ಚುನಾವಣಾ ಅಕ್ರಮಗಳ ತಡೆಗಾಗಿ ಆಂಧ್ರ ಅಧಿಕಾರಿಗಳ ಸಹಕಾರ ಕೋರಿಕೆ ಗಡಿಭಾಗದ ಚೆಕ್‍ಪೋಸ್ಟ್‍ಗಳಲ್ಲಿ ತೀವ್ರ ನಿಗಾ : ಟಿ. ವೆಂಕಟೇಶ್.

by | 04/03/24 | ಸುದ್ದಿ

ಚಿತ್ರದುರ್ಗ ಮಾ.04:
ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಅಕ್ರಮ ಮದ್ಯ ಸಾಗಾಣಿಕೆ ತಡೆ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಿ, ನ್ಯಾಯಸಮ್ಮತ ಚುನಾವಣೆಗೆ ಸಹಕಾರ ನೀಡುವಂತೆ ನೆರೆಯ ಆಂಧ್ರಪ್ರದೇಶ ರಾಜ್ಯದ ಅನಂತಪುರ, ಶ್ರೀ ಸತ್ಯಸಾಯಿ ಜಿಲ್ಲೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದರು.
ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ಕೈಗೊಳ್ಳಬೇಕಿರುವ ಪ್ರಾಥಮಿಕ ಹಂತದ ಮುಂಜಾಗ್ರತಾ ಕ್ರಮಗಳ ಕುರಿತು ನೆರೆಯ ತುಮಕೂರು, ಆಂಧ್ರಪ್ರದೇಶದ ಅನಂತಪುರ, ಶ್ರೀ ಸತ್ಯಸಾಯಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿಗಳು, ಅಬಕಾರಿ ಇಲಾಖೆ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶೀಘ್ರದಲ್ಲಿಯೇ ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಲಿದ್ದು, ಈ ಸಂದರ್ಭದಲ್ಲಿ ಚುನಾವಣೆ ಸಂಬಂಧ ಜರುಗಬಹುದಾದ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸುಮಾರು 35 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗುವುದು. ಆಂಧ್ರಪ್ರದೇಶದೊಂದಿಗೆ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಸುಮಾರು 150 ಕಿ.ಮೀ. ಗಡಿ ಪ್ರದೇಶ ಹಂಚಿಕೊಂಡಿದ್ದು, ಚುನಾವಣೆ ಸಂದರ್ಭದಲ್ಲಿ ನೆರೆಯ ರಾಜ್ಯದಿಂದ ಈ ಜಿಲ್ಲೆಯೆಡೆಗೆ ಅಕ್ರಮವಾಗಿ ಮದ್ಯ, ವಿವಿಧ ಬಗೆಯ ಸಾಮಗ್ರಿಗಳ ಸಾಗಾಣಿಕೆ ಮಾಡುವುದು, ಕೆಲ ವ್ಯಕ್ತಿಗಳು ಜಿಲ್ಲೆಯೊಳಗೆ ಆಗಮಿಸಿ, ಚುನಾವಣೆಯ ಮೇಲೆ ಪ್ರಭಾವ ಬೀರುವಂತಹ ಸಾಧ್ಯತೆಗಳಿರುತ್ತವೆ. ಹೀಗಾಗಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸುವ ಸಲುವಾಗಿ ಆಂಧ್ರದ ಗಡಿಯಲ್ಲಿ ಬರುವ ಮೊಳಕಾಲ್ಮೂರು ತಾಲ್ಲೂಕಿನ ಉಡೇವು, ಮಲ್ಲಸಮುದ್ರ, ಯದ್ದಲುಬೊಮ್ಮನಹಟ್ಟಿ, ಪಾತಪ್ಪನಗುಡಿ, ಕಣಪುಪ್ಪೆ. ಚಳ್ಳಕೆರೆ ತಾಲ್ಲೂಕಿನ ನಾಗಪ್ಪನಹಳ್ಳಿ ಗೇಟ್. ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಹಾಗೂ ಪಿ.ಡಿ. ಕೋಟೆ ಕ್ರಾಸ್ ಸೇರಿದಂತೆ ಒಟ್ಟು 08 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಆಂಧ್ರಪ್ರದೇಶ ರಾಜ್ಯದ ವ್ಯಾಪ್ತಿಯಲ್ಲಿಯೂ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ, ಅಕ್ರಮವಾಗಿ ಅಲ್ಲಿಂದ ಮದ್ಯ ಸಾಗಾಣಿಕೆಯಾಗದಂತೆ ಹಾಗೂ ಮತದಾರರಿಗೆ ಹಂಚಿಕೆ ಮಾಡುವ ಸಲುವಾಗಿ ವಿವಿಧ ಸಾಮಗ್ರಿಗಳನ್ನು ಸಾಗಿಸದಂತೆ ನಿಗಾ ವಹಿಸಬೇಕು. ಅಲ್ಲದೆ ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಹಾಗೂ ಚುನಾವಣೆಯ ಮೇಲೆ ಪ್ರಭಾವ ಬೀರದಂತೆ ಮಾಡಲು, ವಿಶೇಷ ನಿಗಾ ವಹಿಸಲು ಅಲ್ಲಿನ ಅಧಿಕಾರಿಗಳು ಕ್ರಮ ವಹಿಸಬೇಕು. ಆಂಧ್ರ ಗಡಿ ಪ್ರದೇಶ ವ್ಯಾಪ್ತಿಯಲ್ಲಿನ ಮದ್ಯದಂಗಡಗಳಲ್ಲಿ ಸರಾಸರಿಗಿಂತಲೂ ಹೆಚ್ಚಿನ ಮದ್ಯ ವಹಿವಾಟು ನಡೆಯುತ್ತಿದ್ದಲ್ಲಿ, ಅಂತಹ ವಹಿವಾಟಿನ ಬಗ್ಗೆಯೂ ನಿಗಾ ವಹಿಸಬೇಕು. ಒಟ್ಟಾರೆ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ನೆರೆಯ ರಾಜ್ಯದ ಅಧಿಕಾರಿಗಳು ಇಲ್ಲಿನ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಕೋರಿದರು.
ಇದಕ್ಕೆ ಪ್ರತಿಯಾಗಿ ಸ್ಪಂದಿಸಿದ ಅನಂತಪುರ ಜಿಲ್ಲೆಯ ಕಲೆಕ್ಟರ್ ಗೌತಮಿ ಎಂ. ಅವರು, ಲೋಕಸಭೆ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಗ್ರಹಿಸಲು, ಚಿತ್ರದುರ್ಗ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವಂತೆ ಆಂಧ್ರದಲ್ಲಿಯೂ ಒಟ್ಟು 10 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ, ಅಕ್ರಮ ಮದ್ಯ ಮತ್ತು ಸಾಮಗ್ರಿಗಳ ಸಾಗಾಣಿಕೆ ತಡೆಗೆ ತೀವ್ರ ನಿಗಾ ವಹಿಸಲಾಗುವುದು ಎಂದು ಹೇಳಿದರು.
ವಿಡಿಯೋ ಸಂವಾದದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ ಅವರು, ಚುನಾವಣಾ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ವಿರುವ ಮಾಹಿತಿ ವಿನಿಮಯ ಮಾಡಿಕೊಂಡರು. ಅನಂತಪುರ ಜಿಲ್ಲೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಕೆ.ಎನ್. ಅನ್ಬುರಾಜನ್ ಅವರು, ಆಂಧ್ರ ಗಡಿ ಭಾಗದ ವ್ಯಾಪ್ತಿಯಲ್ಲಿ ಚುನಾವಣೆ ಸಂದರ್ಭದಲ್ಲಿ ಸ್ಥಾಪಿತ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ತಡೆಗೆ ತೀವ್ರ ಕಟ್ಟೆಚ್ಚರ ವಹಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ಅಬಕಾರಿ ಉಪ ಆಯುಕ್ತ ಮಾದೇಶ್, ಶ್ರೀ ಸತ್ಯಸಾಯಿ ಜಿಲ್ಲೆಯ ಕಲೆಕ್ಟರ್ ಪಿ. ಅರುಣ್ ಬಾಬು, ಸೇರಿದಂತೆ ವಿವಿಧ ಅಧಿಕಾರಿಗಳು, ಅನಂತಪುರಂ, ಶ್ರೀ ಸತ್ಯಸಾಯಿ ಜಿಲ್ಲೆಗಳ ಪೊಲೀಸ್ ಅಧೀಕ್ಷಕರು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಅಬಕಾರಿ ಇಲಾಖೆ ಅಧಿಕಾರಿಗಳು, ಉಪವಿಭಾಗಾಧಿಕಾರಿಗಳು, ಇತರೆ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page