ಜಾತಿ ಮತ ಧರ್ಮದ ಸಂಕೋಲೆಯಿಂದ ಹೊರಬಂದು ಆಧ್ಯಾತ್ಮಿಕ ಚಿಂತನೆಗಳನ್ನು ನಡೆಸಿದಾಗ ಮಾತ್ರ ಸಮಾಜದ ದೃಷ್ಟಿಕೋನ ಬದಲಾಗಲು ಸಾಧ್ಯ: ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ

by | 12/05/24 | ಸುದ್ದಿ


ಚಳ್ಳಕೆರೆ: ತಾಲೂಕಿನ ನರಹರಿ ನಗರದಲ್ಲಿರುವ ಶ್ರೀ ನರಹರೇಶ್ವರ ದೇವಾಲಯದ ಪ್ರಾಂಗಣದಲ್ಲಿ ಶ್ರೀ ನರಹರಿ ಸೇವಾ ಪ್ರತಿಷ್ಠಾನ ವತಿಯಿಂದ ಬ್ರಹ್ಮಶ್ರೀ ಲಕ್ಷ್ಮಿನರಸಿಂಹ ಸದ್ಗುರು ಸ್ವಾಮಿ ಶ್ರೀ ಸಿಂಹಾದ್ರಿ ಸದ್ಗುರು ಸ್ವಾಮಿ ಹಾಗೂ ಮಾತೃಶ್ರೀ ನಾಗವೇಣಮ್ಮನವರ ದಿವ್ಯ ಮಂಗಳ ವಿಗ್ರಹ ಅನಾವರಣ ಮಹೋತ್ಸವ ಕಾರ್ಯಕ್ರಮವನ್ನು ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ನರಹರಿ ಸೇವಾ ಪ್ರತಿಷ್ಠಾನದ ಮಾರ್ಗದರ್ಶಕರಾದ ಶ್ರೀ ಶಾಂತರಾಮ್ ಸ್ವಾಮೀಜಿಗಳವರು ಮಾತನಾಡಿ ಚಳ್ಳಕೆರೆ ತಾಲೂಕು ಬರಪೀಡಿತ ಪ್ರದೇಶವಾಗಿದ್ದರೂ ಸಹ ಆಧ್ಯಾತ್ಮಿಕತೆಯಲ್ಲಿ ಉತ್ತಮ ನೆಲೆಯಾಗಿ ರೂಪುಗೊಳ್ಳುತ್ತಿದೆ ಇತ್ತೀಚಿನ ದಿನಗಳಲ್ಲಿ ವೇಗದ ಬದುಕು ಸಾಗಿಸುತ್ತಿರುವ ಸಾರ್ವಜನಿಕರು ಆಧ್ಯಾತ್ಮಿಕ ದ ಕಡೆ ಒಲವು ತೋರುತ್ತಿದ್ದಾರೆ. ಆಧ್ಯಾತ್ಮಿಕ ಭಾವನೆ ಜನರಲ್ಲಿ ಜಾಗೃತಿಗೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಸದ್ಗುರು ಕಬೀರಾನಂದಶ್ರಮದ ಶಿವಲಿಂಗಾನಂದ ಸ್ವಾಮೀಜಿ ಮಾತನಾಡಿ ಶಂಕರಾಚಾರ್ಯರ ಅದ್ವೈತ ಸಿದ್ಧಾಂತವನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಜಾತಿ ಮತ ಧರ್ಮದ ಸಂಕೋಲೆಯಿಂದ ಹೊರಬಂದು ಚಿಂತನೆಗಳನ್ನು ನಡೆಸಿದಾಗ ಮಾತ್ರ ಸಮಾಜದ ದೃಷ್ಟಿಕೋನ ಬದಲಾಗಲು ಸಾಧ್ಯ ಮುಂದಿನ ಯುವ ಪೀಳಿಗೆಗೆ ಆಧ್ಯಾತ್ಮವನ್ನು ಬೋಧಿಸುವುದು ಪ್ರತಿಯೊಬ್ಬ ತಂದೆ ತಾಯಿಯ ಕರ್ತವ್ಯವಾಗಬೇಕು ಪ್ರತಿ ಮಗು ಸಂಸ್ಕಾರಯುತವಾಗಿ ಬೆಳೆದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ಕಿವಿಮಾತು ಹೇಳಿದರು. 


ಕಾರ್ಯಕ್ರಮದ ನೇತೃತ್ವ ವಹಿಸಿದ್ದ ನರಹರಿ ಸದ್ಗುರು ಸಂಪ್ರದಾಯ ಪೀಠಾಧ್ಯಕ್ಷ ಡಾ. ರಾಜಾರಾಮ್ ಸ್ವಾಮೀಜಿ ಮಾತನಾಡಿ ಭಾರತೀಯ ಧಾರ್ಮಿಕ ನಂಬಿಕೆ ಉಳಿಯಬೇಕೆಂದರೆ ಇಲ್ಲಿ ಸನ್ಯಾಸಿಯತೆ ಗೃಹಸ್ಥನು ಮುಕ್ತಿ ಮಾರ್ಗ ಕಂಡುಕೊಳ್ಳಬೇಕು ಅಂತಹ ಚಿಂತನೆಯಲ್ಲಿ ಜಾತಿ ವರ್ಗ ಭೇದ ಮರೆತು 200 ವರ್ಷಗಳ ಕಾಲಮಾನದ ನರಹರಿ ಸದ್ಗುರು ಸ್ವಾಮೀಜಿಗಳು ಅನುಸರಿಸುವ ಗೃಹಸ್ತ ಸಂಪ್ರದಾಯ ಅಧ್ಯಾತ್ಮಿಕ ಸೇವಾ ಕಾರ್ಯ ನಡೆಸಲಾಗುತ್ತಿದೆ ಈ ಪರಂಪರೆ ಅನುಸರಣೆಯಲ್ಲಿ ತಮ್ಮನ್ನು ಅರ್ಪಿಸಿಕೊಂಡಿರುವ ಲಕ್ಷ್ಮಿ ನರಸಿಂಹ ಸದ್ಗುರು ಸ್ವಾಮೀಜಿ ಸಿಂಹಾದ್ರಿ ಸದ್ಗುರು ಸ್ವಾಮೀಜಿ ಮಾತೃಶ್ರೀ ನಾಗವೇಣಿ ಅಮ್ಮನವರ ವಿಗ್ರಹಗಳ ಅನಾವರಣ ಕಾರ್ಯವನ್ನು ನಡೆಸಲಾಗುತ್ತದೆ ಪ್ರತಿಯೊಬ್ಬರು ಲೋಕ ಮತ್ತು ಬದುಕಿನ ನಡುವೆ ತನ್ನನ್ನು ತಾನು ಅರ್ಥೈಸಿಕೊಳ್ಳಲು ಪ್ರಯತ್ನ ಪಡಬೇಕು ಎಂದು ತಿಳಿಸಿದರು.

ಸಭಾ ಕಾರ್ಯಕ್ರಮಕ್ಕೆ ಮುನ್ನ ಬೆಳಗ್ಗೆಯಿಂದಲೇ ಸುಪ್ರಭಾತ ಪ್ರಾರ್ಥನೆ, ಪುಣ್ಯ ವಾಚನ ರುದ್ರಭಿಷೇಕ ಗಣ ಹೋಮ ನವಗ್ರಹ ವಾಸ್ತು ಹೋಮ ಸಾಮೂಹಿಕ ಗುರುಮಾಲ ಮಂತ್ರ ಹೋಮ ಭೂಮಿ ಪೂಜೆ ಹಾಗೂ ದಿವ್ಯ ಮಂಗಳ ವಿಗ್ರಹಗಳ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀ ಶಾರದಾಶ್ರಮದ ಮಾತಾಜಿ ತ್ಯಾಗಮಯಿ ನರಹರಿ ಸೇವಾ ಪ್ರತಿಷ್ಠಾನ ಹಾಗೂ ಸ್ಥಾನಿಕ ಕಾರ್ಯಕಾರಿ ಸಮಿತಿಯ ಜಂಟಿ ಕಾರ್ಯದರ್ಶಿ ಬಿಸಿಮೂರ್ತಿ ಎನ್ ಪದ್ಮನಾಭ ಪುರುಷೋತ್ತಮ ಸಿಕೇಶ್ ದರ್ಶನ್ ಸುಧಾಕರ್ ಬಿಸಿ ವೆಂಕಟೇಶ್ ಮೂರ್ತಿ ಬಿಸಿ ರಾಘವೇಂದ್ರ ಗುಪ್ತ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page