ಚಳ್ಳಕೆರೆ ಪೋಲಿಸ್ ಇಲಾಖೆಯ ನೇತೃತ್ವದಲ್ಲಿ ನಶೆಮುಕ್ತ ಚಳ್ಳಕೆರೆ ನಗರವನ್ನಾಗಿ ಮಾಡಲು ಸಾರ್ವಜನಿಕರಿಗೆ ಜಾಗೃತಿ ಜಾಥ ಕಾರ್ಯಕ್ರಮ.

by | 08/01/24 | ಕಾನೂನು


ಚಳ್ಳಕೆರೆ ಜ.8 ಪೊಲೀಸ್ ಉಪಾಧೀಕ್ಷರ ಕಚೇರಿ ಉಪ ವಿಭಾಗ ಚಳ್ಳಕೆರೆ. ಚಳ್ಳಕೆರೆ ಪೊಲೀಸ್ ಠಾಣೆ ಇವರುಗಳ ಸಂಯುಕ್ತ ಆಶ್ರಯದಲ್ಲಿ “ನಶೆಮುಕ್ತ ಚಿತ್ರದುರ್ಗ – ನಶೆಮುಕ್ತ ಚಳ್ಳಕೆರೆ” ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಇತ್ತೀಚಿಗೆ ವಿದ್ಯಾರ್ಥಿಗಳು ಹಾಗೂ ಯುವ ಜನಾಂಗದವರಲ್ಲಿ ಮಾದಕ ವ್ಯಸನ ಹವ್ಯಾಸವಾಗಿ ಸಮಾಜದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಾಗುತ್ತಿರುವುದರ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ರವರ ನಿರ್ದೇಶನದ ಮೇರೆಗೆ ಚಳ್ಳಕೆರೆ ನಗರದಲ್ಲಿ “ನಶೆ ಮುಕ್ತ ಚಿತ್ರದುರ್ಗ – ನಶೆ ಮುಕ್ತ ಚಳ್ಳಕೆರೆ” ಘೋಷಣೆಯಡಿ ನಗರದ ಪ್ರಮುಖ ಬೀದಿಗಳಲ್ಲಿ “ಜಾಗೃತಿ ಜಾಥ” ನಡೆಸಲಾಯಿತು.


ನಂತರ ನಗರದ ವಾಲ್ಮೀಕು ವೃತ್ತದಲ್ಲಿ ಜಾಥ ಕಾರ್ಯಕ್ರಮಕ್ಕೆ ಡಿವೈಎಸ್ಪಿ ರಾಜಣ್ಣ ಮಾತನಾಡಿ ಇತ್ತೀಚಿಗೆ ಯುವಕರು, ವಿದ್ಯಾರ್ಥಿಗಳು, ಪಾಶ್ಚಿಮಾತ್ಯರ ಸೋಗಿನಲ್ಲಿ ಅನುಕರಣೆಗಳನ್ನು ಅನುಸರಿಸಿ ಮಾದಕ ವ್ಯಸನದ ವಸ್ತುಗಳಿಗೆ ದಾಸರಾಗುತ್ತಿರುವುದು ನಿಜಕ್ಕೂ ಶೋಚನೀಯ ಸಂಗತಿ ಎಂದರಲ್ಲದೆ
ಈ ಮಾದಕ ವಸ್ತುಗಳ ಸೇವನೆಯಿಂದ ಧನಹಾನಿ,ಮಾನಹಾನಿ ಮತ್ತು ಪ್ರಾಣಹಾನಿ ಎಂಬುದನ್ನು ಮರೆತು ಕ್ಷಣಿಕ ಸುಖಕ್ಕಾಗಿ ಹಾತೊರೆಯುತ್ತಿರುವುದು ತುಂಬಾ ಕಳವಳಕಾರಿಯಾದ ವಿಷಯವಾಗಿದ್ದು ಈ ದೇಶದ ಭವಿಷ್ಯ ನಿರ್ಮಿಸುವ ಹೊಣೆಗಾರಿಕೆ ಇರುವ ಯುವಕರು ಹಾಗೂ ವಿದ್ಯಾರ್ಥಿಗಳು ಮಾದಕ ವ್ಯಸನದಂತಹ ಅಪರಾಧಿ ಚಟುವತಿಕೆಗಳಿಂದ ದೂರ ಉಳಿಯಬೇಕು ಎಂದರು.


ಈ ನಿಟ್ಟಿನಲ್ಲಿ ನಮ್ಮ ಸಮಾಜದ ಯುವಕ ಯುವತಿಯರು ತಮ್ಮ ಅಮೂಲ್ಯವಾದ ಸಮಯವನ್ನು ವಿದ್ಯಾರ್ಜನೆ, ಆಧ್ಯಾತ್ಮಿಕ, ಯೋಗ, ಕುಟುಂಬ ಪರಿಪಾಲನೆ ಮಾಡುವ ಮೂಲಕ ದೇಶದ ಸತ್ಪ್ರಜೆಗಳಾಗಿ ತಮ್ಮ ಹೆತ್ತ ತಂದೆ ತಾಯಿಗಳಿಗೆ ಹಾಗೂ ಸಮಾಜದ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂಬುದಾಗಿ ಅವರು ಯುವಕ ಯುವತಿಯರಿಗೆ ಕರೆ ನೀಡಿದರು.
ಚಳ್ಳಕೆರೆ ಠಾಣೆ ವೃತ್ತ ನೀರೀಕ್ಷ ದೇಸಾಯಿ ಮಾತಾನಾಡಿ ಮಾದಕ ವಸ್ತುಗಳ ಸೇವಿಸಿದ ವ್ಯಕ್ತಿಗಳಿಂದ ಸಮಾಜದಲ್ಲಿ ಅನೈತಿಕ ಅಪರಾಧ ಚಟುವಟಿಕೆಗಳು ಹೆಚ್ಚಿಸುವ ಕಾರಣ ಯಾವುದೇ ಒತ್ತಡಕ್ಕೆ ಮಣಿಯದೆ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಅಲ್ಲದೆ ಅಪರಾಧಿ ಎಷ್ಟೇ ಬುದ್ಧಿವಂತಿಕೆ ತೋರಿಸಿದರು ಇಲಾಖೆಯ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಆದ್ದರಿಂದ ಇಂದಿನ ಯುವ ಜನಾಂಗ ಹಾಗೂ ಸಾರ್ವಜನಿಕರು ಈ ಮಾದಕ ವಸ್ತುಗಳಿಂದ ದೂರ ಇರಬೇಕು ಎಂಬುದಾಗಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಪಿಎಸ್ ಐ ಗಳಾದ ಸತೀಶ್ ನಾಯ್ಕ.ಧರೆಪ್ಪ.ಪೋಲಿಸ್ ಸಿಬ್ಬಂದಿಗಳು ಹಾಗೂ ಶಾಲಮಕ್ಕಳು ಭಟಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page