ಚಳ್ಳಕೆರೆ ಜನಧ್ವನಿ ವಾರ್ತೆ ಏ 26.
ಕಾಂಗ್ರೆಸ್ ಸರಕಾರದ ಸಿದ್ದರಾಮಯ್ಯ ಅವಧಿಯಲ್ಲಿ ಚುನಾವಣೆಗೂ ಮುನ್ನ ಮತದಾರರಿಗೆ ನೀಡಿದ ಭರವಸೆಗಳನ್ನು ಪೂರೈಸಿದ್ದು ಈ ಬಾರಿಯೂಸಹ ಮನೆ ಮೆನಗೆ ಗ್ಯಾರೆಂಟ್ ಕಾರ್ಡ್ಗಳನ್ನು ವಿತರಣೆ ಮಾಡಿದ್ದು ಸರಕಾರ ಬಂದ ತಕ್ಷಣ ಜಾರಿಗೊಳಿಸಲಾಗುವುದು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಬಿರುಸಿನ ಚುನಾವಣೆ ಪ್ರಚಾರದಲ್ಲಿ ರೋಡ್ ಶೋ ಹಾಗೂ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಸರಕಾರದ ಜನ ಪರಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡುವ ಮೂಲಕ ಮತಯಾಚನೆ ನಡೆಸಿದರು.
ಕಾಂಗ್ರೆಸ್ ಪಕ್ಷಕ್ಕೆ ಶತಮಾನಕ್ಕಿಂತಲೂ ಹೆಚ್ಚಿನ ಇತಿಹಾಸವಿದೆ, ಗರೀಬಿ ಹಠಾವೋ, ಉಳುವವನೇ ಹೊಲದೊಡೆಯ, ಸಾಮಾಜಿಕ ಭದ್ರತಾ ಪಿಂಚಣಿ ,ಅನ್ನಭಾಗ್ಯ ಸೇರಿಂದತೆ ಹತ್ತು ಹಲವು ಭಾಗ್ಯದ ಯೋಜನೆಗಳನ್ನು ಜಾರಿಗೆ ತಂದು ಎಲ್ಲಾ ಸಮುದಾಯಗಳ ಬಡ ಹಾಗೂ ತಳಮಟ್ಟದ ಕಟ್ಟಕಡೆಯ ಕುಟುಂಬಗಳಿಗೆ ಕಾಂಗ್ರೆಸ್ ಸರಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ.
ದಿ. ಇಂದಿರಾಗಾAಧಿ ಪ್ರಧಾನಮಂತ್ರಿಯಾಗಿದ್ದಾಗ ಬೀಕರ ಬರ ಪರಿಸ್ಥಿತಿಯಲ್ಲಿ ಕೆಂಪು ಜೋಳ, ಗೋದಿ ನೀಡುವ ಮೂಲಕ ಬಡವರ ಹಸಿವನ್ನು ನೀಗಿಸಿರುವುದು ಇಂದಿಗೂ ಬಡ ಕುಟುಂಬದ ಜನರು ನೆನೆಸಿಕೊಳ್ಳುತ್ತಿರುವುದೇ ಸಾಕ್ಷಿಯಾಗಿದೆ ಆದ್ದರಿಂದ ಬಡಕುಟುಂಬದ ಜನರು ಈಗಲೂ ಕಾಂಗ್ರೆಸ್ ಸರಕಾರದ ಬಗ್ಗೆ ಅಭಿಮಾನ ತೋರುತ್ತಿದ್ದಾರೆ.
ಹೀಗೆ ಅನೇಕ ಯೋಜನೆಗಳು ಕಾಂಗ್ರೆಸ್ ಅನುಷ್ಠಾನಗೊಳಿಸಿದೆ, ಈ ರೀತಿಯ ಜನಪರ ಯೋಜನೆಗಳು ಕಾಂಗ್ರೆಸ್ ಪಕ್ಷದಿಂದ ಮಾತ್ರ ನಿರೀಕ್ಷಿಸಲು ಸಾಧ್ಯ, ಬಿಜೆಪಿಯಿಂದ ಬರೀ ಬೆಲೆ ಏರಿಕೆ ಮಾತ್ರ ಸಾಧ್ಯ, ಜನತೆ ನುಡಿದಂತೆ ನಡೆಯುವ ಪಕ್ಷ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಬೇಕು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬರುವುದು ಖಚಿತ ಆದ್ದಿರಂದ ಈಬಾರಿಯೂ ಕಾಂಗ್ರೆಸ್ ಪಕ್ಷದ ಕೈ ಗುರುತಿಗೆ ಮತ ನೀಡಿ ಜಯಶೀಲರನ್ನಾಗಿ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ವಿವಿಧ ಸಮುದಾಯದ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
0 Comments