪ್ರಭಾಕರ್, ಗ್ರಾ.ಪಂ. ಅಧ್ಯಕ್ಷೆ ದೀಪಾ ಮಹೇಶ್,ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಾರ್ವಜನಿಕರು
ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page