ಚಿತ್ರದುರ್ಗ ಡಿ.26: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜನವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಚಳ್ಳಕೆರೆಯ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಹಿಂದೆ ಡಿಸೆಂಬರ್ 27 ರಂದು ಏರ್ಪಡಿಸಲು ಉದ್ದೇಶಿಸಲಾಗಿದ್ದ ಜಿಲ್ಲಾ ಮಟ್ಟದ ಜನತಾ ದರ್ಶನವನ್ನು ಚಳ್ಳಕೆರೆ ತಹಶಿಲ್ದಾರ ವರದಿ ಅನ್ವಯ ಜನವರಿ 6 ಕ್ಕೆ ಮುಂದೂಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸಾರ್ವಜನಿಕರ ಕುಂದು ಕೊರತೆಗಳನ್ನು ಸ್ಥಳೀಯ ಮಟ್ಟದಲ್ಲಿ ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು ಜಿಲ್ಲಾಮಟ್ಟದ ಜನತಾ ದರ್ಶನ ಏರ್ಪಡಿಸಲಾಗುತ್ತಿದೆ.
ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು, ಜನಪ್ರತಿನಿಧಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುವರು. ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದು ಸ್ವೀಕೃತಿ ನೀಡುವ ಸಲುವಾಗಿ ಸಮರ್ಪಕ ರೀತಿಯಲ್ಲಿ ಕೌಂಟರ್ಗಳ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದುಕೊರತೆ ಕುರಿತ ಅಹವಾಲು, ಅರ್ಜಿಗಳನ್ನು ಜನವರಿ 6 ರಂದು ಜರಗುವ ಜನತಾ ದರ್ಶನದಲ್ಲಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments