ಚೌಡೇಶ್ವರಿ ಜಾತ್ರೆಯಲ್ಲಿ ಬುಡಕಟ್ಟು ಸಂಸ್ಕೃತಿಯ ಅನಾವರಣ ಸಂಭ್ರಮದ ಹಿರೆಕೆರೆ ಕಾವಲು ಚೌಡೇಶ್ವರಿ ಜಾತ್ರಾ ಮಹೋತ್ಸವ

by | 21/02/24 | ಸುದ್ದಿ

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ಹಿರೆಕೆರೆ ಕಾವಲಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಕಾವಲು ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿಯನ್ನು ಪಡೆದಿರುವ ಚೌಡೇಶ್ವರಿ ದೇವಿಯು ಸುತ್ತಮುತ್ತಲ ಗ್ರಾಮಗಳ ಆರಾದ್ಯ ದೇವತೆಯಾಗಿದ್ದಾಳೆ. ಜಾತ್ರೆಯ ಸಂದರ್ಭದಲ್ಲಿ ಬುಡಕಟ್ಟು ಸಂಸ್ಕೃತಿಯ ಆಚರಣೆಗಳು ಅನಾವರಣಗೊಂಡವು. ಬಣ್ಣಬಣ್ಣದ ಬಾವುಟಗಳಿಂದ ಸಿಂಗಾರಗೊಂಡ 30ಅಡಿ ಎತ್ತರದ ತೇರಿಗೆ ಎತ್ತಿನಹಟ್ಟಿ ಗೌಡರ ಮನೆಯಿಂದ ಬಲಿ ಅನ್ನದ ಸೋರೆಹೊತ್ತು ತರಲಾಯಿತು. ಹಾಗೂ ಜೋಗಿಹಟ್ಟಿಯಿಂದ ಮೊಸರು ಕುಂಭ, ಜಿನಿಗೆಹಾಲು, ಕಡಬನಕಟ್ಟೆ, ಭೀಮಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಕಾಸುಮೀಸಲು ತಂದು ರಥಕ್ಕೆ ಅರ್ಪಿಸಿ ರಥದ ಚಕ್ರಗಳಿಗೆ ಬಲಿಅನ್ನದ ಎಡೆಹಾಕಿ ಪೂಜೆ ಸಲ್ಲಿಸಿದರು.
ನಂತರ ಸಂಪ್ರದಾಯದಂತೆ ಮುಕ್ತಿಬಾವುಟ ಹಾರಾಜು ಪ್ರಕ್ರಿಯೆಯಲ್ಲಿ ಗೌಡಗೆರೆ ಗ್ರಾ.ಪಂ.ಸದಸ್ಯ ತಿಪ್ಪೇಸ್ವಾಮಿ ರೂ.71ಸಾವಿರಕ್ಕೆ ತೆಗೆದುಕೊಂಡರು. ನಂತರ ಮಹಾ ಮಂಗಳಾರತಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಹಲವು ಬಣ್ಣಗಳ ಬಾವುಟಗಳಿಂದ ಸುಂದರವಾಗಿ ಅಲಂಕೃತಗೊAಡ ರಥವನ್ನು ದೇವಾಲಯದ ಎದುರು ಇರುವ ಪಾದಗಟ್ಟೆಯ ಬಳಿಗೆ ನೆರೆದ ಸಾವಿರಾರು ಭಕ್ತರು ಎಳೆದು ತಂದು ಪೂಜೆಯನ್ನು ಮಾಡಿ, ಪುನಃ ದೇವಾಲಯಸ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ದೇವರನ್ನು ಗುಡಿದುಂಬಿಸಲಾಯಿತು. ಇದೇವೇಳೆ ನೆರೆದ ಸಾವಿರಾರು ಭಕ್ತರು ರಥಕ್ಕೆ ಕಾಳುಮೆಣಸು, ಚೂರುಬೆಲ್ಲ, ಮಂಡಕ್ಕಿ ಸೇರಿದಂತೆ ದವಸ ದಾನ್ಯಗಳನ್ನು ಎರಚಿ ಭಕ್ತಿಯನ್ನು ಸಮರ್ಪಿಸಿದರು.
ಇದೇವೇಳೆ ರಥೋತ್ಸವಕ್ಕೆ ಜಾನಪದ ವಾದ್ಯಗಳಾದ ತಪ್ಪಡಿ, ಕಹಳೆ, ಉರುಮೆಗಳು, ಜನಪದೆ ಕ್ರೀಡೆ ಕೋಲಾಟ, ನಂದಿಕೋಲು, ನಂಧಿಜ್ವಜ ಮೆರುಗು ತುಂಬಿದವು. ಹರಕೆ ಹೊತ್ತ ನೂರಾರು ಭಕ್ತರು ಹರಕೆಯನ್ನು ಪೂರೈಸಿದರು.
ಮೂರು ದಿನಗಳ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಬೇಟಿ ನೀಡುವ ಹಿನ್ನೆಲೆಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳಲ್ಲಿ ತಿಂಡಿ ತಿನಿಸುಗಳು ಮತ್ತು ಅಲಾಂಕಾರಿಕ ವಸ್ತುಗಳ ಕೊಳ್ಳುವಲ್ಲಿ ಜನರು ನಿರತರಾಗಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಇದೇವೇಳೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ದೇವಾಲಯ ಸಮಿತಿ ಅದ್ಯಕ್ಷ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ(ಎತ್ತಿನಹಟ್ಟಿಗೌಡ್ರು), ಕಾರ್ಯದರ್ಶಿ ಎಂ.ವೈ.ಟಿ.ಸ್ವಾಮಿ, ಮುಖಂಡರಾದ ಜಿ.ಟಿ.ದೇವರಾಜ, ಜೆ.ಆರ್.ರವಿಕುಮಾರ್, ಶ್ರೀಕಾಂತ್, ಮುದಿಯಪ್ಪ, ಬೋರಸ್ವಾಮಿ, ಮಂದಯ್ಯರನಾಗರಾಜ, ಎಸ್.ಓಬಣ್ಣ, ಚಿನ್ನಯ್ಯ, ಹನುಮಣ್ಣ, ನಾಮಲ ಓಬಯ್ಯ, ಆರ್.ಪಾಲಯ್ಯ ಸೇರಿದಂತೆ ಸಾವಿರಾರು ಭಕ್ತರು ಇದ್ದರು.

ರೋಮಾಂಚನಗೊಳಿಸಿದ ಜೋಡೆತ್ತಿನಬಂಡಿ ಓಟ
ಇದೇಮೊದಲ ಬಾರಿಗೆ ಜಾತ್ರೆಯಲ್ಲಿ ಜೋಡೆತಿನ ಬಂಡಿ ಓಟದ ಸ್ಪರ್ಧೇಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೇಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ೪೮ಜೋಡಿ ವಿವಿಧ ತಳಿ ರಾಸುಗಳು ಭಾಗವಹಿಸಿದ್ದವು. ಮೊದಲ ಸುತ್ತಿನ ಓಟದ ಸ್ಪರ್ಧೇಯಲ್ಲಿ 13 ಜೋಡಿ ರಾಸುಗಳು ಜಯಗಳಿದ್ದು, ರಥೋತ್ಸವದ ನಿಮಿತ್ತ ಆಟವನ್ನು ಬುಧವಾರಕ್ಕೆ ಮುಂದೂಡಲಾಯಿತು. ರಾಸುಗಳ ರಭಸವಾದ ಓಟವನ್ನು ಕಣ್ತುಂಬಿಕೊಳ್ಳಲು 4ಸಾವಿರಕ್ಕೂ ಅಧಿಕ ಜನರು ಭಾಗವಹಿಸಿ ಶಿಳ್ಳೆ, ಕೇಕೆ ಹಾಕುವ ಮೂಲಕ ಜೋಡೆತ್ತಿನ ಗಾಡಿ ಓಟದ ಸ್ಪರ್ಧೇಗೆ ಹುರಿದುಂಬಿಸಿದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page