ಜಿಲ್ಲಾಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆಯಬೇಕು :ರಾಜ್ಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ

by | 31/10/23 | ಪ್ರತಿಭಟನೆ


ಚಿತ್ರದುರ್ಗ :
ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಆರ್.ಜೆ.ದಿವ್ಯಪ್ರಭು ಇವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಬರಗಾಲವೆಂದು ಘೋಷಿಸಿದ ಚಳ್ಳಕೆರೆ ಹಿರಿಯೂರು ತಾಲೂಕುಗಳನ್ನು ಬರಗಾಲ ಪಟ್ಟಿಯಲ್ಲಿ ಸೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದು, ಇಂತಹ ಜಿಲ್ಲಾಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂಬುದಾಗಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ ಸರ್ಕಾರವನ್ನು ಒತ್ತಾಯಿಸಿದರು.
ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ಶ್ರೀಮತಿ ಆರ್.ಜೆ.ದಿವ್ಯಪ್ರಭುರವರ ವರ್ಗಾವಣೆಯನ್ನು ಸರ್ಕಾರ ವಾಪಸ್ ಪಡೆದು ಇನ್ನೂ ಒಂದು ವರ್ಷ ಮುಂದುವರಿಸಬೇಕು ಎಂಬುದಾಗಿ ಒತ್ತಾಯಿಸಿ ರಾಜ್ಯ ರೈತಸಂಘದ ಚಳ್ಳಕೆರೆ ತಾಲ್ಲೂಕು ಘಟಕದ ವತಿಯಿಂದ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿ, ನಂತರ ಅವರು ಮಾತನಾಡಿದರು.
ವೇದಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಕಳ್ಳ ಸಾಗಾಣಿಕೆ ದಂದೆ ಮಟ್ಟ ಹಾಕುವುದು,2023ರ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಗ್ರಾಮಗಳಲ್ಲಿ ದೊಂಬಿ ಗಲಾಟೆ ನಡೆಯದಂತೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಿ, ಜಿಲ್ಲಾಧಿಕಾರಿಗಳಾದ ಶ್ರೀಮತಿ ಆರ್.ಜೆ.ದಿವ್ಯಪ್ರಭುರವರು ಶಾಂತಿಯುತ ಮತದಾನಕ್ಕೆ ಅವಕಾಶ ಮಾಡಿರುತ್ತಾರೆ ಎಂದರಲ್ಲದೆ,
ಜಿಲ್ಲಾಧಿಕಾರಿಗಳು ಬೆಸ್ಕಾಂ ಇಲಾಖೆ ವಿದ್ಯುತ್ತನ್ನು ಕಡಿತಗೊಳಿಸಿದ್ದನ್ನು ಮನಗಂಡು ಬೆಸ್ಕಾಂ ಪ್ರಧಾನ ವ್ಯವಸ್ಥಾಪಕರನ್ನು ಜಿಲ್ಲೆಗೆ ಕರೆಯಿಸಿ ರೈತರೊಂದಿಗೆ ಚರ್ಚೆ ನಡೆಸಿ ಐದು ಗಂಟೆಗಳ ನಿರಂತರ ವಿದ್ಯುತ್ ಮೂರು ಫೇಸ್ ಕೊಡಲು ಹಾಗು ಸಂಜೆ 6:00 ಗಂಟೆಯಿಂದ ಬೆಳಗ್ಗೆ 6:00 ವರೆಗೆ ಸಿಂಗಲ್ ಫೀಸ್ ಒದಗಿಸಲು ಬೆಸ್ಕಾಂ ಇಲಾಖೆಗೆ ಮನವರಿಕೆ ಮಾಡಿ ಕೊಟ್ಟು ಜಿಲ್ಲೆಯ ರೈತರಿಗೆ ನೆರವಾಗಿದ್ದಾರೆ,
