ಚಳ್ಳಕೆರೆ: ದೇಶದ 16 ಜಿಲ್ಲೆಗಳಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಅತ್ಯಂತ ಕಡಿಮೆ ಮಳೆ ಬೀಳುವ ಪ್ರದೇಶ ಎಂದು ಈಗಾಗಲೇ ಹೆಸರು ಪಡೆದಿದ್ದು ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಂಡುಬಂದ ಕಾರಣ ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಜಿ ಟಿ ಟಿ ಸಿ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು.
ನಗರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಪ್ರಮಾಣ ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಿಟಿಟಿಸಿ ಕೇಂದ್ರದಲ್ಲಿ ಕಲಿತ ಯಾವುದೇ ವಿದ್ಯಾರ್ಥಿಗಳಿಗೆ ನಿರುದ್ಯೋಗ ಸಮಸ್ಯೆ ಕಾಡುವುದಿಲ್ಲ ಒಬ್ಬ ವಿದ್ಯಾರ್ಥಿ ಪರಿಪೂರ್ಣವಾಗಿ ಶಿಸ್ತಿನಿಂದ ಕಲಿತು ಜಿಟಿಸಿ ಕೇಂದ್ರದಿಂದ ಹೊರ ನಡೆದರೆ ಕರ್ನಾಟಕ ಆಂಧ್ರ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಪಡೆಯುವಲ್ಲಿ ಯಶಸ್ವಿ ಆಗುತ್ತಾರೆ ಆದರೆ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಸಮಯ ಪಾಲನೆಯನ್ನು ರೂಡಿಸಿಕೊಂಡು ಉದ್ಯೋಗ ಪಡೆದ ಸ್ಥಳದಲ್ಲಿ ತಮಗೆ ಎಷ್ಟೇ ಕಷ್ಟಗಳು ಎದುರಾದರೂ ಸಹ ಹಿಂದಿರುಗಿ ಬರದೆ ಸಹಿಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಇದರಿಂದ ಪೋಷಕರಿಗೂ ಸಹ ನೆಮ್ಮದಿಯ ಜೀವನ ಕಲ್ಪಿಸಬಹುದು ಎಂದು ಕಿವಿ ಮಾತು ಹೇಳಿದರು. 2014ರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಕೇಂದ್ರವನ್ನು ಸ್ಥಾಪನೆ ಮಾಡಲು ಅನುಮೋದನೆ ನೀಡಿತ್ತು 2021 ರಲ್ಲಿ ಅಧಿಕೃತವಾಗಿ ಕಾರ್ಯ ಆರಂಭಗೊಳಿಸಿ ಈಗ 68 ವಿದ್ಯಾರ್ಥಿಗಳು ಉದ್ಯೋಗವನ್ನು ಖಾಸಗಿ ಕಂಪನಿಗಳಲ್ಲಿ ಪಡೆದಿದ್ದು ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗಲಿದೆ ಜಿಟಿಸಿ ಕೇಂದ್ರಕ್ಕೆ ಬೇಕಾದ ವಸತಿಗೃಹ ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಇನ್ನಷ್ಟು ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ತಾಲೂಕಿನ ಯುವಕರಿಗೆ ಉದ್ಯೋಗ ಪಡೆಯಲು ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ನೆರವು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರಾಸ್ತಾಮಿಕವಾಗಿ ಮಾತಾಡಿದ ಜಿ ಟಿ ಟಿ ಸಿ ಕೇಂದ್ರದ ಪ್ರಾಂಶುಪಾಲ ತಿಪ್ಪೇಸ್ವಾಮಿ ತಾಲೂಕಿನ ಈ ಕೇಂದ್ರವು ರಾಜ್ಯದಲ್ಲಿ ಉತ್ತಮ ಗುಣಮಟ್ಟ ಹೊಂದಿರುವ ಸಂಸ್ಥೆಯಾಗಿದ್ದು ನಮ್ಮ ವಿದ್ಯಾರ್ಥಿಗಳು ಐಟಿಸಿಯಂತಹ 17 ಪ್ರತಿಷ್ಠಿತ ಕಂಪನಿಗಳಲ್ಲಿ 68 ವಿದ್ಯಾರ್ಥಿಗಳು ಉದ್ಯೋಗ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದು ಜಿಟಿಸಿ ಕೇಂದ್ರಕ್ಕೆ ಸ್ವತಃ ಖಾಸಗಿ ಕಂಪನಿಗಳು ಭೇಟಿ ನೀಡಿ ಕ್ಯಾಂಪಸ್ ಸೆಲೆಕ್ಷನ್ ಮಾಡಿಕೊಂಡಿದ್ದು ಕಂಪನಿಗಳ ಮಾಲೀಕರೇ ಈ ಸಂಸ್ಥೆಗೆ ವಿದ್ಯಾರ್ಥಿಗಳನ್ನು ಸೇರಿಸಲು ಪ್ರೋತ್ಸಾಹಿಸುತ್ತಿದ್ದಾರೆ ಇಲ್ಲಿನ ವಿದ್ಯಾರ್ಥಿಗಳು ಹೆಚ್ಚಿನ ಶಿಸ್ತು ಮತ್ತು ಸಮಯ ಪಾಲನೆಗೆ ಉದ್ಯೋಗ ಪಡೆದ ಕಂಪನಿಗಳಲ್ಲಿ ಹೆಸರು ಪಡೆದಿದ್ದಾರೆ ಇದಕ್ಕೆ ಕಂಪನಿಯ ಮಾಲೀಕರು ಸಹ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ವರ್ಷ ಡಿಪ್ಲೋಮೋ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮೋ ಇನ್ ಪ್ರಿಜಿಶನ್ ಮ್ಯಾನುಫ್ಯಾಕ್ಚರಿಂಗ್ ಡಿಪ್ಲೋಮ ಇನ್ ಮೆಕ್ಯಾ ಟ್ರ್ಯಾನಿಕ್ಸ್, ಡಿಪ್ಲೋಮಾ ಇನ್ ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಎಂಬ ನಾಲ್ಕು ವಿಷಯಧಾರಿತ ಕೋರ್ಸ್ ಗಳನ್ನು ತೆರೆಯಲಾಗಿದ್ದು ಒಟ್ಟು 240 ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಪಡೆಯಲಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಬೆಂಗಳೂರು ಸೇರಿದಂತೆ ಇತರೆ ರಾಜ್ಯಗಳ ನಗರಗಳಲ್ಲಿ ಉದ್ಯೋಗ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಪ್ರಮಾಣ ಪತ್ರವನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ರಮೇಶ್ ಗೌಡ, ರಾಘವೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ನಗರಸಭೆ ನಾಮ ನಿರ್ದೇಶನ ಸದಸ್ಯರಾದ ನೇತಾಜಿ ಪ್ರಸನ್ನ, ಅನ್ವರ್ ಮಾಸ್ಟರ್ ಜಿಟಿ ಶಶಿಧರ್ ಮುಖಂಡರು, ಕಾರ್ಯಕರ್ತರು ಹಾಗೂ ಶಿಕ್ಷಣ ತರಭೇತಿ ಕೇಂದ್ರದ ಶಿಕ್ಷಕರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಫೋಟೊ
0 Comments