ಚಳ್ಳಕೆರೆ ಜನಧ್ವನಿ ವಾರ್ತೆ ನ.3. ಜೆಡಿಎಸ್ ಪಕ್ಷದಿಂದ ಕೆ.ಸಿ.ವೀರೇಂದ್ರಪಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿ ನೂರು ದಿನಕ್ಕೂ ಹೆಚ್ಚು ದಿನಗಳು ಕಳೆದ ಬೆನ್ನಲ್ಲೇ ಶುಕ್ರವಾರ ಕಾಂಗ್ರೆ ಪಕ್ಷದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಚಿತ್ರದುರ್ಗ ನಗರರಕ್ಕೆ ವಿವಿಧ ಕಾರ್ಯಮಗಳಲ್ಲಿ ಭಾಗವಹಿಸಲು ಬಂದ ಸಂದರ್ಭದಲ್ಲಿ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರಪಪ್ಪಯ ರ ಅಣ್ಣ ಚಳ್ಳಕೆರೆ ನಗರಸಭೆ ಸದಸ್ಯ ಕೆ.ಸಿ.ನಾಗಾಜ್ ಸಚಿವರೊಂದಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿಕೊಂಡು ಕುಳಿತಿರುವ ಪೋಟೋ ವೈರಲ್ ಆಗಿದ್ದು ಇವರೂ ಸಹ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಗೆ ಪುಷ್ಟಿ ನೀಡಿದಂತಾಗಿದೆ. ಚಳ್ಳಕೆರೆ ನಗರದಭೆ ಕೆಲ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಕೇಳಿ ಬರುತ್ತಿತ್ತು ಇವತ್ತಿನ ಈ ಪೋಟೋ ನೋಡಿದರೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬ ನಂಬಿಕೆ ಜನರಲ್ಲಿ ಮೂಡಿದ್ದು ಇವರ ಹಿಂದೆ ಯಾವ ಸದಸ್ಯರು ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗ್ತಾರೆ ಎಂಬುದಷ್ಟೇ ತಿಳಿಯ ಬೇಕಿದೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments