ಚಿತ್ರದುರ್ಗ ಆ.20:
ಚಿತ್ರದುರ್ಗ ನಗರದ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಭೇದಿ ಪ್ರಕರಣಗಳು ವರದಿ ಹಿನ್ನಲೆಯಲ್ಲಿ ಆಶ್ರಯ ಬಡಾವಣೆಯ ಒಂದು ಮತ್ತು ಎರಡನೇ ಹಂತಗಳಲ್ಲಿ ಮನೆ ಮನೆ ಭೇಟಿ ಅಂತರ್ ವೈಯಕ್ತಿಕ ಆಪ್ತ ಸಮಾಲೋಚನೆ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಭಾನುವಾರ ಆಶ್ರಯ ಬಡಾವಣೆಯ ಹಿರಿಯ ನಾಗರಿಕರು, ಮಹಿಳೆಯರು ಇತರೆ ಕುಟುಂಬದ ಸದಸ್ಯರಿಗೆ ಆರೋಗ್ಯ ಇಲಾಖೆಯ ಕ್ಷಿಪ್ರ ನಿಗಾವಣ ತಂಡ, ಆಶಾ ಕಾರ್ಯಕರ್ತೆಯರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಾಶಿ ಅವರ ನೇತೃತ್ವದಲ್ಲಿ ಮಾಹಿತಿ ಶಿಕ್ಷಣ ಸಂವಹನ ಆಪ್ತ ಸಮಾಲೋಚನೆ ಕಾರ್ಯಕ್ರಮ ಜರುಗಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ಕಾಯಿಸಿ ಆರಿಸಿದ ನೀರಿನ ಬಳಕೆ ಮಾಡಿ. ಮಸಾಲೆ ಪದಾರ್ಥಗಳನ್ನು ತಿನ್ನಬೇಡಿ. ಪರಿಸರ ಸ್ವಚ್ಛತೆ ಕಾಪಾಡಿ ನೊಣಗಳಿಂದ ತಿನ್ನುವ ಆಹಾರವನ್ನು ರಕ್ಷಣೆ ಮಾಡಬೇಕು. ಬಯಲು ಮಲವಿಸರ್ಜನೆ ಮಾಡಬೇಡಿ. ಘನ ತ್ಯಾಜ್ಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಹರಡಬಾರದು. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದಲ್ಲೇ ಇರುವ ತಾತ್ಕಾಲಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ ಪಡೆಯಿರಿ. ಭಯ ಆತಂಕ ದೂರವಾಗಲಿ ಪರಿಸರ ಸ್ವಚ್ಛತೆಯ ಕಾಳಜಿ ನಿಮ್ಮದಾಗಲಿ ಎಂದು ಮನವಿ ಮಾಡಿದರು.
ಮಾರುತಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್ ಅವರು ಕೈ ತೊಳೆಯುವ ವಿಧಾನ ಮತ್ತು ಓಆರ್ಎಸ್ ದ್ರಾವಣ ಸಿದ್ಧಪಡಿಸುವ ವಿಧಾನ ತಿಳಿಸಿಕೊಟ್ಟರು.
ನಗರಸಭಾ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯ ಜರುಗಿಸಿದರು. ಮನೆ ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಯಿತು.
ಜಾಗೃತಿ ಸಪ್ತಾಹದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರೆಡ್ಡಿ, ಆರೋಗ್ಯ ಇಲಾಖೆ ಸಿಬ್ಬಂದಿ, ನಗರಸಭೆಯ ಸಿಬ್ಬಂದಿಗಳು ಭಾಗವಹಿಸಿದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments