ಹಿರಿಯೂರು :
ನಮ್ಮ ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ರೈತರಿಗೆ ಈ ಸ್ವತ್ತು ಮಾಡಿಸಿಕೊಡದೆ ತಿಂಗಳಗಟ್ಟಲೆ ಕಾಯಿಸುತ್ತಾರೆ ಮತ್ತು ಯಾವ ಗ್ರಾಮ ಪಂಚಾಯಿತಿಯವರೂ ಈ ಸ್ವತ್ತು ಮಾಡದೆ ಖಾಸಗಿ ಕಂಪ್ಯೂಟರ್ ನಲ್ಲಿ ಮಾಡಿಸಬೇಕಾಗಿದೆ ಎಂಬುದಾಗಿ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಕೆ.ಟಿ.ತಿಪ್ಪೇಸ್ವಾಮಿ ಆರೋಪಿಸಿದ್ದಾರೆ.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ರೈತ ಸಂಘದ ಪದಾಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಈ ಸ್ವತ್ತು ಮಾಡಿಸಲು ಸರ್ಕಾರದ ನಿಯಮದ ಪ್ರಕಾರ ಕೇವಲ 50 ರೂ ಧರ ವಿಧಿಸಬಹುದಾಗಿದ್ದು, ಆದರೆ ಈ ಸ್ವತ್ತು ಖಾತೆ ಮಾಡಲು 10 ಸಾವಿರದಿಂದ 1 ಲಕ್ಷದವರೆಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದಾರೆ ಈ ದಂದೆ ಮೊದಲು ನಿಲ್ಲಬೇಕು ಮತ್ತು ಗ್ರಾಮ ಪಂಚಾಯಿತಿಯಲ್ಲಿ ಈ ಸ್ವತ್ತು ಕೆಲಸ ಕಡ್ಡಾಯವಾಗಿ ಮಾಡಬೇಕು ಎಂಬುದಾಗಿ ಅವರು ಒತ್ತಾಯಿಸಿದ್ದಾರೆ.
ವಿವಿಧ ವಸತಿ ಯೋಜನೆಯಲ್ಲಿ ಬಡವರಿಗೆ ನಿರ್ಗತಿಕರಿಗೆ ಸೂರು ಕಲ್ಪಿಸುವ ಸರ್ಕಾರದ ಯೋಜನೆಯಲ್ಲಿ ನಮ್ಮ ತಾಲೂಕಿನಲ್ಲಿ ಸಾವಿರಾರು ಬೋಗಸ್ ಬಿಲ್ ಆಗಿರುತ್ತದೆ ಇದರ ಬಗ್ಗೆ ತನಿಖೆ ನಡೆಸಲು ನಾಲ್ಕು ಬಾರಿ ಗ್ರಾಮ ಪಂಚಾಯಿತಿಗೆ ನೋಟಿಸ್ ನೀಡಿದರು ಇದುವರೆಗೂ ಯಾವುದೇ ಉತ್ತರ ಕೊಡದೆ ಮೌನವಾಗಿರುತ್ತಾರೆ ಕೂಡಲೇ ಇದರ ಬಗ್ಗೆ ತನಿಕೆ ನಡೆಸಿ ತಪ್ಪಿಸಸ್ಥ ಅಧಿಕಾರಿಗಳ ವಿರುದ್ಧ ಸೂಕ್ತಕ್ರಮ ಜರುಗಿಸಬೇಕು
ಜೊತೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಕೈಗಾರಿಕೆಗಳು ಮತ್ತು ವಾಣಿಜ್ಯ ಉತ್ಪಾದಕ ಕಂಪನಿಗಳಿಂದ ತೆರಿಗೆ ವಸೂಲಾತಿ ಮಾಡದೆ ಕಂಪನಿಯವರು ಶಾಮೀಲಾಗಿ ಲಕ್ಷಾಂತರ ತೆರಿಗೆ ವಸೂಲಾತಿ ಮಾಡಲಾಗುತ್ತಿಲ್ಲ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅನೇಕ ಕಾಮಗಾರಿಗಳ ಕೆಲಸ ಮಾಡದೆ ಬಿಲ್ ಮಾಡಿಕೊಂಡಿರುತ್ತಾರೆ ಇದರ ಬಗ್ಗೆ ಕೂಡ ಸಮಗ್ರ ತನಿಖೆ ನಡೆಸಬೇಕು ಎಂಬುದಾಗಿ ಅವರು ಒತ್ತಾಯಿಸಿದರು.
ನಮ್ಮ ತಾಲೂಕಿನಲ್ಲಿ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿವ ನೀರಿನ ಘಟಕಗಳು ಕೆಟ್ಟು ಹೋಗಿದ್ದು, ಗ್ರಾಮೀಣ ಭಾಗದ ರೈತರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿರುತ್ತದೆ ಸುಮಾರು 50 ಆರ್ ಓ ಪ್ಲಾಂಟ್ ಗಳು ಕಾರ್ಯನಿರ್ವಹಿಸುತ್ತಿಲ್ಲ, ಮುಂದುವರಿದು ಗ್ರಾಮಗಳಲ್ಲಿ ನೈರ್ಮಲ್ಯ ಕೆಲಸ ಮಾಡದೆ ಬ್ಲೀಚಿಂಗ್ ಪೌಡರ್, ಪೆನಾಯಿಲ್ ಸಿಂಪಡಿಸದೇ ಬಿಲ್ ಪಾವತಿ ಮಾಡಿಕೊಂಡಿರುತ್ತಾರೆ ಎಂಬುದಾಗಿ ಅವರು ಆಪಾದಿಸಿದರು.
ರೈತರ ಮನವಿಗೆ ಸ್ಪಂದಿಸಿದ ತಾಲೂಕು ಪಂಚಾಯತಿಯ ಕಾರ್ಯನಿರ್ವಹಣಾ ಅಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಮಾಡಿದರಲ್ಲದೆ, ಇನ್ನು ಮುಂದೆ ಪಂಚಾಯತಿಯಲ್ಲಿಯೇ ಕಡ್ಡಾಯವಾಗಿ ಈಸ್ವತ್ತು ಮಾಡಿಕೊಡಬೇಕು, ವಾಣಿಜ್ಯ ಕಂಪನಿಗಳಿಗೆ ನೋಟಿಸ್ ನೀಡಿ, ಕಂದಾಯ ವಸೂಲಾತಿ ಮಾಡಬೇಕು, ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಬೇಕು.
ಅಲ್ಲದೆ ವಸತಿ ಯೋಜನೆ ಮನೆಗಳ ಬಗ್ಗೆ ತನಿಖೆ ನಡೆಸಿ, ಒಂದು ತಿಂಗಳ ಒಳಗಾಗಿ ವರದಿ ನೀಡಲು ಸೂಚಿಸಿದರಲ್ಲದೆ, ಮುಂದಿನ ಸಭೆಗಳಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂಬುದಾಗಿ ರೈತಮುಖಂಡರುಗಳಿಗೆ ಭರವಸೆ ನೀಡಿದರು. ಈ ಸಭೆಯಲ್ಲಿ ರೈತಮುಖಂಡರುಗಳಾದ ಆಲೂರು ಸಿದ್ದರಾಮಣ್ಣ, ತಿಮ್ಮಾರೆಡ್ಡಿ, ರಂಗಸ್ವಾಮಿ, ಶಿವಣ್ಣ ಮತ್ತು ವಿವಿಧ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments