ಚಿತ್ರದುರ್ಗ ಮಾರ್ಚ್14:
ಕ್ಷಯ ರೋಗದ ಬಗ್ಗೆ ಭಯ ಬೇಡ. ನಿಯಮಿತವಾಗಿ ಬಹು ಔಷಧ ಸೇವನೆಯಿಂದ ರೋಗ ಗುಣವಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮದಕರಿಪುರ ಗ್ರಾಮದ ಸಮುದಾಯ ಭವನದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಕೆಹೆಚ್ಪಿಟಿ ಟ್ರಸ್ಟ್ ಸಹಯೋಗದೊಂದಿಗೆ “ಕ್ಷಯರೋಗ ನಿರ್ಮೂಲನೆಯಲ್ಲಿ ಸಮುದಾಯದ ಸಹಭಾಗಿತ್ವ’ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕ್ಷಯರೋಗ ನಿರ್ಮೂಲನೆ ನಿಮ್ಮೆಲ್ಲರ ಭಾಗವಹಿಸುವಿಕೆಯಿಂದ ಸಾಧ್ಯ. ಈಗಾಗಲೇ ಗ್ರಾಮ ಪಂಚಾಯತಿ ಅಮೃತ ಆರೋಗ್ಯ ಅಭಿಯಾನದಲ್ಲಿ ತಮಗೆಲ್ಲಾ ತರಬೇತಿ ನೀಡಲಾಗಿದೆ. ಅದರಂತೆ ಹಳ್ಳಿಯ ಪ್ರತಿ ವಾರ್ಡ್ನಲ್ಲಿ ಆರೋಗ್ಯ ಅಭಿಯಾನ ನಡೆಸಿ, ವಿಶೇಷವಾಗಿ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮದಲ್ಲಿ ತಪಾಸಣೆ, ವಿಶೇಷ ಪರೀಕ್ಷೆ ನಡೆಸಿ ಕ್ಷಯರೋಗದ ಬಗ್ಗೆ ಇರುವ ಸಾಮಾಜಿಕ ಕಳಂಕ ಹೋಗಲಾಡಿಸಿ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (ಕ್ಷಯರೋಗ ವಿಭಾಗ) ಮಾರುತಿಪ್ರಸಾದ್ ಮಾತನಾಡಿ, ಕ್ಷಯರೋಗ ಹರಡುವ ವಿಧಾನ, ಕ್ಷಯರೋಗದ ಚಿಕಿತ್ಸಾ ವಿಧಾನ, ಕ್ಷಯರೋಗ ಪರೀಕ್ಷಾ ವಿಧಾನ, ನಿಕ್ಷಯಮಿತ್ರ ಪೆÇೀಷಣ್ ಅಭಿಯಾದಡಿ ರೋಗಿಗಳಿಗೆ ಸಿಗುವ ಆರ್ಥಿಕ ಸೌಲತ್ತುಗಳ ಬಗ್ಗೆ ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಕ್ಷಯರೋಗಿಗಳ ಯೋಗಕ್ಷೇಮಕ್ಕಾಗಿ ದತ್ತು ಪಡೆದುಕೊಳ್ಳಲು ದಾನಿಗಳು ಮುಂದೆ ಬರಬೇಕು. ತೊಂದರೆಯಲ್ಲಿರುವ ವರ್ಗ ಗರ್ಭಿಣಿಯರು ತಪ್ಪದೇ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಕ್ಷಯರೋಗ ಪರೀಕ್ಷೆ ಕಫ ಪರೀಕ್ಷೆ ಮಾಡಿಸಿಕೊಳ್ಳಲು ಮರೆಯಬೇಡಿ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ರಂಗಾರೆಡ್ಡಿ, ಪ್ರವೀಣ್, ಆರೋಗ್ಯ ಸುರಕ್ಷತಾಧಿಕಾರಿ ಮನುಜಾ, ಆಶಾ, ಕೆ.ಹೆಚ್.ಪಿ.ಟಿ. ತಾಲ್ಲೂಕು ಸಂಚಾಲಕ ಚಿಕ್ಕಣ್ಣ, ಪಿ.ಡಿ.ಒ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮದ ಮುಖ್ಯಸ್ಥರು, ಆಶಾ ಕಾರ್ಯಕರ್ಯೆಯರು ಇದ್ದರು.
ಜುಲೈ 27ರಂದು ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ
ಚಿತ್ರದುರ್ಗ ಜುಲೈ26: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ...
0 Comments