ಜಾನಪದ ಸಂಗೀತ ಕರ್ನಾಟಕದ ಶ್ರೀಮಂತ ಕಲೆ*: ದಳವಾಯಿ ಅಭಿಮತ

by | 23/11/23 | ಸಾಂಸ್ಕೃತಿಕ


ನಾಯಕನಹಟ್ಟಿ ನ.,23.ಹೋಬಳಿ ಸಮೀಪದ ರೇಖಲಗೆರೆ ಲಂಬಾಣಿ ಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಲ್ಲೂರ ಹಳ್ಳಿಯ ಶಿವಕುಮಾರ್ ಟಿ ತಂಡದ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಲ್ಲೂರ ಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ.ದಳವಾಯಿ ಇವರು ಕಾರ್ಯಕ್ರಮವನ್ನು ಕೀ ಬೋರ್ಡ್ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ,ಜನರು ಸ್ವತಃ ಹಾಡು ಕಟ್ಟಿ ಬಾಯಿಂದ ಬಾಯಿಗೆ ಹರಡುತ್ತಾ ಪ್ರಸಿದ್ದಿಯಾದ ಜಾನಪದ ಗೀತೆಗಳು ನಮ್ಮ ಕರ್ನಾಟಕದ ಶ್ರೀಮಂತ ಕಲೆಗಳಲ್ಲಿ ಒಂದಾಗಿದೆ, ನಮ್ಮ ಸಂಸ್ಕೃತಿ ಆಚಾರಗಳಿಗೆ ಅನುಗುಣವಾಗಿ ಪ್ರತಿ ಸಂದರ್ಭಕ್ಕೂ ಹಾಡು ಕಟ್ಟಿ ಮೆರುಗನ್ನು ನೀಡಿರುವ ಮಹಾನ್ ಕಲಾವಿದರನ್ನು ಸ್ಮರಿಸಿ ಜಾನಪದ ಗೀತೆಗಳ ಸಂಗೀತ ನಿನಾದಗಳನ್ನು,ಸಾಹಿತ್ಯಗಳನ್ನು ಅಳಿಯದಂತೆ ನಾವು ಉಳಿಸಬೇಕಿದೆ ಎಂದು ಹೇಳಿದರು.


ಕಲಾ ತಂಡದ ನಾಯಕ ಶಿವಕುಮಾರ್ ಟಿ ಮಾತನಾಡಿ ಸತತವಾಗಿ 10 ವರ್ಷಗಳಿಂದ ಕಲಾವಿದನಾಗಿ ಕಲಾ ಸೇವೆಯನ್ನು ಮಾಡಲು ನನಗೆ ಮುಖ್ಯವಾದ ಪ್ರೇರೇಪಣೆ ನೀಡಿದ್ದು ನನ್ನ ಗುರುಗಳಾದ ಡಿ. ರಾಜಣ್ಣ ಇವರ ಸೂಕ್ತ ಮಾರ್ಗದರ್ಶನದಿಂದ ಇಂದು ನಾನು ವಿಷ್ಣು ಸಾಂಸ್ಕೃತಿಕ ಕಲಾ ಸಂಘವನ್ನು ಕಟ್ಟಿಕೊಂಡು ಕಲಾ ಸೇವೆಯನ್ನು ಮಾಡಲು ನೆರವಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ ಎಸ್.ಟಿ ಇವರ ಅನುಮತಿಯಿಂದಾಗಿ ಇಂದು ಜಾನಪದ ಸಂಗೀತ ಕಾರ್ಯಕ್ರಮವನ್ನು ಮಾಡುವ ಸೌಭಾಗ್ಯ ನಮ್ಮ ಕಲಾ ತಂಡಕ್ಕೆ ಲಭಿಸಿದೆ,ಇದೆ ತರ ನಮ್ಮ ತಂಡದಿಂದ ಕಲಾ ಸೇವೆಯನ್ನು ಮುಂದುವರೆಸಿಕೊಂಡು ಹೋಗಲು ಜನರ ಪ್ರೋತ್ಸಾಹ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಮುಖ್ಯ ಶಿಕ್ಷಕ ವೆಂಕಟೇಶ್ ಹೆಚ್.ಡಿ ಇವರು ಮಾತನಾಡಿ, ಚಲನ ಚಿತ್ರ ಗೀತೆಗಳ ಮಧ್ಯೆ ಜನಪದ ಗೀತೆಗಳನ್ನು ಹಾಡುವ ಪರಿಪಾಟಲು ಕಡಿಮೆಯಾಗುತ್ತಿದೆ, ಜನಪದ ಗೀತೆಗಳ ಸಾಹಿತ್ಯ ಹಾಗೂ ಅವುಗಳ ಮಹತ್ವ ಪ್ರತಿಯೊಬ್ಬ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಸಾಂದರ್ಭಿಕ ಹಾಡುಗಳಾಗಿವೆ.ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಹಾಡುವ ಕಲೆಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ಕಲಾವಿದರಾಗಿ ಹೊರ ಹೊಮ್ಮುವ ಅವಕಾಶಗಳಿವೆ ಎಂದು ತಿಳಿಸಿದರು.


ಕಲಾವಿದ ರಾಜಣ್ಣ ಮಾತನಾಡಿ ಕಲೆ ಎಲ್ಲರನ್ನೂ ಕೈ ಬೀಸಿ ಕರೆಯುತ್ತದೆ ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ, ಯಾರಿಗೆ ನಿರಂತರ ಬದ್ಧತೆ ಹಾಗೂ ಕಲಿಯುವ ಹಂಬಲ ಹೊಂದಿ ಅದರಂತೆ ಸತತ ಪ್ರಯತ್ನಗಳನ್ನು ಮಾಡುವರೋ ಅವರು ನಿಜವಾಗಿ ಉತ್ತಮ ಕಲಾವಿದರಗುತ್ತಾರೆ, ಆದ್ದರಿಂದ ಕಲೆಗೆ ಪ್ರೋತ್ಸಾಹ ನೀಡುವ ಮನಸ್ಸುಳ್ಳ ವ್ಯಕ್ತಿಗಳ ಕೊರತೆಯಿದೆ. ಇದರ ಪರಿಣಾಮ ಕಲಾವಿದರು ಸೃಷ್ಟಿ
ಯಾಗುವ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತ ಪಡಿಸಿದರು.

ಬಹುಮುಖ ಪ್ರತಿಭೆಯ ಟಿ.ಶಿವಕುಮಾರ್ ಬಹಳ ವರ್ಷಗಳಿಂದ ಕಲಾವಿದನಾಗಿ ತಂಡವನ್ನು ಕಟ್ಟಿಕೊಂಡು ರಾಜ್ಯಾದ್ಯಂತ ಕಲಾ ಸೇವೆಯನ್ನು ಮಾಡುತ್ತಾ ಸಾಗುತ್ತಿರುವ ಉದಯೋನ್ಮುಖ ಪ್ರತಿಭೆ ಎಂದು ಗಾಯಕ ಶಿಕ್ಷಕರಾದ ಕೆ.ಟಿ.ನಾಗಭೂಷಣ್ ಹೇಳಿದರು.
ಸಂಗೀತ ಕಾರ್ಯಕ್ರಮದಲ್ಲಿ ಕಲಾವಿದ ಗಾಯಕರಾದ ಶಿವಕುಮಾರ್ ಟಿ,ಪ್ರಿಯಾಂಕ,ರಾಜಣ್ಣ,ತಿಪ್ಪೇಸ್ವಾಮಿ,ನಾಗಭೂಷಣ್,ನೀಲಪ್ಪ ತೂಲಹಳ್ಳಿ,ಇವರು ವಿವಿಧ ಜಾನಪದ ಗೀತೆಗಳನ್ನು ಹಾಡುವುದರ ಮೂಲಕ ಪ್ರೇಕ್ಷಕರಿಗೆ ಮನರಂಜನೆಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷೆ ಮಂಜುಳಾ ಬಸವರಾಜ್, ಎಸ್ ಡಿ ಎಂ ಸಿ ಅಧ್ಯಕ್ಷ ಜಯಣ್ಣ, ಕಲಾ ತಂಡದ ನಾಯಕ ಶಿವಕುಮಾರ್ ಟಿ, ರಿದಂ ಪ್ಯಾಡ್ ವಾದಕ ಎಂ ವಿ ಬದ್ರಿ, ಕೀ ಬೋರ್ಡ್ ವಾದಕ ರಾಜಣ್ಣ,ಗಾಯಕ ಪವನ್ ತಳಕು ,ಶಿಕ್ಷಕರಾದ ವೀರಭದ್ರಪ್ಪ ಡಿ.ಕೆ,ರಂಜಿತಾ,ಮಹಾಂತೇಶ್, ಸೌಮ್ಯ , ಓಬಕ್ಕ,ಪ್ರಸನ್ನ ಕುಮಾರ್, ಬಡ ಮ್ಯಾಕಲಯ್ಯ, ಶಾಲಾ ವಿದ್ಯಾರ್ಥಿಗಳು,ಊರಿನ ಗ್ರಾಮಸ್ಥರು ಹಾಗೂ ಮತ್ತಿತರು ಹಾಜರಿದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page