ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ ಕ್ಷಯ: ಬೇಡ ಭಯ, ನಿಯಮಿತವಾಗಿ ಬಹು ಔಷಧ ಸೇವನೆಯಿಂದ ರೋಗ ಗುಣ

by | 14/03/23 | ಆರೋಗ್ಯ

ಚಿತ್ರದುರ್ಗ ಮಾರ್ಚ್14:
ಕ್ಷಯ ರೋಗದ ಬಗ್ಗೆ ಭಯ ಬೇಡ. ನಿಯಮಿತವಾಗಿ ಬಹು ಔಷಧ ಸೇವನೆಯಿಂದ ರೋಗ ಗುಣವಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮದಕರಿಪುರ ಗ್ರಾಮದ ಸಮುದಾಯ ಭವನದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಕೆಹೆಚ್‍ಪಿಟಿ ಟ್ರಸ್ಟ್ ಸಹಯೋಗದೊಂದಿಗೆ “ಕ್ಷಯರೋಗ ನಿರ್ಮೂಲನೆಯಲ್ಲಿ ಸಮುದಾಯದ ಸಹಭಾಗಿತ್ವ’ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕ್ಷಯರೋಗ ನಿರ್ಮೂಲನೆ ನಿಮ್ಮೆಲ್ಲರ ಭಾಗವಹಿಸುವಿಕೆಯಿಂದ ಸಾಧ್ಯ. ಈಗಾಗಲೇ ಗ್ರಾಮ ಪಂಚಾಯತಿ ಅಮೃತ ಆರೋಗ್ಯ ಅಭಿಯಾನದಲ್ಲಿ ತಮಗೆಲ್ಲಾ ತರಬೇತಿ ನೀಡಲಾಗಿದೆ. ಅದರಂತೆ ಹಳ್ಳಿಯ ಪ್ರತಿ ವಾರ್ಡ್‍ನಲ್ಲಿ ಆರೋಗ್ಯ ಅಭಿಯಾನ ನಡೆಸಿ, ವಿಶೇಷವಾಗಿ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮದಲ್ಲಿ ತಪಾಸಣೆ, ವಿಶೇಷ ಪರೀಕ್ಷೆ ನಡೆಸಿ ಕ್ಷಯರೋಗದ ಬಗ್ಗೆ ಇರುವ ಸಾಮಾಜಿಕ ಕಳಂಕ ಹೋಗಲಾಡಿಸಿ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (ಕ್ಷಯರೋಗ ವಿಭಾಗ) ಮಾರುತಿಪ್ರಸಾದ್ ಮಾತನಾಡಿ, ಕ್ಷಯರೋಗ ಹರಡುವ ವಿಧಾನ, ಕ್ಷಯರೋಗದ ಚಿಕಿತ್ಸಾ ವಿಧಾನ, ಕ್ಷಯರೋಗ ಪರೀಕ್ಷಾ ವಿಧಾನ, ನಿಕ್ಷಯಮಿತ್ರ ಪೆÇೀಷಣ್ ಅಭಿಯಾದಡಿ ರೋಗಿಗಳಿಗೆ ಸಿಗುವ ಆರ್ಥಿಕ ಸೌಲತ್ತುಗಳ ಬಗ್ಗೆ ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಕ್ಷಯರೋಗಿಗಳ ಯೋಗಕ್ಷೇಮಕ್ಕಾಗಿ ದತ್ತು ಪಡೆದುಕೊಳ್ಳಲು ದಾನಿಗಳು ಮುಂದೆ ಬರಬೇಕು. ತೊಂದರೆಯಲ್ಲಿರುವ ವರ್ಗ ಗರ್ಭಿಣಿಯರು ತಪ್ಪದೇ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಕ್ಷಯರೋಗ ಪರೀಕ್ಷೆ ಕಫ ಪರೀಕ್ಷೆ ಮಾಡಿಸಿಕೊಳ್ಳಲು ಮರೆಯಬೇಡಿ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ರಂಗಾರೆಡ್ಡಿ, ಪ್ರವೀಣ್, ಆರೋಗ್ಯ ಸುರಕ್ಷತಾಧಿಕಾರಿ ಮನುಜಾ, ಆಶಾ, ಕೆ.ಹೆಚ್.ಪಿ.ಟಿ. ತಾಲ್ಲೂಕು ಸಂಚಾಲಕ ಚಿಕ್ಕಣ್ಣ, ಪಿ.ಡಿ.ಒ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮದ ಮುಖ್ಯಸ್ಥರು, ಆಶಾ ಕಾರ್ಯಕರ್ಯೆಯರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page