ಹಿರಿಯೂರು :
ನಗರದ ಹೊರವಲಯದ 70 ಕಣಿವೆ ಸೇತುವೆ ಬಳಿ ಇರುವ ಜಯಮ್ಮ ಸೇವ್ಯಾ ನಾಯ್ಕ್ ಮತ್ತು ಎ.ಶಿವಮೂರ್ತಿ ನಾಯ್ಕ್ ಎಂಬುವರ ತೋಟದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 4 ಗಂಟೆಯ ಸಮಯದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆ ತೋಟವೆಲ್ಲಾ ಆವರಿಸಿತು ಅಡಿಕೆ, ಬಾಳೆ, ತೆಂಗು ಸೇರಿದಂತೆ ಸುಮಾರು 2,500 ಕ್ಕೂ ಹೆಚ್ಚು ಗಿಡಗಳು ಅಗ್ನಿಗೆ ಆಹುತಿಯಾಗಿದ್ದು, ರೈತರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಈ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯರಾದ ಆರ್.ನಾಗೇಂದ್ರ ನಾಯ್ಕ್ ಹಾಗೂ ಅನೇಕ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರಲ್ಲದೆ, ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments