ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚೆನ್ನಮ್ಮಾಜಿ ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ

by | 23/10/23 | ಸುದ್ದಿ


ಚಿತ್ರದುರ್ಗ ಅ.23:
ಕಿತ್ತೂರು ರಾಣಿ ಚೆನ್ನಮ್ಮ ಇಡೀ ಮಾನವ ಸಮಾಜಕ್ಕೆ ಹಾಕಿಕೊಟ್ಟ ದಾರಿಯಲ್ಲಿ ನಾವು ಮತ್ತು ನಮ್ಮ ಮಕ್ಕಳನ್ನು ನಡೆಸೊಣ, ನಮ್ಮ ಮಕ್ಕಳಲ್ಲಿಯೂ ಸ್ವಾಭಿಮಾನದ ಕಿಚ್ಚು, ಹೋರಾಟದ ಮನೋಭಾವ, ಎಲ್ಲರನ್ನೂ ಪ್ರೀತಿಸುವ ಪ್ರೀತಿ ಬೆಳೆಸೋಣ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಸಮಾರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸ್ವರಾಜ್ಯ ಮತ್ತು ಸ್ವಾತಂತ್ರ್ಯ ಇನ್ನೊಬ್ಬರ ಅಡಿಯಾಗಿರಬಾರದು ಎಂದು ನಂಬಿದ್ದ ಚೆನ್ನಮ್ಮ ತನ್ನ ಪ್ರಜೆಗಳ ಹಿತ ಕಾಯುವ ಸಂಕಲ್ಪ ತೊಟ್ಟು ಬದುಕಿದ ಏಕೈಕ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ನಮ್ಮ ಮಕ್ಕಳಿಗೆ ಸ್ವಾಭಿಮಾನದ ಕಿಚ್ಚು, ಹೋರಾಟದ ಛಲ ಬರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಸಂದೇಶ ಪಾಲನೆ ಮಾಡಬೇಕು. ಮಹನೀಯರನ್ನು ಯಾವುದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ಸ್ವಾರ್ಥ ಮನೋಭಾವದಿಂದಾಗಿ ಪ್ರಸ್ತುತ ದಿನಗಳಲ್ಲಿ ಜಗತ್ತು ವಿನಾಶದ ಅಂಚಿಗೆ ಹೋಗುತ್ತಿದೆ. ಈ ಹಿನ್ನಲೆಯಲ್ಲಿ ಮಹನೀಯರ ಸಂದೇಶವನ್ನು ನೆನೆಯುವುದರ ಜೊತೆಗೆ ನಾವು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದರು.
ನಿವೃತ್ತ ಉಪನ್ಯಾಸಕಿ ಸಿ.ಬಿ. ಶೈಲಾ ಜಯಕುಮಾರ್ ಮಾತನಾಡಿ, ಚೆನ್ನಮ್ಮ ಅವರು ಸ್ವಾಭಿಮಾನದಿಂದ, ಸ್ವಾತಂತ್ಯ, ಸ್ವಾಯತ್ತತೆ, ಸ್ವರಾಜ್ಯಕ್ಕಾಗಿ ಆತ್ಮ ವಿಶ್ವಾಸದಿಂದ ಆಂಗ್ಲರ ವಿರುದ್ದ ಹೋರಾಡಿದವರು, ಇಂತಹ ಚೆನ್ನಮ್ಮನನ್ನು ಬಹಳ ಪ್ರೀತಿ, ಗೌರವದಿಂದ ಸ್ಮರಿಸೋಣ ಎಂದು ಹೇಳಿದರು.
ಭಾರತದಾದ್ಯಂತ ಪ್ರಪ್ರಥಮವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಮಹಿಳೆ ಚೆನ್ನಮ್ಮ. ಚೆನ್ನಮ್ಮಾಜಿ ನಮ್ಮೆಲ್ಲರ ಬದುಕಿಗೆ ಸ್ಫೂರ್ತಿ. ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಯಾವುದೇ ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು. ಮಹನೀಯರು ಮನುಕುಲದ ಮಾದರಿಗಳು ಇವರು. ನಾವು ಹೇಗೆ ಬದುದಬೇಕು ಎಂಬ ಆದರ್ಶವನ್ನು ಕಲಿಸಿಕೊಟ್ಟವರು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜದ ಮುಖಂಡರಾದ ಮಹಡಿ ಶಿವಮೂರ್ತಿ, ಎನ್.ಬಿ.ವಿಶ್ವನಾಥ್, ಜಿ.ಎನ್.ಮಹೇಶ್, ಮೋಕ್ಷ ರುದ್ರಸ್ವಾಮಿ, ನಿರ್ಮಲ ಬಸವರಾಜ್, ರೀನಾ ವೀರಭದ್ರಪ್ಪ, ಸುಮಾ ರಾಜಶೇಖರ್, ಪರಮೇಶ್ವರ್, ಶಿವಪ್ರಕಾಶ್, ದಯಾನಂದ ಪಾಟೀಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ ಸೇರಿದಂತೆ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇದ್ದರು. ಗಾನಯೋಗಿ ಸಂಗೀತ ಬಳಗದ ತೋಟಪ್ಪ ಉತ್ತಂಗಿ ಮತ್ತು ಸಂಗಡಿಗರು ಗೀತಗಾಯನ ನಡೆಸಿಕೊಟ್ಟರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page