ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ದೊಡ್ಡದಾಗಿ ಕೆರೆ ನಿರ್ಮಿಸುವಂತೆ ರೈತರಿಂದ: ನಾರಾಯಣಸ್ವಾಮಿಯವರಿಗೆ ಮನವಿ

by | 06/03/24 | ಸುದ್ದಿ

ಚಿತ್ರದುರ್ಗ ಚಳ್ಳಕೆರೆ ತಾಲೂಕನ್ನು ಸರ್ಕಾರವು ಬರಗಾಲ ಪ್ರದೇಶವೆಂದು ಘೋಷಣೆ ಮಾಡಿದ್ದು ಇದ್ದರಿಂದ ಬೇಸಿಗೆ ಪ್ರಾರಂಭವಾಗುತ್ತಿದ್ದು ಜನ ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು ಇದರಿಂದ ಹೆಗ್ಗೆರೆ ಸಮೀಪ ಇರುವ ಸಣ್ಣ ಕೆರೆಯನ್ನು ದೊಡ್ಡ ಕೆರೆಯನ್ನಾಗಿ ನಿರ್ಮಾಣ ಮಾಡಿಕೊಡುವಂತೆ ಹೆಗ್ಗೆರೆ ಗ್ರಾಮದ ರೈತರು ಚಿತ್ರದುರ್ಗದ ಪ್ರವಾಸಿ ಮಂದಿರದ ಹತ್ತಿರ ಸಂಸದ ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಚಳ್ಳಕೆರೆಯು ಅತಿ ಕಡಿಮೆ ಮಳೆ ಬೀಳುವ ಬಯಲು ಸೀಮೆ ಪ್ರದೇಶವಾಗಿದ್ದು ಇದರಿಂದ ಹೆಗ್ಗೆರೆಯ ಪ್ರಕಾಶ್ ಸ್ಪಂಜ್ ಐರನ್ ಕಂಪನಿಯವರು ಸಣ್ಣಕೆರೆಯನ್ನು ನಿರ್ಮಿಸಿದ್ದು 2022 ರಲ್ಲಿ ಕೆರೆಯು ಭರ್ತಿಯಾಗಿದ್ದು ಈ ವರ್ಷ ಮಳೆಬಾರದೇ ಬರಗಾಲಕ್ಕೆ ತುತ್ತಾಗಿದ್ದು ಇದರಿಂದ ಕೆರೆಯ ನೀರು ಬತ್ತಿ ಹೋಗುತ್ತಿದ್ದು ರೈತರ ಬೋರ್ ವೆಲ್ ಹಾಗೂ ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದೆ ಇದರಿಂದ ಆದಷ್ಟು ಬೇಗ ದೊಡ್ಡ ಕೆರೆಯನ್ನಾಗಿ ನಿರ್ಮಾಣ ಮಾಡಿದರೆ ಮಳೆಗಾಲದಲ್ಲಿ ಮಳೆಯ ನೀರು ಶೇಖರಣೆಯಾಗಿ ನೀರು ತುಂಬಿದರೆ ರೈತರ ಬೋರ್ವೆಲ್ ಜನ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದು ರೈತರು ಸಂಸದ ನಾರಾಯಣಸ್ವಾಮಿಯವರಿಗೆ ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಸಂಸದ ನಾರಾಯಣಸ್ವಾಮಿ ಅವರು ಗ್ರಾಮೀಣ ಭಾಗಗಳಲ್ಲಿ ಜನಜಾನುವಾರುಗಳಿಗೆ. ರೈತರುಗಳಿಗೆ ನೀರಿನ ತೊಂದರೆ ಉಂಟಾಗದ ರೀತಿ ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿ.ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಹತ್ತಿರ ಮಾತುಕತೆ ನಡೆಸುತ್ತೇನೆ. ನಾಲ್ಕೈದು ಗ್ರಾಮಗಳ ರೈತರ ಬೋರ್ ವೆಲ್ ಗಳಿಗೆ ಜಾನುವಾರುಗಳಿಗೆ ಅನುಕೂಲವಾಗುತ್ತದೆ ಎಂದರೆ ಆದಷ್ಟು ಬೇಗ ದೊಡ್ಡ ಕೆರೆಯನ್ನಾಗಿ ನಿರ್ಮಿಸಿ ಕೊಡಲು ಅನುಕೂಲ ಮಾಡಿಕೊಡುತ್ತೇವೆ ಎಂದು ರೈತರಿಗೆ ಭರವಸೆ ನೀಡಿದರು.

ಮಾಧ್ಯಮದವರಿಗೆ ಮಾಹಿತಿ ನೀಡಿದ ರೈತ ದ್ಯಾಮಣ್ಣ ಹೆಗ್ಗೆರೆ ಸಮೀಪ ಪ್ರಕಾಶ ಸ್ಪಂಜ್ ಐರನ್ ಕಂಪನಿಯವರು ಸಣ್ಣ ಕೆರೆಯನ್ನು ನಿರ್ಮಿಸಿದ್ದು ಹೆಗ್ಗೆರೆ, ಕಾಪರಹಳ್ಳಿ ,ಜಡೆಕುಂಟೆ, ಗೊಲ್ಲಹಳ್ಳಿ, ಹುಲಿಕುಂಟೆ, ಹೂಟ್ಟಜನ ಕಪಿಲೆ ಗ್ರಾಮಗಳ ರೈತರಿಗೆ ಬಹಳ ಅನುಕೂಲವಾಗಿದೆ ಹಾಗೂ ಈ ವರ್ಷ ಬೋರ್ ವೆಲ್ ಗಳು ಸೇಫ್ ಆಗಿವೆ. ಇದರಿಂದ ಮಳೆ ನೀರು ಶೇಖರಣೆ ಮಾಡಲು ದೊಡ್ಡ ಕೆರೆ ನಿರ್ಮಿಸಿ ಕೊಡಲು ಸಂಸದರ ಹತ್ತಿರ ಮನವಿ ಮಾಡಿ ಕೊಂಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಎಸ್ ಆರ್ ಕೆಂಚಪ್ಪ, ಅಪರಂಗಪ್ಪ, ಕೆಂಚಪ್ಪ, ದುರುಗೇಶ್, ಗುರುಸ್ವಾಮಿ, ಹನುಮಂತ, ಲಕ್ಷ್ಮಣ, ರಂಗಪ್ಪ, ಬಾಲಕೃಷ್ಣ, ನವೀನ್ ಅಣ್ಣಪ್ಪ ಇತರರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page