ಜನರ ಮೇಲೆ ಹೆಚ್ಚಿನ ಹೊರೆಯಾಗದಂತೆ, ತೆರಿಗೆ ಪದ್ದತಿ ಅಳವಡಿಸಿಕೊಂಡು ಜನಪರ ಆಡಳಿತ ನೆಡಿಸಿದ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ

by | 19/02/23 | ಚರಿತ್ರೆ

ಚಿತ್ರದುರ್ಗ ಫೆ.19: ಕೃಷ್ಣದೇವರಾಯನ ತರುವಾಯ ಭಾರತದಲ್ಲಿ ಬೃಹತ್ ಹಿಂದು ಸಾಮ್ರಾಜ್ಯ ಕಟ್ಟಿದ ನಾಯಕ ಛತ್ರಪತಿ ಶಿವಾಜಿ. ಜನರ ಮೇಲೆ ಹೆಚ್ಚಿನ ಹೊರೆಯಾಗದಂತೆ, ತೆರಿಗೆ ಪದ್ದತಿ ಅಳವಡಿಸಿಕೊಂಡು ಜನಪರ ಆಡಳಿತ ನೆಡಿಸಿದ ಎಂದು ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಜಿಲ್ಲಾ ಮರಾಠ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ, ನಗರದ ತ.ರಾ.ಸು ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಲಾದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ತಮ ಸೈನ್ಯ ಸಂಘಟನೆ, ದೇಶಪ್ರೇಮಿ ಹಾಗೂ‌ ಆಡಳಿತಗಾರನಾಗಿ‌‌ ಶಿವಾಜಿ‌ ರೂಪುಗೊಳ್ಳಲು ತಾಯಿ ಜಿಜಾಬಾಯಿ ಕಾರಣ.‌ ಚಿಕ್ಕದಿನಿಂದಲೇ ಮಹಾಭಾರತ ಹಾಗೂ ರಾಮಯಣ ಕಥೆಗಳನ್ನು ಶಿವಾಜಿಗೆ ಹೇಳಿವುದರ ಮೂಲಕ ದೇಶದ ಸಂಸ್ಕೃತಿಯನ್ನು ಪರಿಚಯ ಮಾಡಿಸಿದಳು. ತಾಯಿ‌ ಜಿಜಾಬಾಯಿ ಒತ್ತಾಸೆಯಂತೆ ಶಿವಾಜಿ ಮರಾಠ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಶಿವಾಜಿ ಅನುಸರಿಸದ ಗೆರಿಲ್ಲಾ ಯುದ್ಧ ತಂತ್ರ ಜೊತೆಗೆ ಶಕ್ತಿ ಮತ್ತು ಯುಕ್ತಿಯಿಂದಾಗಿ ಸಾಮ್ರಾಜ್ಯ ವಿಸ್ತರಣೆಯಾಯಿತು. ಗೆರಿಲ್ಲಾ ಮಾದರಿ ಯುದ್ದ ತಂತ್ರವನ್ನು ಇಂದಿಗೂ ವಿಶ್ವದ ನಾನಾಕಡೆ ಬಳಸುವುದನ್ನು ನಾವು ಕಾಣಬಹುದು ಎಂದರು.

ಐ.ಎನ್.ಒ ರಾಜ್ಯ ಮುಖ್ಯ ಸಂಚಾಲಕ ಬಿ.ಎಸ್. ಮಂಜುನಾಥಸ್ವಾಮಿ ವಿಶೇಷ ಉಪನ್ಯಾಸ ನೀಡಿ, ಮೊಘಲ್ ಹಾಗೂ ಆದಿಲ್‌ಷಾಯಿಗಳಿಗೆ‌ ತಲೆ ಬಾಗದೇ ಶಿವಾಜಿ ಹಿಂದೂ ಸಾಮ್ರಾಜ್ಯ ಸ್ಥಾಪನೆ ಮಾಡಿದ. ಆಡಳಿತದಲ್ಲಿ ಫರ್ಷಿಯನ್ ಭಾಷೆಯ ಬದಲು ಸಂಸ್ಕೃತ ಭಾಷೆ ಪ್ರಾತಿನಿಧ್ಯ ನೀಡಿದ.ಧಾರ್ಮಿಕ ಸುಧಾರಣೆ ಮಾಡಿದ. ಇಂದಿನ ಯುವಕರು‌‌ ಶಿವಾಜಿಯ ಧೈರ್ಯ ಸಾಹಸಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮರಾಠ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸುರೇಶ್ ರಾವ್ ಜಾದವ್, ಕಾರ್ಯದರ್ಶಿ ಗೋಪಾಲರಾವ್ ಜಾದವ್, ಜಿಜಾಮಾತ ಮಹಿಳಾ ಮಂಡಳಿ ಅಧ್ಯಕ್ಷೆ ಜಿ.ಉಷಾಬಾಯಿ, ಯುವ ಮುಖಂಡರಾದ ನಿತೀನ್ ಜಾಧವ್ , ರೋಹಿತ್ ಗಾಯಕವಾಡ್, ಕಿರಣ್ , ವಿನಯ್ ಜಾದವ್ ಸೇರಿದಂತೆ ಮರಾಠ ಸಮಾಜದ ಮುಖಂಡರು ಹಾಗೂ ಗಣ್ಯರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಸ್ವಾಗತಿಸಿದರು. ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಕಾರ್ಯಕ್ರಮ ನಿರೂಪಿಸಿದರು. ಲೋಕೇಶ ಪಲ್ಲವಿ ಮತ್ತು ತಂಡದವರಿಂದ ಗೀತಗಾಯನ ಪ್ರಸ್ತುತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಬುರಜನಹಟ್ಟಿಯ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಅಲಂಕೃತ ಟ್ಯಾಕ್ಟರ್‍ನಲ್ಲಿ ಛತ್ರಪತಿ ಶಿವಾಜಿ ಪುತ್ಥಳಿಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಗಾಂಧಿ ಸರ್ಕಲ್, ಎಸ್.ಬಿ.ಐ ಸರ್ಕಲ್, ಪ್ರವಾಸಿ ಮಂದಿರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ತ.ರಾ.ಸು ರಂಗಮಂದಿರ ತಲುಪಿತು. ಡೊಳ್ಳು ಕುಣಿತ, ತಮಟೆ ಹಾಗೂ ನಂದಿ ಧ್ವಜ ಕುಣಿತ
ಸೇರಿದಂತೆ ಇತರೆ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page