ಚಿತ್ರದುರ್ಗ : ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ಕೆ.ಸಿ. ವೀರೇಂದ್ರ ಪಪ್ಪಿ

by | 06/03/24 | ಸುದ್ದಿ


ಚಿತ್ರದುರ್ಗ ಮಾ. 06
ಬೇಸಿಗೆ ಕಾಲವಿರುವುದರಿಂದ, ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿ 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಸೂಚನೆ ನೀಡಿದರು.
ಕುಡಿಯುವ ನೀರು ಪೂರೈಕೆ ಕುರಿತಂತೆ ನಗರಸಭೆಯ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಚಿತ್ರದುರ್ಗ ನಗರಕ್ಕೆ ಶಾಂತಿ ಸಾಗರ, ವಿ.ವಿ.ಸಾಗರ, ಬೋರ್‍ವೆಲ್‍ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡುವ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಶಾಸಕ ವೀರೇಂದ್ರ ಪಪ್ಪಿ ಅವರು ಮಾತನಾಡಿ, ಚಿತ್ರದುರ್ಗ ನಗರದ ವಾರ್ಡ್ ನಂ. 01 ರಿಂದ 35 ರಲ್ಲಿ ಕುಡಿಯುವ ನೀರು ಪೂರೈಕೆ ಮಾಡುತ್ತಿರುವ ವಾಲ್ವ್‍ಮ್ಯಾನ್‍ಗಳು ತಮಗೆ ವಹಿಸಿದ ವಾರ್ಡ್‍ಗಳಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಕುಡಿಯುವ ನೀರನ್ನು ಪೂರೈಕೆ ಮಾಡುವಂತೆ ಸಲಹೆ ನೀಡಿದರು.
ನೀರಿನ ಅಭಾವವಿರುವ ಕಡೆಗಳಲ್ಲಿ ಬೋರ್‍ವೆಲ್‍ಗಳನ್ನು ಕೊರೆಯಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಗರಸಭೆಯ ಆರ್.ಓ. ಪ್ಲಾಂಟ್‍ಗಳನ್ನು ಚಾಲನೆಗೆ ಕೊಟ್ಟು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಅನುಕೂಲ ಕಲ್ಪಿಸುವಂತೆ ಸೂಚಿಸಿದರು. 15ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿಗಾಗಿ ಮೀಸಲಿಟ್ಟ ಅನುದಾನದ ಕಾಮಗಾರಿಗಳನ್ನು ತುರ್ತಾಗಿ ಅನುಷ್ಟಾನಗೊಳಿಸಬೇಕು. ಇ-ಆಸ್ತಿಗಳನ್ನು ಹಾಗೂ ಜನನ-ಮರಣ ಪ್ರಮಾಣ ಪತ್ರಗಳನ್ನು ನಿಗದಿತ ಅವಧಿಯೊಳಗೆ ಸಾರ್ವಜನಿಕರಿಗೆ ತಲುಪುವ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ನಗರ ವ್ಯಾಪ್ತಿಯ ಒಳಚರಂಡಿ ಯೋಜನೆ ಕುರಿತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಚರ್ಚಿಸಿ, ಪೂರ್ಣ ಯೋಜನೆಯ ಕುರಿತು ಮತ್ತೊಮ್ಮೆ ಪಿ.ಪಿ.ಟಿ ಮತ್ತು ಸ್ಥಳಗಳ ವೀಕ್ಷಣೆ ಮಾಡಿ, ಆಗಿರುವ ಲೋಪದೋಷಗಳನ್ನು ಸರಿಪಡಿಸುವ ಕ್ರಮ ವಹಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ಪೌರಾಯುಕ್ತೆ ರೇಣುಕಾ.ಎಂ, ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜು, ಸೇರಿದಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯಪಾಲಕ ಅಭಿಯಂತರರು ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರರು ಮತ್ತು ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page