ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಇದುವರೆಗೂ ವಿಧಾನ ಪರಿಷತ್ ಸ್ಥಾನದ ಗೆಲುವಿನ ಬಾಗಿಲು ತೆಗೆಯುವಲ್ಲಿ ವಿಫಲವಾಗಿದೆ ಈ ಬಾರಿಯೂ ಅದು ಮುಂದುವರೆಯಲಿದ್ದು ಶಿಕ್ಷಕ ಮತದಾರರು ನನ್ನನ್ನು ನಾಲ್ಕನೇ ಬಾರಿಗೆ ಆಯ್ಕೆ ಮಾಡಿ ಕಳುಹಿಸಲಿದ್ದಾರೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ವೈ ಎ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಾಪೂಜಿ ಕಾಲೇಜಿನಲ್ಲಿ ಆಯೋಜಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಕರ ಸಮಸ್ಯೆಗಳನ್ನು ಹತ್ತಿರದಿಂದ ನಾನು ಬಲ್ಲವನಾಗಿದ್ದು ಹಲವಾರು ಬಾರಿ ವಿಧಾನಪರಿಷತ್ ನಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ನಿರ್ವಹಿಸಿದ್ದೇನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಶಿಕ್ಷಕರ ಪ್ರತಿಭಟನೆ ವೇಳೆಯೂ ಸಹ ನಾನು ಪಾಲ್ಗೊಂಡು ಶಿಕ್ಷಕರ ಹಲವು ಸಮಸ್ಯೆಗಳನ್ನು ಸದನದಲ್ಲಿ ತಿಳಿಸಿದ್ದು ಹಿಂದಿನ ಬಿಜೆಪಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿತ್ತು ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಾರದೆ ಇದ್ದುದ್ದರಿಂದ ಶಿಕ್ಷಕರ ಸಮಸ್ಯೆಗಳು ಹಾಗೆ ಉಳಿದವು ಈ ಬಾರಿ ಶಿಕ್ಷಕರು ನನ್ನನ್ನು ಮತ್ತೊಮ್ಮೆ ಗೆಲ್ಲಿಸುವ ವಿಶ್ವಾಸವಿದ್ದು ವೇತನ ತಾರತಮ್ಯ ಶಿಕ್ಷಕರ ಬಡ್ತಿ ಓಪಿಎಸ್ ಸೇರಿದಂತೆ ಹಲವಾರು ಸಮಸ್ಯೆಗಳಿದ್ದು ಶಿಕ್ಷಕರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ವಿಧಾನ ಪರಿಷತ್ ನಲ್ಲಿ ಚರ್ಚೆ ನಡೆಸಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುವುದು ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಅಗ್ನೇಯ ಶಿಕ್ಷಕರ ಕ್ಷೇತ್ರಗಳಲ್ಲಿ ಬಲಿಷ್ಠವಾಗಿರುವುದರಿಂದ ನನಗೆ ಆನೆ ಬಲಬಂದಂತಾಗಿದೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತ ಪಕ್ಷವಾಗಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದು ಕೇವಲ ಒಂದು ಸಮುದಾಯವನ್ನು ಓಲೈಸುತ್ತ ಜಾತಿ ರಾಜಕಾರಣ ಮಾಡಿಕೊಂಡು ಓಡಾಡುತ್ತಿದೆ ಆದರೆ ನಾನು ಎಲ್ಲ ಜಾತಿ ಜನಾಂಗದವರನ್ನು ಸಮಾನ ದೃಷ್ಟಿಕೋನದಿಂದ ಕಾಣುತ್ತಿದ್ದು ಶಿಕ್ಷಕ ಮತದಾರರೇ ನನ್ನ ರಾಜಕೀಯ ಭವಿಷ್ಯ ರೂಪಿಸಿದ್ದು ಈ ಬಾರಿ ಅತಿ ಹೆಚ್ಚಿನ ಮತಗಳಿಂದ ನನ್ನನ್ನು ನಾಲ್ಕನೇ ಬಾರಿಗೆ ವಿಧಾನ ಪರಿಷತ್ತಿಗೆ ಆರಿಸಿ ಕಳಿಸುವ ವಿಶ್ವಾಸವಿದೆ ಎಂದು ತಿಳಿಸಿದರು.
ಬಾಪೂಜಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಜಿ ಬಾಲ
ರೆಡ್ಡಿ ಮಾತನಾಡಿ ಶಿಕ್ಷಕರ ಮೂಲಭೂತ ಸೌಲಭ್ಯಗಳನ್ನು ಪಡೆಯಲು ಹಲವು ಹೋರಾಟಗಳನ್ನು ಮಾಡುತ್ತಾ ಬಂದಿದ್ದೇವೆ ಶಿಕ್ಷಕರು ಪಕ್ಷಭೇದ ಮರೆತು ಮತ ನೀಡೋಣ ನಾರಾಯಣಸ್ವಾಮಿಯವರ ವೈಯಕ್ತಿಕ ವರ್ಚಸ್ಸಿನ ಮೇಲೆ ಮತ ಕೇಳಲು ಆಗಮಿಸಿದ್ದಾರೆ ನಾವೆಲ್ಲರೂ ಒಗ್ಗಟ್ಟಾಗಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತಹ ವ್ಯಕ್ತಿಯನ್ನು ವಿಧಾನ ಪರಿಷತ್ತಿಗೆ ಕಳಿಸುವ ಕೆಲಸ ನಮ್ಮದು ನಾವೆಲ್ಲರೂ ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ವೈ ಎ ನಾರಾಯಣಸ್ವಾಮಿಯವರ ಗೆಲುವಿಗೆ ಸಹಕಾರಿಯಾಗುತ್ತದೆ ಶಿಕ್ಷಕ ವರ್ಗದವರು ಪ್ರಜ್ಞಾವಂತ ಮತದಾರರಾಗಿದ್ದು ಚುನಾವಣಾ ಸಂದರ್ಭದಲ್ಲಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸುವಂತಹ ವ್ಯಕ್ತಿಗೆ ಮತ ನೀಡುವ ಮೂಲಕ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಜಿಕೆ ವೆಂಕಟೇಶ್ ರೆಡ್ಡಿ, ನಜೀರ್ ಅಹಮದ್ ಎಂಜಾರಪ್ಪ, ಶ್ರೀನಿವಾಸ್ ರಾಮರೆಡ್ಡಿ,ತಿಮ್ಮಪ್ಪ, ಓಬಣ್ಣ ನಾಗರಾಜ್,ಸುಬಾನ್ ಜಿವಿ ಅಂಜನಪಪ್ಪ ಶಾಂತವೀರಪ್ಪ ನಜುರುಲ್ಲಾ ಅಹಮದ್.ತಿಪ್ಪೇಸ್ವಾಮಿ, ಜೋಗಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments