ಚೌಡೇಶ್ವರಿ ಜಾತ್ರೆಯಲ್ಲಿ ಬುಡಕಟ್ಟು ಸಂಸ್ಕೃತಿಯ ಅನಾವರಣ ಸಂಭ್ರಮದ ಹಿರೆಕೆರೆ ಕಾವಲು ಚೌಡೇಶ್ವರಿ ಜಾತ್ರಾ ಮಹೋತ್ಸವ

by | 21/02/24 | ಸುದ್ದಿ

ನಾಯಕನಹಟ್ಟಿ : ನಾಯಕನಹಟ್ಟಿ ಸಮೀಪದ ಹಿರೆಕೆರೆ ಕಾವಲಿನಲ್ಲಿ ನೆಲೆಸಿರುವ ಬುಡಕಟ್ಟು ಸಮುದಾಯಗಳ ಆರಾಧ್ಯ ದೈವ ಕಾವಲು ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಹಲವು ಪವಾಡ ಹಾಗೂ ಮಹಿಮೆಗಳ ಮೂಲಕ ಪ್ರಸಿದ್ಧಿಯನ್ನು ಪಡೆದಿರುವ ಚೌಡೇಶ್ವರಿ ದೇವಿಯು ಸುತ್ತಮುತ್ತಲ ಗ್ರಾಮಗಳ ಆರಾದ್ಯ ದೇವತೆಯಾಗಿದ್ದಾಳೆ. ಜಾತ್ರೆಯ ಸಂದರ್ಭದಲ್ಲಿ ಬುಡಕಟ್ಟು ಸಂಸ್ಕೃತಿಯ ಆಚರಣೆಗಳು ಅನಾವರಣಗೊಂಡವು. ಬಣ್ಣಬಣ್ಣದ ಬಾವುಟಗಳಿಂದ ಸಿಂಗಾರಗೊಂಡ 30ಅಡಿ ಎತ್ತರದ ತೇರಿಗೆ ಎತ್ತಿನಹಟ್ಟಿ ಗೌಡರ ಮನೆಯಿಂದ ಬಲಿ ಅನ್ನದ ಸೋರೆಹೊತ್ತು ತರಲಾಯಿತು. ಹಾಗೂ ಜೋಗಿಹಟ್ಟಿಯಿಂದ ಮೊಸರು ಕುಂಭ, ಜಿನಿಗೆಹಾಲು, ಕಡಬನಕಟ್ಟೆ, ಭೀಮಗೊಂಡನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಂದ ಕಾಸುಮೀಸಲು ತಂದು ರಥಕ್ಕೆ ಅರ್ಪಿಸಿ ರಥದ ಚಕ್ರಗಳಿಗೆ ಬಲಿಅನ್ನದ ಎಡೆಹಾಕಿ ಪೂಜೆ ಸಲ್ಲಿಸಿದರು.
ನಂತರ ಸಂಪ್ರದಾಯದಂತೆ ಮುಕ್ತಿಬಾವುಟ ಹಾರಾಜು ಪ್ರಕ್ರಿಯೆಯಲ್ಲಿ ಗೌಡಗೆರೆ ಗ್ರಾ.ಪಂ.ಸದಸ್ಯ ತಿಪ್ಪೇಸ್ವಾಮಿ ರೂ.71ಸಾವಿರಕ್ಕೆ ತೆಗೆದುಕೊಂಡರು. ನಂತರ ಮಹಾ ಮಂಗಳಾರತಿ ನೆರವೇರಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಹಲವು ಬಣ್ಣಗಳ ಬಾವುಟಗಳಿಂದ ಸುಂದರವಾಗಿ ಅಲಂಕೃತಗೊAಡ ರಥವನ್ನು ದೇವಾಲಯದ ಎದುರು ಇರುವ ಪಾದಗಟ್ಟೆಯ ಬಳಿಗೆ ನೆರೆದ ಸಾವಿರಾರು ಭಕ್ತರು ಎಳೆದು ತಂದು ಪೂಜೆಯನ್ನು ಮಾಡಿ, ಪುನಃ ದೇವಾಲಯಸ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ದೇವರನ್ನು ಗುಡಿದುಂಬಿಸಲಾಯಿತು. ಇದೇವೇಳೆ ನೆರೆದ ಸಾವಿರಾರು ಭಕ್ತರು ರಥಕ್ಕೆ ಕಾಳುಮೆಣಸು, ಚೂರುಬೆಲ್ಲ, ಮಂಡಕ್ಕಿ ಸೇರಿದಂತೆ ದವಸ ದಾನ್ಯಗಳನ್ನು ಎರಚಿ ಭಕ್ತಿಯನ್ನು ಸಮರ್ಪಿಸಿದರು.
ಇದೇವೇಳೆ ರಥೋತ್ಸವಕ್ಕೆ ಜಾನಪದ ವಾದ್ಯಗಳಾದ ತಪ್ಪಡಿ, ಕಹಳೆ, ಉರುಮೆಗಳು, ಜನಪದೆ ಕ್ರೀಡೆ ಕೋಲಾಟ, ನಂದಿಕೋಲು, ನಂಧಿಜ್ವಜ ಮೆರುಗು ತುಂಬಿದವು. ಹರಕೆ ಹೊತ್ತ ನೂರಾರು ಭಕ್ತರು ಹರಕೆಯನ್ನು ಪೂರೈಸಿದರು.
ಮೂರು ದಿನಗಳ ಜಾತ್ರೆ ಇದಾಗಿದ್ದು, ಸಾವಿರಾರು ಭಕ್ತರು ಬೇಟಿ ನೀಡುವ ಹಿನ್ನೆಲೆಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳಲ್ಲಿ ತಿಂಡಿ ತಿನಿಸುಗಳು ಮತ್ತು ಅಲಾಂಕಾರಿಕ ವಸ್ತುಗಳ ಕೊಳ್ಳುವಲ್ಲಿ ಜನರು ನಿರತರಾಗಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಇದೇವೇಳೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ದೇವಾಲಯ ಸಮಿತಿ ಅದ್ಯಕ್ಷ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ(ಎತ್ತಿನಹಟ್ಟಿಗೌಡ್ರು), ಕಾರ್ಯದರ್ಶಿ ಎಂ.ವೈ.ಟಿ.ಸ್ವಾಮಿ, ಮುಖಂಡರಾದ ಜಿ.ಟಿ.ದೇವರಾಜ, ಜೆ.ಆರ್.ರವಿಕುಮಾರ್, ಶ್ರೀಕಾಂತ್, ಮುದಿಯಪ್ಪ, ಬೋರಸ್ವಾಮಿ, ಮಂದಯ್ಯರನಾಗರಾಜ, ಎಸ್.ಓಬಣ್ಣ, ಚಿನ್ನಯ್ಯ, ಹನುಮಣ್ಣ, ನಾಮಲ ಓಬಯ್ಯ, ಆರ್.ಪಾಲಯ್ಯ ಸೇರಿದಂತೆ ಸಾವಿರಾರು ಭಕ್ತರು ಇದ್ದರು.

ರೋಮಾಂಚನಗೊಳಿಸಿದ ಜೋಡೆತ್ತಿನಬಂಡಿ ಓಟ
ಇದೇಮೊದಲ ಬಾರಿಗೆ ಜಾತ್ರೆಯಲ್ಲಿ ಜೋಡೆತಿನ ಬಂಡಿ ಓಟದ ಸ್ಪರ್ಧೇಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೇಯಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ೪೮ಜೋಡಿ ವಿವಿಧ ತಳಿ ರಾಸುಗಳು ಭಾಗವಹಿಸಿದ್ದವು. ಮೊದಲ ಸುತ್ತಿನ ಓಟದ ಸ್ಪರ್ಧೇಯಲ್ಲಿ 13 ಜೋಡಿ ರಾಸುಗಳು ಜಯಗಳಿದ್ದು, ರಥೋತ್ಸವದ ನಿಮಿತ್ತ ಆಟವನ್ನು ಬುಧವಾರಕ್ಕೆ ಮುಂದೂಡಲಾಯಿತು. ರಾಸುಗಳ ರಭಸವಾದ ಓಟವನ್ನು ಕಣ್ತುಂಬಿಕೊಳ್ಳಲು 4ಸಾವಿರಕ್ಕೂ ಅಧಿಕ ಜನರು ಭಾಗವಹಿಸಿ ಶಿಳ್ಳೆ, ಕೇಕೆ ಹಾಕುವ ಮೂಲಕ ಜೋಡೆತ್ತಿನ ಗಾಡಿ ಓಟದ ಸ್ಪರ್ಧೇಗೆ ಹುರಿದುಂಬಿಸಿದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page