ಅಲ್ಲದೆ 2023ನೇ ಈ ವರ್ಷ ಮುಂಗಾರಿಗೆ ಬಿತ್ತಿದ ಮಳೆ ಇಲ್ಲದೆ ಸಂಪೂರ್ಣವಾಗಿ ಬೆಳೆಗಳು ಒಣಗಿ ಹೋಗಿದ್ದನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿ ಬೆಳೆವಿಮೆ ಪ್ರತಿನಿಧಿಗಳನ್ನು ಜಿಲ್ಲಾಧಿಕಾರಿಗಳ ಸಭಾಂಗಣಕ್ಕೆ ಕರೆಸಿ ರೈತರೊಂದಿಗೆ ಚರ್ಚಿಸಿ ಬೆಳೆ ವಿಮೆಯನ್ನು ತುರ್ತಾಗಿ ರೈತರ ಬ್ಯಾಂಕ್ ಖಾತೆ ಜಮಾ ಮಾಡಿಸಬೇಕೆಂದು ಆದೇಶ ನೀಡಿರುತ್ತಾರೆ. ಇವರ ಸೇವೆ ನಮ್ಮ ಜಿಲ್ಲೆಗೆ ಅಗತ್ಯವಾಗಿರುವುದರಿಂದ ಇವರನ್ನು ಸರ್ಕಾರ ವರ್ಗಾವಣೆ ಮಾಡಬಾರದೆಂದು ರೈತ ಸಂಘ ಒತ್ತಾಯಿಸುತ್ತದೆ ಎಂದರು.
ಒಂದು ವೇಳೆ ಸರ್ಕಾರ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಮುಂದಾದರೆ ಮಹಿಳಾ ಸಂಘಟನೆಗಳು, ರೈತ ಸಂಘ ಮತ್ತು ಸಾರ್ವಜನಿಕರು ಜಿಲ್ಲೆಯಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳುವ ಮೂಲಕ ಚಿತ್ರದುರ್ಗದ ಬೈಪಾಸ್ ರಸ್ತೆ ಬಂದ್ ಮಾಡಿ, ಜಿಲ್ಲೆಗೆ ಬಂದಂತಹ ಮಂತ್ರಿಗಳಿಗೆ, ಸಚಿವರಿಗೆ ಘೇರಾವ್ ಮಾಡಬೇಕಾಗುತ್ತದೆ ಮತ್ತು ಹೋರಾಟದಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಸರ್ಕಾರವೇ ಜವಾಬ್ದಾರಿ ಎಂಬುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷರಾದ ಕೆ.ಸಿ.ಹೊರಕೇರಪ್ಪ, ಚಿತ್ರದುರ್ಗ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಧನಂಜಯ್, ಚಳ್ಳಕೆರೆ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾದ ಟಿ.ಹಂಪಣ್ಣ, ಕಲ್ಲೇನಹಳ್ಳಿ ಯುವರೈತ ಮುಖಂಡ ಕುಮಾರ್ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಾಪುರ ತಿಪ್ಪೇಸ್ವಾಮಿ, ಜಿಲ್ಲಾ ಮಹಿಳಾ ಸಂಚಾಲಕಿ ಶ್ರೀಮತಿ ಸುಧಾ, ತಾಲ್ಲೂಕು ಮಹಿಳಾ ಸಂಚಾಲಕಿ ಶ್ರೀಮತಿ ಶಶಿಕಲಾ, ಯುವಮುಖಂಡ ಚೇತನ್ ಯಳನಾಡು, ಶ್ರೀನಿವಾಸ್, ಜಿ.ಗುರುಮೂರ್ತಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಜಿ.ಟಿ.ಸುರೇಶ್, ಹನುಮಂತರಾಯ, ರೇಣುಕಮ್ಮ ಮಹಾದೇವಪ್ಪ, ಗೌರಮ್ಮ, ಹನುಮಕ್ಕ, ಸೇರಿದಂತೆ ಅನೇಕ ರೈತ ಮುಖಂಡರು ಉಪಸ್ಥಿತರಿದ್ದರು.

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *