ಜನಜಾಗೃತಿ ಸಪ್ತಾಹ: ಆಶ್ರಯ ಬಡಾವಣೆ ಮನೆ ಮನೆ ಭೇಟಿ ಭಯ, ಆತಂಕ ದೂರವಾಗಲಿ: ಪರಿಸರ ಸ್ವಚ್ಛತೆ ಕಾಳಜಿ ನಿಮ್ಮದಾಗಲಿ -ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ

by | 20/08/23 | ಆರೋಗ್ಯ


ಚಿತ್ರದುರ್ಗ ಆ.20:
ಚಿತ್ರದುರ್ಗ ನಗರದ ಸಮೀಪದ ಆಶ್ರಯ ಬಡಾವಣೆಯಲ್ಲಿ ವಾಂತಿ ಭೇದಿ ಪ್ರಕರಣಗಳು ವರದಿ ಹಿನ್ನಲೆಯಲ್ಲಿ ಆಶ್ರಯ ಬಡಾವಣೆಯ ಒಂದು ಮತ್ತು ಎರಡನೇ ಹಂತಗಳಲ್ಲಿ ಮನೆ ಮನೆ ಭೇಟಿ ಅಂತರ್ ವೈಯಕ್ತಿಕ ಆಪ್ತ ಸಮಾಲೋಚನೆ ನಡೆಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಭಾನುವಾರ ಆಶ್ರಯ ಬಡಾವಣೆಯ ಹಿರಿಯ ನಾಗರಿಕರು, ಮಹಿಳೆಯರು ಇತರೆ ಕುಟುಂಬದ ಸದಸ್ಯರಿಗೆ ಆರೋಗ್ಯ ಇಲಾಖೆಯ ಕ್ಷಿಪ್ರ ನಿಗಾವಣ ತಂಡ, ಆಶಾ ಕಾರ್ಯಕರ್ತೆಯರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಸುರಕ್ಷತಾ ಅಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಾಶಿ ಅವರ ನೇತೃತ್ವದಲ್ಲಿ ಮಾಹಿತಿ ಶಿಕ್ಷಣ ಸಂವಹನ ಆಪ್ತ ಸಮಾಲೋಚನೆ ಕಾರ್ಯಕ್ರಮ ಜರುಗಿಸಲಾಯಿತು.
ಈ ವೇಳೆ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕಾಶಿ, ಕಾಯಿಸಿ ಆರಿಸಿದ ನೀರಿನ ಬಳಕೆ ಮಾಡಿ. ಮಸಾಲೆ ಪದಾರ್ಥಗಳನ್ನು ತಿನ್ನಬೇಡಿ. ಪರಿಸರ ಸ್ವಚ್ಛತೆ ಕಾಪಾಡಿ ನೊಣಗಳಿಂದ ತಿನ್ನುವ ಆಹಾರವನ್ನು ರಕ್ಷಣೆ ಮಾಡಬೇಕು. ಬಯಲು ಮಲವಿಸರ್ಜನೆ ಮಾಡಬೇಡಿ. ಘನ ತ್ಯಾಜ್ಯ ವಸ್ತುಗಳನ್ನು ಸರಿಯಾದ ಜಾಗದಲ್ಲಿ ವಿಲೇವಾರಿ ಮಾಡಬೇಕು. ಎಲ್ಲೆಂದರಲ್ಲಿ ಹರಡಬಾರದು. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಹತ್ತಿರದಲ್ಲೇ ಇರುವ ತಾತ್ಕಾಲಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರಿಂದ ಚಿಕಿತ್ಸೆ ಪಡೆಯಿರಿ. ಭಯ ಆತಂಕ ದೂರವಾಗಲಿ ಪರಿಸರ ಸ್ವಚ್ಛತೆಯ ಕಾಳಜಿ ನಿಮ್ಮದಾಗಲಿ ಎಂದು ಮನವಿ ಮಾಡಿದರು.
ಮಾರುತಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಯಶಸ್ ಅವರು ಕೈ ತೊಳೆಯುವ ವಿಧಾನ ಮತ್ತು ಓಆರ್‍ಎಸ್ ದ್ರಾವಣ ಸಿದ್ಧಪಡಿಸುವ ವಿಧಾನ ತಿಳಿಸಿಕೊಟ್ಟರು.
ನಗರಸಭಾ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯ ಜರುಗಿಸಿದರು. ಮನೆ ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಯಿತು.
ಜಾಗೃತಿ ಸಪ್ತಾಹದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಆರೋಗ್ಯ ನಿರೀಕ್ಷಣಾಧಿಕಾರಿ ಗಂಗಾಧರೆಡ್ಡಿ, ಆರೋಗ್ಯ ಇಲಾಖೆ ಸಿಬ್ಬಂದಿ, ನಗರಸಭೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page