ಚಳ್ಳಕೆರೆ ತೋಟಗಾರಿಖೆ ಇಲಾಖೆಯಲ್ಲಿ ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನ.

by | 25/10/23 | ಆರ್ಥಿಕ

ಚಳ್ಳಕೆರೆ ಅ25 ತೋಟಗಾರಿಕೆ ಬೆಳೆಗಾರರಿಗೆ ಹನಿ ನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್. ವಿರೂಪಾಕ್ಷಪ್ಪ ತಿಳಿಸಿದ್ದಾರೆ.


ಪ್ರಸಕ್ತ ಸಾಲಿನಲ್ಲಿ ಹನಿನೀರಾವರಿ ಪದ್ದತಿಯನ್ನು ರೈತರ ಅಳವಡಿಸಿಕೊಳ್ಳಲು ತಾಲ್ಲೂಕಿನ ಎಸ್ ಸಿ.ಎಸ್ ಟಿ ರೈತರಿಗೆ ಶೇ 90 ರಷ್ಟು ಸಹಾಯಧನ, ಸಾಮಾನ್ಯ ವರ್ಗಕ್ಕೆ ಶೇ 70ರಷ್ಟು ಸಹಾಯಧನ ನೀಡಲಾಗುವುದು, ಎಸ್‌ಸಿ ಜನಾಂಗದ ರೈತರಿಗೆ 20 ಲಕ್ಷ , ಸಾಮಾನ್ಯ ವರ್ಗ ರೈತರಿಗೆ ೪೦೦ ಲಕ್ಷ ಗುರಿ ನೀಡಲಾಗಿದೆ. ಎಸ್‌ಟಿ ರೈತರಿಗೆ ಹನಿನೀರಾವರಿರಿ ಪದ್ದತಿ ಅಳವಡಿಕೊಳ್ಳಲು ಅನುದಾನ ಬಿಡುಗಡೆಯಾಗಿಲ್ಲ, ಇವರು ಅರ್ಜಿ ಸಲ್ಲಿಸಲು ಬರುವುದಿಲ್ಲ ಎಂದು ಸ್ವಷ್ಟನೆ ನೀಡಿದ್ದಾರೆ.
ಎಸ್‌ಸಿ, ಸಾಮಾನ್ಯ ವರ್ಗ ರೈತರು ಹನಿನೀರಾವರಿ ಪದ್ದತಿ ಅಳವಡಿಸಿಕೊಳ್ಳಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರೈತರು ಪಹಣಿ, ಆಧಾರ್ ಕಾರ್ಡ್, ಪಾಸ್ ಬುಕ್, ಜಾತಿ ಪ್ರಮಾಣ ಪತ್ರದೊಂದಿಗೆ ತೋಟಗಾರಿಕೆ ಇಲಾಖೆ ಅರ್ಜಿ ಸಲ್ಲಿಸಿ, ರೈತರು ಅನುಮೋದಿತ ಕಂಪನಿಯಿAದ ಹನಿನೀರಾವರಿ ಪದ್ದತಿ ಅಳವಡಿಕೊಂಡು ಸಹಾಯಧನ ಪಡೆಬಹುದುಕೊಳ್ಳಬಹುದು ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ ತೋಟಗಾರಿಕೆ ಬೆಳೆ ಬೆಳೆಯು ರೈತರಲ್ಲಿ ಮನವಿ ಮಾಡಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *