ತುರನೂರು ಆ.21. ಗ್ರಾಮೀಣ ಪ್ರದೇಶದಲ್ಲಿ ಎಗ್ಗಿಲ್ಲದೆ ಅಕ್ರಮ ಮದ್ಯಮಾರಾಟ ಮಡುತ್ತಿದ್ದು ಇದರಿಂದ ಹಳ್ಳಿಗಳಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡುತ್ತಿದ್ದು ಕುಟುಂಬಗಳು ಬೀದಿಗೆ ಬರುವ ಮುನ್ನ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಅಧಿಕಾರಿಗಳಿಗೆ ಶಾಸಕ ಟಿ.ರಘುಮೂರ್ತಿ ತಾಕೀತು ಮಾಡಿದರು. ಚಿತ್ರದುರ್ಗ ತಾಲೂಕಿನ ಚಳ್ಕಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತುರುವನೂರು ಹೋಬಳಿಯ
ಗ್ರಾಮದಲ್ಲಿ ತಾಲೂಕು
ಅಧಿಕಾರಿಗಳ ಸಮ್ಮುಖದಲ್ಲಿ ಹೋಬಳಿ ಮಟ್ಟದ“ಜನಸ್ಪಂದನ” ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯಮಾರಟದ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿದ್ದು ಶಾಲಾ ಕಾಲೇಜ್ ಸಾರ್ವಜನಿಕ ಸ್ಥಳಗಳು ಕುಡುಕರ ಹಡ್ಡೆಗಳಾಗಿವೆ. ನಾನು ಶಾಸಕನಾಗಿ ಹತ್ತು ವರ್ಷಗಳು ಕಳೆದರೂ ಕ್ಷೇತ್ರದಲ್ಲಿ ಹೊಸ ಮದ್ಯದ ಅಂಗಡಿ ಹಾಗೂ ಸ್ಥಳಾಂತರ ಮಾಡಲು ಬಿಟ್ಟಿಲ್ಲ ಅಂತದರಲ್ಲಿ ಎಗ್ಗೆಲ್ಲದೆ ಅಕ್ರಮ ಮದ್ಯಮಾರಾಟವಾಗುತ್ತಿದ್ದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಗ್ರಾಪಂ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳ ಹಾಗೂ ಚರಂಡಿಗಳ ಸಚವಚ್ಚತೆಗೆ ಅಧಿಕಾರಿಗಳು ತೆರಳಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು. ಕೆಲಸ ಮಾಡದೆ ಜನರನ್ನು ಅಲೆದಾಡಿಸುವ ಅಧಿಕಾರಿಗಳ ವಿರುದ್ಧಮುಲಾಜಿಲ್ಲದೇ ಕ್ರಮ ಜರುಗಿಸುತ್ತೇನೆ
ಎಂದುಅಧಿಕಾರಿಗಳಿಗೆ ಖಡಕ್ಸೂಚನೆ ನೀಡಿದರು.
ಇಂದು ನನ್ನ ಕ್ಷೇತ್ರದಲ್ಲಿ ಎಂಎಸ್ಎಲ್ ಮತ್ತು ಹಳೆ ಬಾರ್
ಗಳು ಬಿಟ್ಟು ಕಳೆದ ಹತ್ತು ವರ್ಷದಲ್ಲಿ ಒಂದು ಸಹಹೊಸ ಬಾರ್ ಪರವಾನಗಿ ನೀಡಿಲ್ಲ.ಆದರೆಹಳ್ಳಿಗಳಲ್ಲಿ ಗೂಡು ಅಂಗಡಿಗಳಲ್ಲಿ ಮಧ್ಯಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು
ಬರುತ್ತಿದ್ದು ಅಂತವರ ವಿರುದ್ಧ ಅಬಕಾರಿ ಇಲಾಖೆ ಅಧಿಕಾರಿಗಳು ಕೇಸ್ ದಾಖಲಿಸಿಬೇಕು ಎಂದರು.
ಗ್ರಾಮೀಣ ಭಾಗದ ಓವರ್ ಹೆಡ್ ಟ್ಯಾಂಕ್, ಚಿಕ್ಕಟ್ಯಾಂಕ್, ನೆಲ ತೊಟ್ಟಿಗಳು, ಪೈಪ್ ಲೈನ್ ಲಿಕೇಜ್ಸೇರಿ ನೀರಿನ ಸಂಪರ್ಕದ ಸಮಸ್ಯೆ ಇದ್ದಲ್ಲಿಕೂಡಲೇ ಬಗೆಹರಿಸಬೇಕು. ಯಾವುದೇ
ಕಾರಣಕ್ಕೂ ಸ್ವಚ್ಚತೆಗೆ ನಿರ್ಲಕ್ಷ್ಯ ವಹಿಸಬಾರದು.ಜನರಲ್ಲಿ ಸ್ವಚ್ಚತೆಯ ಬಗ್ಗೆ ಅರಿವು ಮೂಡಿಸಬೇಕು. ಬಯಲು ಶೌಚದ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.ಕಾಮಗಾರಿಗಳನ್ನ ಪೂರ್ಣಗೊಳಿಸಲು ಸೂಚನೆ:
ತುರುವನೂರು ಹೋಬಳಿಯಲ್ಲಿ ಅರ್ಧಕ್ಕೆ ಸ್ಥಗಿತವಾಗಿರುವ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು. ಕಾಮಗಾರಿಗೆ ಅಡೆತಡೆಇದ್ದರೆ ನೇರವಾಗಿ ನನ್ನ ಗಮನಕ್ಕೆ ತಂದರೆ
ಸರಿಪಡಿಸಿ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡುತ್ತೇನೆ. ಅಧಿಕಾರಿಗಳು ಕೆಲಸ ಮಾಡದೇ ನೆಪ ಹೇಳಿದರೆ ನಾನು ಸುಮ್ಮನಿರಲ್ಲಎಲ್ಲಾ ಇಲಾಖೆಯವರು ತಮ್ಮ ಕೆಲಸ
ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಕುರಿ ಕಳ್ಳರ ಬಗ್ಗೆ ನಿಗಾ ವಹಿಸಿ: ತುರುವನೂರು ವ್ಯಾಪ್ತಿಯಲ್ಲಿ ಕುರಿ ಕಳ್ಳತನ ಹೆಚ್ಚುತ್ತಿದ್ದು ಕಳ್ಳರ ಹಿಡಿಯಲು ಪೋಲಿಸ್ ಇಲಾಖೆ ಗಮನ ಹರಿಸಬೇಕು. ಒಂದು ಕುರಿ ಕಳ್ಳತನ ಕೇಸ್ ಏನು ಅಂತ ಅಸಡ್ಡೆ ತೋರದೆ ಕೇಸ್ ದಾಖಲಿಸಿಕೊಂಡು
ಕಳ್ಳರಿಗೆ ಬಲೆ ಬೀಸಿ ಹಿಡಿಯಬೇಕು ಮತ್ತು ಇಂತಹ
ಪ್ರಕರಣಗಳು ಮರುಕಳಿಸಬಾರದು ಎಂದರು.ಸ್ಮಶಾನ ಸಮಸ್ಯೆ, ರಸ್ತೆ ಸಮಸ್ಯೆ, ನಿವೇಶನ ಸಮಸ್ಯೆಗಳು, ಹೊಲದ ರಸ್ತೆಗಳು, ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಪಿಂಚಣಿ, 94
ಸಿ ಹಕ್ಕು ಪತ್ರ ಸೇರಿ ಯಾವುದೇ ಸಮಸ್ಯೆಗಳು
ಇದ್ದರು ಕೂಡಲೇ ಗಮನ ಹರಿಸಿ ಇತ್ಯರ್ಥಗೊಳಿಸಬೇಕು. ಎಲ್ಲವನ್ನು ಇಓ ಅಧಿಕಾರಿಗಳ ನಿರಂತರ ಸಂಪರ್ಕದ ಮೂಲಕ
ಬಗೆಹರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗವೇಣಿ,
ತಾಲೂಕು ಪಂಚಾಯತಿ ಇಓ ಹನುಮಂತಪ್ಪಡಿವೈಎಸ್ಪಿ ಅನಿಲ್ ಕುಮಾರ್,ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪ ನಿರ್ದೇಶಕ
ಪ್ರಭಾಕರ್, ಗ್ರಾ.ಪಂ. ಅಧ್ಯಕ್ಷೆ ದೀಪಾ ಮಹೇಶ್,ಉಪಾಧ್ಯಕ್ಷ ಆರ್.ತಿಪ್ಪೇಸ್ವಾಮಿ, ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಮತ್ತು ಸಾರ್ವಜನಿಕರು
ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments