ಚಳ್ಳಕೆರೆ: ಚಿತ್ರದುರ್ಗ ಜಿಲ್ಲೆ ತನ್ನದೇ ಆದ ಐತಿಹಾಸಿಕ ಹಿನ್ನೆಲೆ ಹೊಂದಿದ್ದು ರಾಜಕಾರಣಿಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂದಿಗೂ ಸಹ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಅಭಿಪ್ರಾಯಪಟ್ಟರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮಧ್ಯ ಕರ್ನಾಟಕದ ಚಿತ್ರದುರ್ಗ ಜಿಲ್ಲೆಗೆ ಅವಿಭಾಜ್ಯ ಅಂಗವಾಗಿದ್ದ ದಾವಣಗೆರೆ ಜಿಲ್ಲೆ ಪ್ರತ್ಯೇಕ ಜಿಲ್ಲೆಯಾಗಿ ಬೇರ್ಪಟ್ಟ ತರುವಾಯ ಸಾಕಷ್ಟು ಅಭಿವೃದ್ಧಿ ಕಂಡಿದೆ ತುಮಕೂರು ಜಿಲ್ಲೆಯು ಸಹ ಸ್ಮಾರ್ಟ್ ಸಿಟಿ ಯೋಜನೆಗೆ ಸೇರ್ಪಡೆಯಾಗಿ ಅಭಿವೃದ್ಧಿ ಕಾಣುತ್ತಿದೆ ಆದರೆ ಚಿತ್ರದುರ್ಗ ಜಿಲ್ಲೆ ಅಭಿವೃದ್ಧಿ ವಂಚಿತ ಜಿಲ್ಲೆಯಾಗಿ ಇಂದಿಗೂ ಅಭಿವೃದ್ಧಿಯಲ್ಲಿ ಶೂನ್ಯವಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು ಈ ಬಾರಿ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದು ಪಕ್ಷದ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ರಾಜ್ಯ ನಾಯಕರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಬಳಿ ಈಗಾಗಲೇ ಮಾತುಕತೆ ನಡೆದಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಹೀಗಾಗಿ ಪಕ್ಷ ಟಿಕೆಟ್ ನೀಡಿದಲ್ಲಿ ಪಕ್ಷದ ಹಿರಿಯ ಕಿರಿಯ ಸೇರಿದಂತೆ ಎಲ್ಲ ನಾಯಕರ ಕಾರ್ಯಕರ್ತರ ಬೆಂಬಲ ಪಡೆದು ಗೆಲುವು ಸಾಧಿಸಿ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿ ಮೆಡಿಕಲ್ ಕಾಲೇಜ್ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ಚಿಂತಕ ಮೈತ್ರಿ ದ್ಯಾಮಯ್ಯ ಮಾತನಾಡಿ ಕಳೆದ ಬಾರಿ ಕಾಂಗ್ರೆಸ್ ಪಕ್ಷದ ಸಂಸದರಾಗಿದ್ದ ಚಂದ್ರಪ್ಪನವರು ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ಮಾಡದ ಹಿನ್ನೆಲೆಯಲ್ಲಿ 2019ರ ಚುನಾವಣೆಯಲ್ಲಿ ದಲಿತ ಸೇರಿದಂತೆ ಇತರೆ ಹಿಂದುಳಿದ ವರ್ಗಗಳು ಹಾಗೂ ಎಲ್ಲಾ ವರ್ಗದ ಮತದಾರರು ಬಿಜೆಪಿಯನ್ನು ಬೆಂಬಲಿಸಿ ಇಂದಿನ ಸಾಮಾಜಿಕ ಹಾಗೂ ಸಬಲೀಕರಣ ರಾಜ್ಯ ಖಾತೆ ಕೇಂದ್ರ ಸಚಿವ ನಾರಾಯಣಸ್ವಾಮಿ ಅವರನ್ನು ಬೆಂಬಲಿಸಿದೆವು ಇದರಿಂದ ಜಿಲ್ಲೆಗೆ ಯಾವುದೇ ಪ್ರಯೋಜನವಾಗಿಲ್ಲ ಮಾಜಿ ಸಂಸದ ಶಶಿಕುಮಾರ್ ರವರು ಚಿತ್ರದುರ್ಗ ಜಿಲ್ಲೆಗೆ ಸಂಸದರಾದ ವೇಳೆ ಉತ್ತಮ ಕೆಲಸ ಕಾರ್ಯಗಳನ್ನು ಮಾಡಿ ಸಂಸದರ ಕಾರ್ಯವೈಕರಿ ಏನು ಎಂಬುದು ತೋರಿಸಿಕೊಟ್ಟಿದ್ದರು ಕೇಂದ್ರದ ಸಚಿವರಾಗಿ ನಾರಾಯಣಸ್ವಾಮಿ ಅವರು ಜಿಲ್ಲೆಗೆ ಯಾವುದೇ ಅನುದಾನ ತರದೆ ಮತದಾರರ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಸುನಿಲ್ ಕುಮಾರ್ ರವರಿಗೆ ಬೆಂಬಲ ನೀಡಿ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅನಂತಮೂರ್ತಿ ನಾಯಕ್ ಕೃಷ್ಣಮೂರ್ತಿ ತುಳಸಿ ರಮೇಶ್ ಎಂಎಂ ನಾಯಕ್ ಸಾಗರ್ ಸಂಜೀವ್ ಮೂರ್ತಿ ನಿರ್ಮಲ, ಸುಧಾ ಪರಮೇಶ್ ದ್ಯಾಮರಾಜ್ ಜಾಲಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
0 Comments