ಚಾಮುಂಡಿಬೆಟ್ಟ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ ತಪ್ಪಿದ ಅನಾಹುತ

by | 06/01/23 | ಸುದ್ದಿ

ಮೈಸೂರು ; ಮೈಸೂರಿನ ಚಾಮುಂಡಿ ಬೆಟ್ಟದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ.

ಗುಜರಾತ್ ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ.

ಬಸ್ ಹೊಗೆ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವೈರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *