ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ದೊಡ್ಡದಾಗಿ ಕೆರೆ ನಿರ್ಮಿಸುವಂತೆ ರೈತರಿಂದ: ನಾರಾಯಣಸ್ವಾಮಿಯವರಿಗೆ ಮನವಿ

by | 06/03/24 | ಸುದ್ದಿ

ಚಿತ್ರದುರ್ಗ ಚಳ್ಳಕೆರೆ ತಾಲೂಕನ್ನು ಸರ್ಕಾರವು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದ್ದು ಇದ್ದರಿಂದ ಬೇಸಿಗೆ ಪ್ರಾರಂಭವಾಗುತ್ತಿದ್ದು ಜನ ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು ಇದರಿಂದ ಹೆಗ್ಗೆರೆ ಸಮೀಪ ಇರುವ ಸಣ್ಣ ಕೆರೆಯನ್ನು ದೊಡ್ಡ ಕೆರೆಯನ್ನಾಗಿ ನಿರ್ಮಾಣ ಮಾಡಿಕೊಡುವಂತೆ ಹೆಗ್ಗೆರೆ ಗ್ರಾಮದ ರೈತರು ಚಿತ್ರದುರ್ಗದ ಪ್ರವಾಸಿ ಮಂದಿರದ ಹತ್ತಿರ ಸಂಸದ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಚಳ್ಳಕೆರೆಯು ಅತಿ ಕಡಿಮೆ ಮಳೆ ಬೀಳುವ ಬಯಲು ಸೀಮೆ ಪ್ರದೇಶವಾಗಿದ್ದು ಇದರಿಂದ ಹೆಗ್ಗೆರೆಯ ಪ್ರಕಾಶ್ ಸ್ಪಂಜ್ ಐರನ್ ಕಂಪನಿಯವರು ಸಣ್ಣಕೆರೆಯನ್ನು ನಿರ್ಮಿಸಿದ್ದು 2022 ರಲ್ಲಿ ಕೆರೆಯು ಭರ್ತಿಯಾಗಿದ್ದು ಈ ವರ್ಷ ಮಳೆಬಾರದೇ ಬರಗಾಲಕ್ಕೆ ತುತ್ತಾಗಿದ್ದು ಇದರಿಂದ ಕೆರೆಯ ನೀರು ಬತ್ತಿ ಹೋಗುತ್ತಿದ್ದು ರೈತರ ಬೋರ್ ವೆಲ್ ಹಾಗೂ ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದೆ ಇದರಿಂದ ಆದಷ್ಟು ಬೇಗ ದೊಡ್ಡ ಕೆರೆಯನ್ನಾಗಿ ನಿರ್ಮಾಣ ಮಾಡಿದರೆ ಮಳೆಗಾಲದಲ್ಲಿ ಮಳೆಯ ನೀರು ಶೇಖರಣೆಯಾಗಿ ನೀರು ತುಂಬಿದರೆ ರೈತರ ಬೋರ್ವೆಲ್ ಜನ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ರೈತರು ಸಂಸದ ನಾರಾಯಣಸ್ವಾಮಿಯವರಿಗೆ ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ನಾರಾಯಣಸ್ವಾಮಿ ಅವರು ಗ್ರಾಮೀಣ ಭಾಗಗಳಲ್ಲಿ ಜನಜಾನುವಾರುಗಳಿಗೆ. ರೈತರುಗಳಿಗೆ ನೀರಿನ ತೊಂದರೆ ಉಂಟಾಗದ ರೀತಿ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ.ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಹತ್ತಿರ ಮಾತುಕತೆ ನಡೆಸುತ್ತೇನೆ. ನಾಲ್ಕೈದು ಗ್ರಾಮಗಳ ರೈತರ ಬೋರ್ ವೆಲ್ ಗಳಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದರೆ ಆದಷ್ಟು ಬೇಗ ದೊಡ್ಡ ಕೆರೆಯನ್ನಾಗಿ ನಿರ್ಮಿಸಿ ಕೊಡಲು ಅನುಕೂಲ ಮಾಡಿಕೊಡುತ್ತೇವೆ ಎಂದು ರೈತರಿಗೆ ಭರವಸೆ ನೀಡಿದರು.

ಮಾಧ್ಯಮದವರಿಗೆ ಮಾಹಿತಿ ನೀಡಿದ ರೈತ ದ್ಯಾಮಣ್ಣ ಹೆಗ್ಗೆರೆ ಸಮೀಪ ಪ್ರಕಾಶ ಸ್ಪಂಜ್ ಐರನ್ ಕಂಪನಿಯವರು ಸಣ್ಣ ಕೆರೆಯನ್ನು ನಿರ್ಮಿಸಿದ್ದು ಹೆಗ್ಗೆರೆ, ಕಾಪರಹಳ್ಳಿ ,ಜಡೆಕುಂಟೆ, ಗೊಲ್ಲಹಳ್ಳಿ, ಹುಲಿಕುಂಟೆ, ಹೂಟ್ಟಜನ ಕಪಿಲೆ ಗ್ರಾಮಗಳ ರೈತರಿಗೆ ಬಹಳ ಅನುಕೂಲವಾಗಿದೆ ಹಾಗೂ ಈ ವರ್ಷ ಬೋರ್ ವೆಲ್ ಗಳು ಸೇಫ್ ಆಗಿವೆ. ಇದರಿಂದ ಮಳೆ ನೀರು ಶೇಖರಣೆ ಮಾಡಲು ದೊಡ್ಡ ಕೆರೆ ನಿರ್ಮಿಸಿ ಕೊಡಲು ಸಂಸದರ ಹತ್ತಿರ ಮನವಿ ಮಾಡಿ ಕೊಂಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಎಸ್ ಆರ್ ಕೆಂಚಪ್ಪ, ಅಪರಂಗಪ್ಪ, ಕೆಂಚಪ್ಪ, ದುರುಗೇಶ್, ಗುರುಸ್ವಾಮಿ, ಹನುಮಂತ, ಲಕ್ಷ್ಮಣ, ರಂಗಪ್ಪ, ಬಾಲಕೃಷ್ಣ, ನವೀನ್ ಅಣ್ಣಪ್ಪ ಇತರರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page