ಜನಸಾಗರದ ನಡುವೆ ಕೋಟೆನಾಡಿನ ಹಿಂದೂಮಹಾಗಣಪತಿ ಶೋಭಯಾತ್ರೆ.

by | 08/10/23 | ಸುದ್ದಿ

ಚಿತ್ರದುರ್ಗ ಅ.8 ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಗಣೇಶನ ಶೋಭಾಯಾತ್ರೆ ನಡೆಯೋದು ಕೋಟೆನಾಡು ಚಿತ್ರದುರ್ಗದಲ್ಲಿ. ಇಂದು ನಡೆದ ಅದ್ದೂರಿ ಶೋಭಾಯಾತ್ರೆಯಲ್ಲಿ ಎಲ್ಲಿ ನೋಡಿದ್ರು ಜನಸಾಗರ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಬೃಹತ್ ಶೋಭಾಯಾತ್ರೆಯಲ್ಲಿ ಪಾಲ್ಗೊಂಡು, ಡಿಜೆ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿದರು..
ಹೀಗೆ ಕೇಸರಿಮಯವಾಗಿರುವ ನಗರದ ಪ್ರಮುಖ ರಸ್ತೆಗಳು, ಎತ್ತ ಕಡೆ ಕಣ್ಣಾಯಿಸಿದ್ರು ಜನಸಾಗರ. ಪೋಲೀಸರ ಸರ್ಪಗಾವಲಿನಲ್ಲಿ ಪುರುಷರಗಿಂತ ನಾವು ಯಾವುದ್ರಲ್ಲೂ ಕಮ್ಮಿ ಇಲ್ಲ ಎಂಬಂತೆ ಡಿ ಜೆ ಸೌಂಡಿಗೆ ಟಪ್ಪಾಂಗುಚ್ಚಿ ಹೆಜ್ಜೆ ಹಾಕ್ತಿರೋ ಮಹಿಳೆಯರು. ಈ ದೃಶ್ಯಗಳು ಕಂಡು ಬಂದಿದ್ದು ಕಲ್ಲಿನ ಕೋಟೆ ಖ್ಯಾತಿಯ ಚಿತ್ರದುರ್ಗದಲ್ಲಿ. ಹೌದು, ಇಂದು ಏಷ್ಯಾದಲ್ಲಿಯೇ ಪ್ರಸಿದ್ಧಿಯನ್ನು ಪಡೆದಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಅದ್ಧೂರಿಯಾಗಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಜರುಗಿತು. ಬೆಳಗ್ಗೆ 11 ಗಂಟೆಗೆ ನಗರದ ಶಿವಶಕ್ತಿ ಮಂಟಪದಲ್ಲಿ ಮಹಾರಾಷ್ಟ್ರದ ಕನ್ನೇರಿಮಠದ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಚಾಲನೆ ನೀಡಿದರು.

ಕೋಟೆನಾಡು ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆಯಲ್ಲಿ ಗೂಡ್ಸೆ ಚಿತ್ರ ಪ್ರದರ್ಶನ

ಬಳಿಕ ಶುರುವಾದ ಬೃಹತ್ ಶೋಭಾಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿತು. ಅದ್ರಲ್ಲಂತೂ ಡಿಜೆ ಸದ್ದಿಗೆ ಹೆಜ್ಜೆ ಹಾಕಿದ ಯುವಕರು ರಸ್ತೆಯುದ್ದಕ್ಕೂ ಜೈ ಶ್ರೀರಾಮ್, ಜೈ ಭಜರಂಗಿ ಎಂದು ಘೋಷ ವಾಕ್ಯ ಕೂಗುವ ಮೂಲಕ ಭರ್ಜರಿ ಸ್ಟೆಪ್ ಹಾಕಿದರು. ಅದೇ ರೀತಿ ಯುವಕರಿಗಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಯುವತಿಯರು ಕೂಡ ಡಿಜೆ ಸದ್ದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ತಮ್ಮ ಸ್ನೇಹಿತೆಯರೊಂದಿಗೆ ಆಗಮಿಸಿ ಭರ್ಜರಿ ಎಂಜಾಯ್ ಮಾಡಿದರು.

ಪ್ರತೀ ವರ್ಷದಂತೆಯೇ ಈ ವರ್ಷವೂ ಅದ್ದೂರಿ ಶೋಭಾಯಾತ್ರೆ ನಡೆಯುತ್ತಿದೆ. ನಮ್ಮ ಜಿಲ್ಲೆಯಲ್ಲಿ ಐತಿಹಾಸಿಕ ಉತ್ಸವ ನಡೆಯುತ್ತಿರೋದು ನಮಗೆ ಹೆಮ್ಮೆ ಅಂತಾರೆ ಸ್ಥಳೀಯರು.

ಚಳ್ಳಕೆರೆ ಗೇಟ್ ಬಳಿಯಿಂದ ಹೊರಟ ಬೃಹತ್ ಮೆರವಣಿಗೆ ಮದಕರಿ ವೃತ್ತ, ಗಾಂಧಿ ಸರ್ಕಲ್, ಕನಕ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಇನ್ನೂ ಮೊಟ್ಟ ಮೊದಲ ಬಾರಿಗೆ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಹೊನ್ನಾಳಿ ಹುಲಿ ರೇಣುಕಾಚಾರ್ಯ ಮೆರವಣಿಗೆಯಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ರೇಣುಕಾಚಾರ್ಯ ಕಂಡ ಕೂಡಲೇ ಅಭಿಮಾನಿಗಳು ಸೆಲ್ಪಿಗಾಗಿ ಮುಗಿಬಿದ್ದರು.

ಪ್ರತೀ ಬಾರಿ ಮೆರವಣಿಗೆ ಕುರಿತು ಕೇಳ್ತಿದ್ದೆವು, ಆದ್ರೆ ಈ ಬಾರಿ ಬೃಹತ್ ಶೋಭಾಯಾತ್ರೆ‌ ಭಾಗಿಯಾಗಲು ಬಂದಿದ್ದೀನಿ. ದೇಶದಲ್ಲಿಯೇ ಕೋಟೆನಾಡಿನ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಪ್ರಸಿದ್ದಿಯನ್ನು ಪಡೆದಿದೆ. ಸುಮಾರು 10 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನರು ರಾಜ್ಯದ ನಾನಾ ಭಾಗಗಳಿಂದ ಆಗಮಿಸಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಶೋಭಾಯಾತ್ರೆಗೆ ಬಂದಿರೋದು ನನಗೆ ಖುಷಿ ತಂದಿದೆ ಎಂದರು.

ಒಟ್ಟಾರೆ ಪ್ರತಿ ವರ್ಷಕ್ಕಿಂತ ಈ ವರ್ಷ ಶೋಭಾಯಾತ್ರೆಗೆ ವಿಶೇಷವಾಗಿ ತರಿಸಿದ್ದ ಆಕರ್ಷಕವಾದ ಮುಂಬೈ ಡಿಜೆಗಳ ಬಾರಿ ಸದ್ದಿಗೆ ಯುವಕ ಯುವತಿಯರು ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದರು. ಮೆರವಣಿಗೆ ಆರಂಭ ಆಗ್ತಿದ್ದಂತೆ, ವಿವಿಧ ಜಿಲ್ಲೆಗಳಿಂದ ಬಂದಿದ್ದ ಲಕ್ಷಾಂತರ ಯುವ ಮನಸುಗಳು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಎಂಜಾಯ್ ಮಾಡಿದರು.

ಕೇಂದ್ರ ಸಚಿವ ನಾರಾಣಸ್ವಾಮಿ.ಜಿಲ್ಲಾ ಉಸ್ತುವರಿ ಸಚಿವ ಡಿ .ಸುಧಾಕರ್.ಶಾಸಕರಾದ ಟಿ.ರಘುಮೂರ್ತಿ.ಕೆ.ಸಿ.ವೀರೇಂದ್ರಪಪ್ಪಿ
ಮಾಜಿ ಸಂಸದ ಚಂದ್ರಪ್ಪ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page