ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ ಕ್ಷಯ: ಬೇಡ ಭಯ, ನಿಯಮಿತವಾಗಿ ಬಹು ಔಷಧ ಸೇವನೆಯಿಂದ ರೋಗ ಗುಣ

by | 14/03/23 | ಆರೋಗ್ಯ

ಚಿತ್ರದುರ್ಗ ಮಾರ್ಚ್14:
ಕ್ಷಯ ರೋಗದ ಬಗ್ಗೆ ಭಯ ಬೇಡ. ನಿಯಮಿತವಾಗಿ ಬಹು ಔಷಧ ಸೇವನೆಯಿಂದ ರೋಗ ಗುಣವಾಗುತ್ತದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಸಿ.ಓ.ಸುಧಾ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಕಾಸವರಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮದಕರಿಪುರ ಗ್ರಾಮದ ಸಮುದಾಯ ಭವನದಲ್ಲಿ ಮಂಗಳವಾರ ಆರೋಗ್ಯ ಇಲಾಖೆ, ಕೆಹೆಚ್‍ಪಿಟಿ ಟ್ರಸ್ಟ್ ಸಹಯೋಗದೊಂದಿಗೆ “ಕ್ಷಯರೋಗ ನಿರ್ಮೂಲನೆಯಲ್ಲಿ ಸಮುದಾಯದ ಸಹಭಾಗಿತ್ವ’ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖ್ಯಸ್ಥರೊಂದಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕ್ಷಯರೋಗ ನಿರ್ಮೂಲನೆ ನಿಮ್ಮೆಲ್ಲರ ಭಾಗವಹಿಸುವಿಕೆಯಿಂದ ಸಾಧ್ಯ. ಈಗಾಗಲೇ ಗ್ರಾಮ ಪಂಚಾಯತಿ ಅಮೃತ ಆರೋಗ್ಯ ಅಭಿಯಾನದಲ್ಲಿ ತಮಗೆಲ್ಲಾ ತರಬೇತಿ ನೀಡಲಾಗಿದೆ. ಅದರಂತೆ ಹಳ್ಳಿಯ ಪ್ರತಿ ವಾರ್ಡ್‍ನಲ್ಲಿ ಆರೋಗ್ಯ ಅಭಿಯಾನ ನಡೆಸಿ, ವಿಶೇಷವಾಗಿ ಕ್ಷಯರೋಗ ನಿರ್ಮೂಲನೆ ಕಾರ್ಯಕ್ರಮದಲ್ಲಿ ತಪಾಸಣೆ, ವಿಶೇಷ ಪರೀಕ್ಷೆ ನಡೆಸಿ ಕ್ಷಯರೋಗದ ಬಗ್ಗೆ ಇರುವ ಸಾಮಾಜಿಕ ಕಳಂಕ ಹೋಗಲಾಡಿಸಿ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ (ಕ್ಷಯರೋಗ ವಿಭಾಗ) ಮಾರುತಿಪ್ರಸಾದ್ ಮಾತನಾಡಿ, ಕ್ಷಯರೋಗ ಹರಡುವ ವಿಧಾನ, ಕ್ಷಯರೋಗದ ಚಿಕಿತ್ಸಾ ವಿಧಾನ, ಕ್ಷಯರೋಗ ಪರೀಕ್ಷಾ ವಿಧಾನ, ನಿಕ್ಷಯಮಿತ್ರ ಪೆÇೀಷಣ್ ಅಭಿಯಾದಡಿ ರೋಗಿಗಳಿಗೆ ಸಿಗುವ ಆರ್ಥಿಕ ಸೌಲತ್ತುಗಳ ಬಗ್ಗೆ ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ, ಕ್ಷಯರೋಗಿಗಳ ಯೋಗಕ್ಷೇಮಕ್ಕಾಗಿ ದತ್ತು ಪಡೆದುಕೊಳ್ಳಲು ದಾನಿಗಳು ಮುಂದೆ ಬರಬೇಕು. ತೊಂದರೆಯಲ್ಲಿರುವ ವರ್ಗ ಗರ್ಭಿಣಿಯರು ತಪ್ಪದೇ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಲ್ಲಿ ಕ್ಷಯರೋಗ ಪರೀಕ್ಷೆ ಕಫ ಪರೀಕ್ಷೆ ಮಾಡಿಸಿಕೊಳ್ಳಲು ಮರೆಯಬೇಡಿ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಶ್ರೀಧರ್, ರಂಗಾರೆಡ್ಡಿ, ಪ್ರವೀಣ್, ಆರೋಗ್ಯ ಸುರಕ್ಷತಾಧಿಕಾರಿ ಮನುಜಾ, ಆಶಾ, ಕೆ.ಹೆಚ್.ಪಿ.ಟಿ. ತಾಲ್ಲೂಕು ಸಂಚಾಲಕ ಚಿಕ್ಕಣ್ಣ, ಪಿ.ಡಿ.ಒ ನಾಗರಾಜ್, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು, ಗ್ರಾಮದ ಮುಖ್ಯಸ್ಥರು, ಆಶಾ ಕಾರ್ಯಕರ್ಯೆಯರು ಇದ್ದರು.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page