ಹಿರಿಯೂರು:
ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿರುವ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರು ಸೂರ್ಯ ಚಂದ್ರರಿರುವವರೆಗೂ ಅಮರವಾಗಿರುತ್ತದೆ, ಜಕಣಾಚಾರಿಯವರ ಕುಶಲ ಕೆತ್ತನೆಗಳು ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ ಎಂಬುದಾಗಿ ಶಿಕ್ಷಕ ರಾಘವೇಂದ್ರ ಆಚಾರಿ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ, ಅವರು ಮಾತನಾಡಿದರು.
ವಿಷ್ಣುವರ್ಧನನ ಕಾಲದಲ್ಲಿ ಅಮರಶಿಲ್ಪಿ ಜಕಣಾಚಾರಿ ಬೇಲೂರು ಮತ್ತು ಹಳೇಬೀಡಿನ ದೇವಾಲಯದಲ್ಲಿ ಶಿಲ್ಪಗಳನ್ನು ಕೆತ್ತನೆ ಮಾಡಿ ಹೆಸರಾಗಿದ್ದರು. ಅವರು ತಮ್ಮ ಇಡೀ ಜೀವನವನ್ನು ಶಿಲ್ಪಕಲೆಗೆ ಮೀಸಲಿಟ್ಟಿದ್ದರು, ಅವರ ಮಗ ಡಕಣಾಚಾರಿ ಸಹ ಶಿಲ್ಪಿಯಾಗಿದ್ದು, ಚೆನ್ನಿಗರಾಯ ದೇವಸ್ಥಾನದಂತಹ ಅದ್ಭುತ ಕಲಾಕೃತಿಯನ್ನು ನಿರ್ಮಿಸಿದ್ದಾರೆ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ವಹಿಸಿದ್ದರು. ಅಧಿಕಾರಿಗಳು ಮತ್ತು ವಿಶ್ವಕರ್ಮ ಸಮಾಜದ ಮುಖಂಡರು ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಹೂವಿನ ದಾಸಪ್ಪ, ಸೀತಾರಾಮ ಆಚಾರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ವಿಶ್ವಕರ್ಮ ಪರಿಷತ್ ರಾಷ್ಟ್ರೀಯ ಮಂಡಳಿ ನಿರ್ದೇಶಕ ಎಲ್, ನಾರಾಯಣಾಚಾರ್ , ನಗರಸಭೆ ಪೌರಾಯುಕ್ತರಾದ ಮಹಂತೇಶ್, ವಿಶ್ವಕರ್ಮ ಸಮಾಜದ ಹಿರಿಯ ಮುಖಂಡ ಸಿ.ನಾರಾಯಣಚಾರ್, ಶಿಕ್ಷಣ ಇಲಾಖೆಯ ಮನೋಹರ್ , ಶ್ರೀನಿವಾಸ ರೆಡ್ಡಿ, ನಗರಸಭೆ ಸದಸ್ಯ ಬಾಲು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments