ಜಿಪಂ ಇಂಜಿಯರಿಂಗ್ ಉಪವಿಭಾಗದ ಕಚೇರಿಯಲ್ಲಿ ಮೂರು ಹುದ್ದೆಗೆ ಒಬ್ಬ ಇಂಜಿನಿಯರ್ ಇರುವ ಒಬ್ಬ ಇಂಜಿಯರ್ ಕಚೇರಿಗೆ ಬಾರದೆ ಗುತ್ತಿಗೆದಾರರು ಪರದಾಟ ಅಭಿವೃದ್ಧಿಗೆ ಮಾರಕ.

by | 02/11/23 | ತನಿಖಾ ವರದಿ

ಚಳ್ಳಕೆರೆ.ಜನಧ್ವನಿ ವಾರ್ತೆ ನ.2
ಗ್ರಾಮೀಣ ಅಭಿವೃದ್ಧಿಗೆ ಬರುವ ವಿವಿಧ ಯೋಜನೆಗಳ ಕಾಮಗಾರಿಗಳ ಕ್ರಿಯಾಯೋಜನೆ, ತಾಂತ್ರಿಕ ಮಂಜುರಾತಿಗಾಗಿ ಗುತ್ತಿಗೆದಾರರು ಕಚೇರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.
ಹೌದು ಇಚು ಚಳ್ಳಕೆರೆ ನಗರದ ಹೊರವಲಯದಲ್ಲಿರುವ ಜಿಲ್ಲಾಪಂಚಾಯತ್ ಇಂಜಿನಿಯರಿAಗ್ ಉಪವಿಭಾಗ ಕಚೇರಿಯಲ್ಲಿ ಇಂಜಿನಿಯರ್‌ಗಳ ಕೊರತೆಯಿಂದ ಗ್ರಾಮೀಣ ಭಾಗದ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿಗಳಿಗೆ ಬಿಡುಗಡೆಯಾದ ಅನದಾನಕ್ಕೆ ಕ್ರಿಯಾ ಯೋಜನೆ, ಬಿಲ್ ಬರೆಯಲು, ಕಾಮಗಾರಿಗಳ ಅಭಿವೃದ್ಧಿಗೆ ಕುಂಠಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ
ಚಳ್ಳಕೆರೆ ತಾಲೂಕು ಭೌಗೋಳಿಕ ವಿಸ್ತೀರ್ಣವಾಗಿದ್ದು 40 ಗ್ರಾಮಪಂಚಾಯಿತಿಗಳನ್ನು ಹೊಂದಿದ್ದು ಕಸಬಾ,ನಾಯಕನಹಟ್ಟಿ,ತಳಕು, ಪರಶುರಾಂಪುರ ನಾಲ್ಕು ಹೋಬಳಿ ಕೇಂದ್ರಗಳಿದ್ದು ನಾಯಕನಹಟ್ಟಿ , ತಳಕು ಹೋಬಳಿಗಳು ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರವ್ಯಾಪ್ತಿಗೆ ಬರುತ್ತವೆ ತಾಲೂಕು ಕೇಂದ್ರದಿಂದ ಓಬಳಾಪುರ, ಹಿರಿಹಳ್ಳಿ, ಸಿದ್ದೇಶ್ವರನದುರ್ಗ, ಅಬ್ಬೇನಹಳ್ಳಿ ಸೇರಿದಂತೆ ಕೆಲ ಗ್ರಾಮಪಂಚಾಯಿತಿಗಳು ಚಳ್ಳಕೆರೆ ಕೇಂದ್ರ ಸ್ಥಳದಿಂದ ಸುಮಾರು ನಲವತ್ತು ಕಿ.ಮೀ ದೂರ ಇವೆ ಇಂತಹ 40 ಗ್ರಾಪಂ ಕಚೇರಿಗಳಿಗೆ 14,15 ನೇ ಹಣಕಾಸು ಯೋಜನೆ ಸೇರಿದಂತೆ ಕಟ್ಟಡ, ರಸ್ತೆ ಅಭಿವೃದ್ಧಿಗಳ ಹೊಣೆ ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪವಿಭಾಗದ ಕಚೇರಿಗೆ ಬರುತ್ತವೆ ಇಂಜಿನಿಯರ್‌ಗಳ ಕೊರತೆಯಿಂದ ಕಾಮಗಾರಿಗಳ ಕ್ರಿಯಾಯೋಜನೆ, ಕಾಮಗಾರಿಗಳು ಎಲ್ಲಿ ನಡೆಯುತ್ತವೆ, ಕಾಮಗಾರಿಗಳ ಗುಣಮಟ್ಟ ಪರಿಶೀಲನೆ, ಕಾಮಗಾರಿಗಳ ಎಂ.ಬಿ ಬರೆದು ಬಿಲ್ ಬರೆಯಲು ವಿಳಂಬ ದೋರಣೆಯಿಂದ ಗುತ್ತಿಗೆದಾರರು ಕಾಮಗಾರಿಗಳ ಬಿಲ್ ಗಾಗಿ ಕಚೇರಿಗೆ ಪರದಾಡವಂತಾಗಿದೆ ಎಂದು ಆರೋಪಗಳು ಕೇಳಿ ಬರುತ್ತಿವೆ.
ತಾಲೂಕಿಗೆ ಒಬ್ಬನೇ ಇಂಜಿನಿಯರ್
ಊರಿಗೆ ಒಬ್ಬಳೆ ಪದ್ಮವಾತಿ ಎಂಬ ಗಾದೆ ಮಾತಿನಂತೆ ತಾಲೂಕಿಗೆ ಒಬ್ಬ ನೆ ಜೂನಿಯರ್ ಇಂಜಿಯರ್ ಎಂ.ಎಸ್ ಮುಹೀಬುರ್ ರೆಹಮಾನ್ ವೇತನ ಪಡೆಯುವ ಒಂದು ವರ್ಷದ ತೆರಿಗೆ ಹಣ ಸುಮಾರು 1 ಲಕ್ಷಕ್ಕೂ ಹೆಚ್ಚು ಹಟ್ಟದೆ ಇರುವುದರಿಂದ ಈಗ ತೆರಿಗೆ ಇಲಾಖೆ ಎಇಇ ಅಧಿಕಾರಿಗೆ ಹೊಣೆ ನೀಡಲಾಗಿದೆ ಎನ್ನಲಾಗಿದೆ. ಕೆಲವು ವೈಯುಕ್ತಿಕ ಸಮಸ್ಯೆಯಿಂದ ಕಚೇರಿಗೆ ಬಾರದೆ ಇರುವುದು ಗುತ್ತಿಗೆದಾರರಿಗೆ ದೊಡ್ಡ ತಲೆ ಬಿಸಿಯಾಗಿದೆ.ಕಚೇರಿಗೆ ಬಾರದೆ ಜನರ ಕೈಗೂ ಸಿಗದೆ ಇರುವುದು ಮತ್ತಷ್ಟು ಸಮಸ್ಯೆಯಾಗಿದ್ದು. ಈಗ ಇರುವ ಒಬ್ಬ ಮಹಿಳಾ ಎಇಇ ಇಡೀ ತಾಲೂಕಿನ 40 ಗ್ರಾಪಂ ಹೊಣೆ ಇವರ ಮೇಲಿದೆ.
ಲೆಕ್ಕಕ್ಕುಂಟು ಕೆಲಸಕ್ಕಿಲ್ಲ.
ಕಚೇರಿಯಲ್ಲಿ ಒಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಹುದ್ದೆ 1, ಸಹಾಯಕ ಇಂಜಿಯರ್ ಹುದ್ದೆ 1ಸಹಾಯಕ ಇಂಜಿಯರ್ ವರ್ಗಾವಣೆಗೊಂಡು ಸುಮಾರು 8 ವರ್ಷಗಳು ಕಳೆದರೂ ನೆಮಕವಾಗಿಲ್ಲದ ಕಾರಣ ಹುದ್ದೆ ಖಾಲಿ ಇದೆ.
3 ಜ್ಯೂನಿಯರ್ ಇಂಜಿಯರ್‌ಗಳ ಮಂಜುರಾತಿ ಹುದ್ದೆಗಳಿದ್ದು ಗುರುರಾಜ್ ಹಾಗೂ ಉಮೇಶ್ ಇಬ್ಬರು ಜ್ಯೂನಿಯರ್ ಇಂಜಿನಿಯರ್ ಗಳನ್ನು ಚಿತ್ರದುರ್ಗ ಕಾರ್ಯಪಾಲಯಕ ಇಂಜಿಯರ್ ಪಂಚಾಯತ್ ರಾಜ್ ವಿಭಾಗ ಜಿಲ್ಲಾ ಕಚೇರಿಗೆ ನಿಯೋಜನೆ ಮಾಡಲಾಗಿದೆ. ಇರುವ ಒಬ್ಬ ಜೆ ಇ ಜ್ಯೂನಿಯರ್ ಇಂಜಿನಿಯರ್ ಎಂ.ಎಸ್ ಮುಹೀಬುರ್ ರೆಹಮಾನ್ ಇಡೀ ತಾಲೂಕಿನ 40 ಗ್ರಾಪಂ ವ್ಯಾಪ್ತಿಯ ಕಾಮಗಾರಿಗಳ ಸ್ಥಳಕ್ಕೆ ಹೋಗದೆ ಕಚೇರಿಯಲ್ಲಿ ಲೆಕ್ಕಕ್ಕುಂಟು ಆಟಕಿಲ್ಲ ಎಂಬಂತಾಗಿದೆ.
ತಾಲೂಕಿನ 40 ಗ್ರಾಮಪಂಚಾಯತ್ ವ್ಯಾಪ್ತಿಗಳಲ್ಲಿ ನಡೆಯುವ ಜಿಪಂ, ತಾಪಂ, ಗ್ರಾಪಂ ವ್ಯಾಪ್ತಿಯ 15 ನೇ ಹಣಕಾಸು, ಬಯಲು ಸೀಮೆ ಅಭಿವೃದ್ಧಿ, ಅಂಗನವಾಡಿ, ಲಂಬಾಣಿ ತಾಂಡ ಸೇರಿದಂತೆ ವಿವಿಧ ಯೋಜನೆಯ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ, ಅಂದಾಜು ಪಟ್ಟಿ,ತಾಂತ್ರಿಕ ಮಂಜುರಾತಿ, ಅಳತೆ ಪುಸ್ತಕ(ಎಂಬಿ) ಬರೆಯಲು ಒಬ್ಬರಿಂದ ಸಾಧ್ಯವಾಗದೆ ಇರುವ ಒಬ್ಬ ಇಂಜಿಯರ್ ಗುತ್ತಿಗೆದಾರರ ಕೈಗೂ ಸಿಗದೆ ಆಡಳೀತ, ತಾಂತ್ರಿಕ ಮಂಜುರಾತಿ ಹಾಗೂ ಕ್ರಿಯಾ ಕಾಮಗಾರಿಗಳ ಅಂದಾಜು ಪಟ್ಟಿಗಳಿಗೆ ಸಹಿ ಹಾಕಿಸಲು ಗುತ್ತಿಗೆದಾರರು ಪಂಚಾಯತ್ ರಾಜ್ ಇಂಜಿಯರಿಂಗ್ ಉಪವಿಭಾಗ ಕಚೇರಿಗೆ ದಿನ ನಿತ್ಯ ಹಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈಗಲಾದರೂ ಸಂಬಂಧ ಪಟ್ಟ ಅಧಿಕಾರಿಗಳು ಇಂಜಿನಿಯಂಗ್ ಉಪವಿಭಾಗದ ಚಳ್ಳಕೆರೆ ಕಚೇರಿಗೆ ಜೂನಿಯರ್ ಇಂಜಿನಿಯರ್ ಗಳನ್ನು ಕಳಿಸಿಕೊಡುವರೇ ಕಾದು ನೋಡ ಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page