ಚಿತ್ರದುರ್ಗ ಜನಧ್ವನಿ ವಾರ್ತೆ ಏ.16:ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಗೆ ಮೂವರು ಐಆರ್ಎಸ್ ಅಧಿಕಾರಿಗಳನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ಚುನಾವಣಾ ಆಯೋಗ ನೇಮಿಸಿದೆ. ಮೊಳಕಾಲ್ಮುರು ಹಾಗೂ ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಇ.ಎಸ್. ನಿಧಿನ್ ಲಾಲ್ (ದೂರವಾಣಿ ಸಂಖ್ಯೆ-6360443121) ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತೀಕ್ ಕುಮಾರ್ ಮಿಶ್ರಾ (ದೂರವಾಣಿ ಸಂಖ್ಯೆ 6360497561) ಹಿರಿಯೂರು, ಹೊಸದುರ್ಗ ಹಾಗೂ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರಕ್ಕೆ ಅರವಿಂದ್ ಪಿ ಬಾಣಸೊಂಡೆ (ದೂರವಾಣಿ ಸಂಖ್ಯೆ 8618340690) ಅವರನ್ನು ನೇಮಕ ಮಾಡಲಾಗಿದೆ. ಈ ಮೂವರು ವೀಕ್ಷಕರು ಏ.13 ರಂದು ಜಿಲ್ಲೆಗೆ ಆಗಮಿಸಿದ್ದಾರೆ. ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ತಿಳಿಸಿದ್ದಾರೆ.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments