ಚಿಕ್ಕಮಗಳೂರು ವಕೀಲರ ಮೇಲಿನ ಹಲ್ಲೆ ಖಂಡಿಸಿ ಚಳ್ಳಕೆರೆ ವಕೀಲರ ಸಂಘ ಪ್ರತಿಭಟನೆ.

by | 02/12/23 | ಪ್ರತಿಭಟನೆ

ಚಳ್ಳಕೆರೆ ಡಿ2. ಹೆಲ್ಮೆಟ್ ಹಾಕದ ವಕೀಲರ ಮೇಲೆ ಪೊಲೀಸರು ನಡೆಸಿದ ಹಲ್ಲೆ ಖಂಡಿಸಿದ ಪೋಲಿಸರನ್ನು ಕೂಡಲೆ ಬಂದಿಸುವಂತೆ ಆಗ್ರಹಿಸಿ ತಾಲೂಕು ವಕೀಲರ ಸಂಘ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ವಕೀಲರು, ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆ ನಡೆಸಿದರು. ಚಿಕ್ಕಮಗಳೂರು ವಕೀಲ ಪ್ರೀತಮ್ ಮೇಲೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ ನಮ್ಮ ಪ್ರತಿಭಟನೆ ಹಾಗೂ ಘೋಷಣೆಗಳ ಹಲ್ಲೆ ಮಾಡಿದ ಪೋಲಿಸರ ವಿರುದ್ದ ಮಾತ್ರ ಚಳ್ಳಕೆರೆ ವಕೀಲರ ಸಂಘದ ಎಂದು ಹೇಳಿದರು. ನ್ಯಾಯಾಲಯದಿಂದ ವಾಲ್ಮೀಕಿ ವೃತ್ತ. ಡಾ.ಅಂಬೇಡ್ಕರ್ ವೃತ್ತ .ನೆಹರು ವೃತ್ತದಲ್ಲಿ ಮಾನವ ಸರಪಣಿ ಮಾಡಿ ಹಲ್ಲೆ ಮಾಡಿದ ಪೊಲೀಸರ ಹಾಗೂ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ‌ ಅಕ್ರೋಶ ಹೊರಹಾಕಿದ್ದಾರೆ.

ತಾಲೂಕು ಕಚೇರಿ ಮುಂದೆ ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಎಂ ನಾಗರಾಜು ಮಾತನಾಡಿ ಚಿಕ್ಕಮಗಳೂರು ನಗರದಲ್ಲಿ ವಕೀಲರಾದ ಪ್ರೀತಮ್ ಮೇಲೆ ನಗರ ಠಾಣೆಯ ಪೊಲೀಸರು ಯಾವುದೇ ಕಾರಣವಿಲ್ಲದೆ ಕೇವಲ ಹೆಲ್ಮೆಟ್ ಧರಿಸದ ಕಾರಣವನ್ನು ಮುಂದಿಟ್ಟುಕೊಂಡು ಕಾನೂನುಬಾಹಿರವಾಗಿ ಹಲ್ಲೆ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿ ಅಮಾನವೀಯವಾಗಿ ನಡೆದುಕೊಂಡಿರುವುದು ಖಂಡನೀಯ ಪೊಲೀಸರ ಈ ಕೃತ್ಯಕ್ಕೆ ಸಾಮಾನ್ಯ ಜನರ ಜೀವ ಮತ್ತು ಜೀವನದ ಮೇಲೆ ನಂಬಿಕೆ ಇಲ್ಲದಂತಾಗಿದೆ ಕಾನೂನು ಪಾಲಿಸುವ ವಕೀಲರ ಮೇಲೆ ಇಂತಹ ಘಟನೆ ನಡೆದಿರುವುದು ಸಹಿಸಲು ಸಾಧ್ಯವಿಲ್ಲ ಸರ್ಕಾರ ಹಲ್ಲೆ ನಡೆಸಿದ ಪೊಲೀಸರನ್ನು ಕೇವಲ ಅಮಾನತುಗೊಳಿಸಿ ಆದೇಶ ಹೊರಡಿಸಿದೆ ಇಂತಹ ಕೃತ್ಯ ಎಸಗಿದ ಪೊಲೀಸರನ್ನು ಕೂಡಲೇ ಬಂಧಿಸಿ ಜೈಲಿಗೆ ಕಳಿಸಬೇಕು ವಕೀಲರ ಮೇಲೆ ಇತ್ತೀಚಿನ ದಿನಗಳಲ್ಲಿ ಹಲ್ಲೆ ನಡೆಸುತ್ತಿರುವುದು ವಕೀಲ ವೃತ್ತಿ ನಿರ್ವಹಿಸುತ್ತಿರುವ ವಕೀಲ ವೃಂದಕ್ಕೆ ಆತಂಕದ ವಾತಾವರಣ ಸೃಷ್ಟಿ ಮಾಡುತ್ತಿದ್ದು ಇಂತಹ ಘಟನೆಗಳಿಂದ ವಕೀಲರುಗಳಿಗೆ ರಕ್ಷಣೆ ನೀಡುವ ಕುರಿತು ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರುವಂತೆ ಕಾರ್ಯ ಸೂಚಿಗಳನ್ನು ರಚಿಸುವ ಮೂಲಕ ವಕೀಲರಿಗೆ ರಕ್ಷಣೆ ನೀಡಬೇಕು ತಪ್ಪಿತಸ್ಥರ ವಿರುದ್ಧ ತ್ವರಿತವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ವಕೀಲ ಸಂಘದ ಪದಾಧಿಕಾರಿಗಳಾದ ಸಂಘದ ಉಪಾಧ್ಯಕ್ಷ ಬಿ ಪಾಲಯ್ಯ ಪ್ರಧಾನ ಕಾರ್ಯದರ್ಶಿ ಎಂ ಸಿದ್ದರಾಜು ರಾಮಕೃಷ್ಣ ಟಿ ರುದ್ರಯ್ಯ ಎನ್ ಬೀರಪ್ಪ ತಿಪ್ಪೇಸ್ವಾಮಿ ಹನುಮಂತರಾಯ ಬೋರಯ್ಯ ದೊರೆ ನಾಗರಾಜು ಸಣ್ಣ ಬೋರ ನಾಯಕ ಬಿಟಿ ಶ್ಯಾಮಲ .ಸರಸ್ವತಿ .ನಾಗರಾಜ್. ತಿಪ್ಪೇಸ್ವಾಮಿ.ವಿಶ್ವನಾಥ್ ಇತರರಿದ್ದು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page