ಚಳ್ಳಕೆರೆ ಫೆ16 ಚುನಾವಣಾ ಕಾರ್ಯದಲ್ಲಿ ಯಾವುದೇ ದೂರುಗಳು ಬಾರದಂತೆ, ನಿಷ್ಪಕ್ಷಪಾತ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಎಂದು ತಹಶೀಲ್ದಾರ್ ರೇಹಾನ್ ಪಾಷ ಕಿವಿಮಾತು ಹೇಳಿದರು.
ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 2024 ರ ಲೋಕಸಭಾ ಚುನಾವಣೆ ಅಂಗವಾಗಿ ಪೊಲೀಸ್ ಇಲಾಖೆಗೆ ಆಯೋಜಿಸಿದ್ದ ಚುನಾವಣಾ ಕರ್ತವ್ಯಗಳ ಬಗ್ಗೆ ಆಯೋಜಿಸಿದ್ದ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದರು.
ಯಾವುದೇ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಘೋಷಣೆಯಾಗುವ ಸಾಧ್ಯತೆ ಇದ್ದು ಇಂದಿನಿಂದಲೇ ಚುನಾವಣೆ ಆಯೋಗ ನೀಡಿರುವ ಮಾರ್ಗದರ್ಶನವನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸುವ ಮೂಲಕ ಕರ್ತವ್ಯಗಳು, ಜವಾಬ್ದಾರಿಗಳು, ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಪಾಲಿಸುವಂತೆ ತಿಳಿಸಿದರು.
ಡಿವೈಎಸ್ ಪಿ ರಾಜಣ್ಣ ಮಾತನಾಡಿ ಚುನಾವಣೆ ಘೋಷಣೆಯಾದಗಿನಿಂದ ಇಡಿದು ಮತಗಟ್ಟೆ ಕೇಂದ್ರ, ಚೆಕ್ ಪೋಷ್ಟ್, ಚುನಾವಣೆ ಮತದಾನ, ಮತಗಟ್ಟೆಕೇಂದ್ರಗಳಿಗೆ ಹಾಗೂ ಕೇಂದ್ರಗಳಿಂದ ಬೂತ್ ಗಳನ್ನು ಸಾಗಿಸುವ ತನಕ ಚುನಾವಣೆ ಕರ್ತವ್ಯ ಅಧಿಕಾರಿ, ಸಿಬ್ಬಂದಿಗಳ ಜತೆಗೆ ಚುನಾವಣೆ ನೀತಿ ಸಂಹಿತೆ ಹಾಗೂ ಕರ್ತವ್ಯಗಳನ್ನು ಅರಿತು ಕಡ್ಡಾಯವಾಗಿ ಪಾಲಿಸಬೇಕು ಯಾರ ಒತ್ತಡಕ್ಕೆ ಮಣಿಯದೆ ಚುನಾವಣೆ ಆಯೋಗ ನೀಡಿರುವ ಕರ್ತವ್ಯವನ್ನು ಕಡ್ಡಾಯವಾಗಿ ಪಾಲಿಸ ಬೇಕು ಸೆಕ್ಟರ್ ಅಧಿಕಾರಿಗಳು, ವಿಶೇಷ ಜಾಗೃತದಳದ ಅಧಿಕಾರಿಗಳು, ಎಫ್ಎಸ್ಟಿ, ವಿಎಸ್ಟಿ, ವಿವಿಟಿ, ಎಂಸಿಸಿ ತಂಡಗಳೊಂದಿಗೆ ನಮ್ಮ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ನಿರ್ಭಿತಿಯಿಂದ ನಡೆಸಲು ಎಲ್ಲರೂ ಸಹಕರಿಸಿ, ತಮಗೆ ವಹಿಸಿದ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಇಲ್ಲದಂತೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಚುನಾವಣಾ ಕಾರ್ಯ ಯಶಸ್ವಿಗೊಳಿಸಬೇಕು ಎಂದು ಸೂಚಿಸಿದರು.
ಚುನಾವಣೆ ಕಾರ್ಯದಲ್ಲಿ ಪೋಲಿಸರ ಕರ್ತವ್ಯ ಏನು ಎಂಬುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಮುಕ್ತ, ನ್ಯಾಯಸಮ್ಮತ, ಗೊಂದಲವಿಲ್ಲದೆ, ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವಲ್ಲಿ ಮಾದರಿ ನೀತಿ ಸಂಹಿತೆ ಅನುಷ್ಠಾನ ಪ್ರಮುಖವಾಗಿದೆ. ಇದರ ಅಡಿಯಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸ ಬೇಕಿದೆ ಎಂದು ತಿಳಿಸಿದರು.
ಕಾರ್ಯಗಾರದಲ್ಲಿ ಚಳ್ಳಕೆರೆ ಠಾಣೆಯ ಪಿ ಐ ಆರ್.ಎಫ್ ದೇಸಾಯಿ, ತಳಕು ವೃತ್ತ ನಿರೀಕ್ಷಕ ರಾಜಶೇಖರ್, ಪಿಎಸ್ ಐ ಗಳಾದ ಸತೀಶ್ ನಾಯ್ಕ,ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments