ಚಿತ್ರದುರ್ಗಜಿಲ್ಲೆಯ ಜೀವನಾಡಿ ವಾಣಿವಿಲಾಸಸಾಗರ ಜಲಾಶಯದ ಒಳ ಹರಿವು 1850 ಕ್ಯುಸೆಕ್ ತಲುಪಿದೆ.

by | 08/06/24 | ಸುದ್ದಿ


ಹಿರಿಯೂರು:
ವೇದಾವತಿ ನದಿ ಪಾತ್ರದಲ್ಲಿ ವರುಣನ ಕೃಪೆಯಿಂದ ಚಿತ್ರದುರ್ಗ ಜಿಲ್ಲೆಯ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯದ ಒಳ ಹರಿವು 1850 ಕ್ಯುಸೆಕ್ ತಲುಪಿದೆ.
ಪ್ರಸಕ್ತ ವರ್ಷ ಮುಂಗಾರು ಮಳೆ ಆರಂಭದಲ್ಲೇ ಅಬ್ಬರಿಸುತ್ತಿದ್ದು, ಪ್ರಸ್ತುತ ಜಲಾಶಯದಲ್ಲಿ 114.05 ಅಡಿ ನೀರು ಸಂಗ್ರಹವಿದೆ. ಮುಂಗಾರು ಪೂರ್ವ ಮಳೆಗೆ ವೇದಾವತಿ ನದಿ ಪಾತ್ರದಲ್ಲಿ ಚೆಕ್ ಡ್ಯಾಂ ಬ್ಯಾರೇಜ್ ಗಳು ಭರ್ತಿಯಾಗಿದ್ದು, ಚಿಕ್ಕಮಗಳೂರು-ವೇದಾವತಿ ನದಿ ಪಾತ್ರದಲ್ಲಿ ಮಳೆ ಸುರಿದರೆ ಅಪಾರ ಪ್ರಮಾಣದ ಜಲರಾಶಿ ಹರಿದು ಬರಲಿದೆ.
2022ರಲ್ಲಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿ 89 ವರ್ಷಗಳ ನಂತರ ಕೋಡಿ ಬಿದ್ದಿದ್ದು ಇತಿಹಾಸ. ಅಂದು ಜಲಾಶಯದಲ್ಲಿ 130 ಅಡಿ ನೀರು ಸಂಗ್ರಹವಾಗಿತ್ತು. 2023ರಲ್ಲಿ ಮಳೆ ಕೊರತೆಯಿಂದ ಜಲಾಶಯಕ್ಕೆ ನೀರು ಹರಿಯಲಿಲ್ಲ.
ಕಳೆದ ಎರಡು ವರ್ಷದಲ್ಲಿ ಅಚ್ಚುಕಟ್ಟು ಪ್ರದೇಶ, ವೇದಾವತಿ ನದಿ ನೀರಿಗೆ 18 ಟಿಎಂಸಿ ಅಡಿ ನೀರು ಬಳಕೆ ಮಾಡಲಾಗಿದೆ. 2023 ರಲ್ಲಿ ಜಲಸಂಕಷ್ಟ ಎದುರಾಗಿ ರಾಜ್ಯದ ವಿವಿಧ ಜಲಾಶಯಗಳು ನೀರಿನ ಮಟ್ಟ ಕುಸಿದಿತ್ತು. ಆದರೆ ಬಯಲು ಸೀಮೆಯ ಜಲಪಾತ್ರೆ ವಾಣಿವಿಲಾಸ ಸಾಗರದಲ್ಲಿ ಅಪಾರ ಪ್ರಮಾಣದ ಜಲರಾಶಿ ಸಂಗ್ರಹವಿತ್ತು.
ಹವಮಾನ ಇಲಾಖೆ ವರದಿ ಪ್ರಕಾರ ಈ ಬಾರಿ ಮುಂಗಾರು ಮಳೆ ಅಬ್ಬರಿಸಲಿದ್ದು, ಆಗಸ್ಟ್ – ಸೆಪ್ಟಂಬರ್ ತಿಂಗಳಲ್ಲಿ ಭಾರಿ ಮಳೆ ಸುರಿಯಲಿದೆ ಎನ್ನಲಾಗಿದೆ.ವರುಣ ಕೃಪೆ ತೋರಿದರೆ ಶತಮಾನದ ಇತಿಹಾಸವಿರುವ ವಾಣಿವಿಲಾಸ ಸಾಗರ ಜಲಾಶಯ 3ನೇ ಬಾರಿ ಭರ್ತಿಯಾಗಿ ಜಲ ವೈಭವ ಮರುಕಳಿಸಲಿದೆ.
ತಾಲ್ಲೂಕಿನಲ್ಲಿ ಜೂನ್ ತಿಂಗಳ ಆರಂಭದಲ್ಲಿ ಕೆರೆ, ಕಟ್ಟೆ, ಹಳ್ಳ, ಕೊಳ್ಳಗಳು ಭರ್ತಿಯಾಗುತ್ತಿರುವುದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.ತಾಪಮಾನ ಏರಿಕೆಯಿಂದ ಒಣಗಿದ್ದ ಅಡಿಕೆ- ತೆಂಗು, ಬಾಳೆ ಇತರ ತೋಟಗಾರಿಕೆ ಬೆಳೆಗಳಿಗೆ ಜೀವ ಕಳೆ ಬಂದಿದೆ.
ಬತ್ತಿದ ಕೊಳವೆ ಬಾವಿಗಳಲ್ಲಿ ಗಂಗೆ ಉಕ್ಕುತ್ತಿದೆ. ಎತ್ತ ನೋಡಿದರೂ ಹಸಿರ ಸಿರಿ ಮೇಳೈಸುತ್ತಿದೆ. ಜನ–ಜಾನುವಾರುಗಳ ಮೇವು, ಕುಡಿಯುವ ನೀರಿನ ಸಂಕಷ್ಟ ದೂರಾಗಿದೆ. ತಾಲ್ಲೂಕಿನ 56 ಕಿ.ಮೀ. ವ್ಯಾಪ್ತಿಯ ವೇದಾವತಿ ನದಿ ಪಾತ್ರದಲ್ಲಿರುವ ಬ್ಯಾರೇಜ್ಗಳು ಭರ್ತಿಯಾಗಿದ್ದು, ಅಂತರ್ಜಲ ವೃದ್ಧಿ- ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page