ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂ ರಾಮಪ್ಪ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಭೇಟಿ ಮಾಡಿದರು*

by | 04/12/23 | ಸುದ್ದಿ

.
ನಾಯಕನಹಟ್ಟಿ:: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನತೆ ಆಶಿರ್ವಾದ ಮಾಡಿದಲ್ಲಿ ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಎಂಬ ರಾಮಪ್ಪ ಹೇಳಿದ್ದಾರೆ.


ಅವರು ಸೋಮವಾರ ನೇರಲಗುಂಟೆ ಗ್ರಾಮದ ಆರಾಧ್ಯ ದೈವ ಶ್ರೀ ಆಂಜನೇಯ ಸ್ವಾಮಿ ಆಶೀರ್ವಾದ ಪಡೆದು ಮುಖಂಡರು ಕಾರ್ಯಕರ್ತರೊಂದಿಗೆ
2024ರ ಲೋಕಸಭಾ ಚುನಾವಣೆಯ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಆದ್ದರಿಂದ 2024ರ ಲೋಕಸಭಾ ಚುನಾವಣೆ ಆಶೀರ್ವಾದ ಮಾಡುವಂತೆ ಮನವಿಯನ್ನು ಮಾಡಿದರು.

ಇನ್ನೂ ಹೋಬಳಿಯ ಎನ್ ದೇವರಹಳ್ಳಿ ,ಎನ್ ಮಹದೇವಪುರ, ನಲಗೇತನಹಟ್ಟಿ, ಗೌಡಗೆರೆ, ಜೋಗಿಹಟ್ಟಿ ,ಮಲ್ಲೂರಹಟ್ಟಿ ಅಬ್ಬೇನಹಳ್ಳಿ, ಮಲ್ಲೂರಹಳ್ಳಿ, ಗ್ರಾಮ ಪಂಚಾಯತಿಯ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರಿಗೆ 2024ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನೂರಕ್ಕೆ ನೂರರಷ್ಟು ಅಭ್ಯರ್ಥಿಯಾಗುವುದು ನಿಶ್ಚಿತ ಅದರಿಂದ ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು .

ಇದೇ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ನೇರಲಗುಂಟೆ ಎಂ ರಾಮಪ್ಪ, ಕಾಂಗ್ರೆಸ್ ಮುಖಂಡ ಎಂ ಸೂರನಾಯಕ, ಬಾಪೂಜಿ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಜಿ ಬಿ ಬಾಲರೆಡ್ಡಿ, ಜಿ ತಿಪ್ಪೇಸ್ವಾಮಿ, ಸೋಮಶೇಖರ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆ ತಿಪ್ಪೇಸ್ವಾಮಿ, ಎನ್ ದೇವರಹಳ್ಳಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ಟಿ ಕಾಟಯ್ಯ, ವರವು ವಿ ಟಿ ಶಂಕರ್ ಮೂರ್ತಿ, ಹಿರೇಹಳ್ಳಿ ಕೃಷ್ಣಪ್ಪ, ನೇರಲಗುಂಟೆ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗೋಪಾಲ ನಾಯಕ, ನೇರಲಗುಂಟೆ ಮಾಜಿ ಗ್ರಾ.ಪಂ.ಅಧ್ಯಕ್ಷ ಈರಣ್ಣ, ಭೀಮನಕೆರೆ ಪಾಲಯ್ಯ, ಸೇರಿದಂತೆ ಮುಂತಾದವರು ಇದ್ದರು

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page