ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚೆನ್ನಮ್ಮಾಜಿ ಹಾಕಿಕೊಟ್ಟ ದಾರಿಯಲ್ಲಿ ಸಾಗೋಣ

by | 23/10/23 | ಸುದ್ದಿ


ಚಿತ್ರದುರ್ಗ ಅ.23:
ಕಿತ್ತೂರು ರಾಣಿ ಚೆನ್ನಮ್ಮ ಇಡೀ ಮಾನವ ಸಮಾಜಕ್ಕೆ ಹಾಕಿಕೊಟ್ಟ ದಾರಿಯಲ್ಲಿ ನಾವು ಮತ್ತು ನಮ್ಮ ಮಕ್ಕಳನ್ನು ನಡೆಸೊಣ, ನಮ್ಮ ಮಕ್ಕಳಲ್ಲಿಯೂ ಸ್ವಾಭಿಮಾನದ ಕಿಚ್ಚು, ಹೋರಾಟದ ಮನೋಭಾವ, ಎಲ್ಲರನ್ನೂ ಪ್ರೀತಿಸುವ ಪ್ರೀತಿ ಬೆಳೆಸೋಣ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ ಸಮಾರಂಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸ್ವರಾಜ್ಯ ಮತ್ತು ಸ್ವಾತಂತ್ರ್ಯ ಇನ್ನೊಬ್ಬರ ಅಡಿಯಾಗಿರಬಾರದು ಎಂದು ನಂಬಿದ್ದ ಚೆನ್ನಮ್ಮ ತನ್ನ ಪ್ರಜೆಗಳ ಹಿತ ಕಾಯುವ ಸಂಕಲ್ಪ ತೊಟ್ಟು ಬದುಕಿದ ಏಕೈಕ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ನಮ್ಮ ಮಕ್ಕಳಿಗೆ ಸ್ವಾಭಿಮಾನದ ಕಿಚ್ಚು, ಹೋರಾಟದ ಛಲ ಬರಬೇಕು. ಕಿತ್ತೂರು ರಾಣಿ ಚೆನ್ನಮ್ಮ ಅವರ ಸಂದೇಶ ಪಾಲನೆ ಮಾಡಬೇಕು. ಮಹನೀಯರನ್ನು ಯಾವುದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ ಎಂದರು.
ಸ್ವಾರ್ಥ ಮನೋಭಾವದಿಂದಾಗಿ ಪ್ರಸ್ತುತ ದಿನಗಳಲ್ಲಿ ಜಗತ್ತು ವಿನಾಶದ ಅಂಚಿಗೆ ಹೋಗುತ್ತಿದೆ. ಈ ಹಿನ್ನಲೆಯಲ್ಲಿ ಮಹನೀಯರ ಸಂದೇಶವನ್ನು ನೆನೆಯುವುದರ ಜೊತೆಗೆ ನಾವು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕು ಎಂದರು.
ನಿವೃತ್ತ ಉಪನ್ಯಾಸಕಿ ಸಿ.ಬಿ. ಶೈಲಾ ಜಯಕುಮಾರ್ ಮಾತನಾಡಿ, ಚೆನ್ನಮ್ಮ ಅವರು ಸ್ವಾಭಿಮಾನದಿಂದ, ಸ್ವಾತಂತ್ಯ, ಸ್ವಾಯತ್ತತೆ, ಸ್ವರಾಜ್ಯಕ್ಕಾಗಿ ಆತ್ಮ ವಿಶ್ವಾಸದಿಂದ ಆಂಗ್ಲರ ವಿರುದ್ದ ಹೋರಾಡಿದವರು, ಇಂತಹ ಚೆನ್ನಮ್ಮನನ್ನು ಬಹಳ ಪ್ರೀತಿ, ಗೌರವದಿಂದ ಸ್ಮರಿಸೋಣ ಎಂದು ಹೇಳಿದರು.
ಭಾರತದಾದ್ಯಂತ ಪ್ರಪ್ರಥಮವಾಗಿ ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ ಮಹಿಳೆ ಚೆನ್ನಮ್ಮ. ಚೆನ್ನಮ್ಮಾಜಿ ನಮ್ಮೆಲ್ಲರ ಬದುಕಿಗೆ ಸ್ಫೂರ್ತಿ. ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಯಾವುದೇ ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು. ಮಹನೀಯರು ಮನುಕುಲದ ಮಾದರಿಗಳು ಇವರು. ನಾವು ಹೇಗೆ ಬದುದಬೇಕು ಎಂಬ ಆದರ್ಶವನ್ನು ಕಲಿಸಿಕೊಟ್ಟವರು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಸಮಾಜದ ಮುಖಂಡರಾದ ಮಹಡಿ ಶಿವಮೂರ್ತಿ, ಎನ್.ಬಿ.ವಿಶ್ವನಾಥ್, ಜಿ.ಎನ್.ಮಹೇಶ್, ಮೋಕ್ಷ ರುದ್ರಸ್ವಾಮಿ, ನಿರ್ಮಲ ಬಸವರಾಜ್, ರೀನಾ ವೀರಭದ್ರಪ್ಪ, ಸುಮಾ ರಾಜಶೇಖರ್, ಪರಮೇಶ್ವರ್, ಶಿವಪ್ರಕಾಶ್, ದಯಾನಂದ ಪಾಟೀಲ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಾಪಯ್ಯ ಸೇರಿದಂತೆ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇದ್ದರು. ಗಾನಯೋಗಿ ಸಂಗೀತ ಬಳಗದ ತೋಟಪ್ಪ ಉತ್ತಂಗಿ ಮತ್ತು ಸಂಗಡಿಗರು ಗೀತಗಾಯನ ನಡೆಸಿಕೊಟ್ಟರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page