ಜವರಾಯನ ಹಟ್ಟಹಾಸಕ್ಕೆ ಬೆಳ್ಳಂ ಬೆಳಗ್ಗೆ ಚಿಕ್ಕಬಳ್ಳಾಪುರ ಸಮೀಪ12 ಜನರು ಬಲಿ.

by | 26/10/23 | ಅಪಘಾತ

ಚಿಕ್ಕಬಳ್ಳಾಪುರ: ಬೆಳ್ಳಂ ಬೆಳಗ್ಗೆ ಚಿಕ್ಕಬಳ್ಳಾಪುರ ಸಮೀಪ ಜವರಾಯನ ಹಟ್ಟಹಾಸಕ್ಕೆ ಗಂಭೀರ ಅಪಘಾತ ನಡೆದಿದ್ದು, ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಈ ಅಪಘಾತವಾಗಿದೆ ಎನ್ನಲಾಗಿದೆ.ನಿಂತಿದ್ದ ಸಿಮೆಂಟ್‌ಗಾಡಿಗೆ ಟಾಟಾ ಸುಮೋ ಡಿಕ್ಕಿಯಾಗಿದೆ ಎನ್ನಲಾಗಿದೆ ಅಂತ ಸ್ಥಳೀಯರು ತಿಳಿಸಿದ್ದಾರೆ
.ಬೆಂಗಳೂರು -ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಈ ಘಟನೆ ನಡೆದಿದೆ ಅಂತ ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದು, ರಸ್ತೆಯ ಅವ್ಯವಸ್ಥೆ ಬಗ್ಗೆ ಕಿಡಿಕಾರಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *