ಚಂದ್ರಾ ಲೇಔಟ್ ನಾಗರೀಕರಿಗೆ ರಸ್ತೆ ಸಂಪರ್ಕ ಕಲ್ಪಿಸಲು ನೂತನ ಜಿಲ್ಲಾಧಿಕಾರಿಗಳಿಗೆ ಮನವಿ

by | 15/02/24 | ಸುದ್ದಿ


ಹಿರಿಯೂರು :
ವೇದಾವತಿ ನಗರದ 3 ನೇ ವಾರ್ಡ್ ಚಂದ್ರಾ ಲೇ ಔಟ್ ನಾಗರೀಕರಿಗೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ನಾಗರೀಕರ ಸಂಚಾರಕ್ಕೆ ರಸ್ತೆಯನ್ನು ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ವಿ.ರಂಗನಾಥ್ ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪತ್ರದ ಮೇರೆಗೆ ನಗರಸಭೆ ಅಧಿಕಾರಿಗಳು ಒತ್ತುವರಿ ರಸ್ತೆ ತೆರವು ಮಾಡಿಸಿ ಬ್ಲಾಕ್ ಚರಂಡಿ ನಿರ್ಮಿಸಿದ್ದು, ರಸ್ತೆ ಮದ್ಯದಲ್ಲಿರುವ ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿಕೊಡಲು ಸಂಬಂಧಿಸಿದ ನಗರಸಭೆ ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಮಾಡಿದ್ದೇವೆ, ಆದಾಗ್ಯೂ ಇಲ್ಲಿಯತನಕ ರಸ್ತೆ ಸಂಪರ್ಕ ಕಲ್ಪಿಸಲು ಸಾಧ್ಯವಾಗದೆ ನಾಗರಿಕರಿಗೆ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.
ಚಂದ್ರಾ ಲೇ ಔಟ್ ನಾಗರಿಕರಿಗೆ ಯಾವುದೇ ದಿಕ್ಕಿನಿಂದ ಶಾಶ್ವತ ರಸ್ತೆ ಇರುವುದಿಲ್ಲ, ಅರ್ಧ ಕಿಲೋ ಮೀಟರ್ ನಲ್ಲಿ ಸಿಗುವ ಮುಖ್ಯರಸ್ತೆ ತಲುಪಲು ಸುತ್ತಿ ಬಳಸಿ 2 ಕಿಲೋ ಮೀಟರ್ ಕ್ರಮಿಸಿ ಮುಖ್ಯ ರಸ್ತೆ ತಲುಪುವಂತಾಗಿದೆ. ವಯೋವೃದ್ಧರು, ವಿಕಲ ಚೇತನರು, ಶಾಲಾ ಕಾಲೇಜು ಮಕ್ಕಳಿಗೆ ನಗರಕ್ಕೆ ಹೋಗಿ ಬರಲು ಸೂಕ್ತರಸ್ತೆ ಸಂಪರ್ಕ ಇರುವುದಿಲ್ಲ,
ಅಲ್ಲದೆ ರಾತ್ರಿ ಸಮಯದಲ್ಲಿ ತುರ್ತು ಚಿಕಿತ್ಸೆಗೆ ಹೋಗಿ ಬರಲು ಆಟೋರಿಕ್ಷಾ,ಆಂಬುಲೆನ್ಸ್ ಕೂಡ ಮನೆ ಹತ್ತಿರ ಬರುವುದಿಲ್ಲ,ಸೀಮೆಜಾಲಿ,ಪಾರ್ಥೇನಿಯಂ ಬೆಳೆದು ನಿಂತಿರುವ ತಗ್ಗು ಗುಂಡಿ ರಸ್ತೆಯಲ್ಲಿ ಕಲ್ಲು ಮುಳ್ಳು,ಹಾವು ಚೇಳು, ವಿಷ ಜಂತುಗಳ ನಡುವೆ ಜೀವದ ಹಂಗು ತೊರೆದು ಓಡಾಡಬೇಕಾಗಿದೆ ಎಂದರಲ್ಲದೆ,
ಮಳೆಗಾಲ ಬಂತೆಂದರೆ ಕೆಸರುಗದ್ದೆ ರಸ್ತೆಯಲ್ಲಿ ಓಡಾಡಲು ತೊಂದರೆ ಆಗುತ್ತದೆ,ಪ್ರಯುಕ್ತ ನೂತನ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿ ತ್ವರಿತವಾಗಿ ರಸ್ತೆ ಸಂಪರ್ಕ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ.
ಕುಡಿಯುವ ನೀರಿನ ಪೈಪ್ ಚರಂಡಿ ಮೂಲಕ ಹಾದು ಹೋಗಿದೆ ಅಕಸ್ಮಾತ್ ಪೈಪ್ ಒಡೆದು ಹೋದರೆ ಕೊಳಚೆ ನೀರು ಪೂರೈಕೆಯಾಗುವ ಸಾಧ್ಯತೆ ಇರುತ್ತದೆ. ಪೈಪ್ ಲೈನ್ ಮೇಲೆ ಕಾಂಕ್ರೀಟು ಹಾಕಿಸಬೇಕೆಂದು ತಿಳಿಸಿರುತ್ತಾರೆ.
ಈ ಸಂದರ್ಭದಲ್ಲಿ ನಾಗರೀಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ವಿ.ರಂಗನಾಥ್, ಅಧ್ಯಕ್ಷ ಸಂತೋಷ ರಾಥೋಡ್, ಉಪಾಧ್ಯಕ್ಷ ಸ್ವಾಮಿ,ಕಾರ್ಯದರ್ಶಿ ಸಿಜಿಗೌಡ ಉಪಸ್ಥಿತರಿದ್ಧರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page