ಜಿಲ್ಲಾ ನ್ಯಾಯಾಧೀಶರಾದ ಗೀತಾ ಕೆ.ಬಿ. ಮಾಹಿತಿ ರಾಷ್ಟ್ರೀಯ ಲೋಕ್ ಅದಾಲತ್: ಚಾಲ್ತಿ-3204, ವ್ಯಾಜ್ಯಪೂರ್ವ 1,06,421 ಪ್ರಕರಣಗಳು ಇತ್ಯರ್ಥ.

by | 15/12/23 | ಕಾನೂನು


ಚಿತ್ರದುರ್ಗ ಡಿ.15:
ಜಿಲ್ಲೆಯಲ್ಲಿ ಕಳೆದ ಡಿಸೆಂಬರ್ 9ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿದ್ದ ಒಟ್ಟು 3204 ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ 1,06,421 ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಲಾಗಿದ್ದು, ಇತ್ಯರ್ಥದ ಒಟ್ಟು ಮೊತ್ತ 17,36,39,597 ರೂ. ಆಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ತಿಳಿಸಿದ್ದಾರೆ.
ಈ ಬಾರಿ ನಡೆದ ಲೋಕ್ ಅದಾಲತ್‍ನಲ್ಲಿ ವಿಶೇಷವಾಗಿ 41 ಪಾಲು ವಿಭಾಗದ ಪ್ರಕರಣಗಳು, 80 ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, 200 ಚೆಕ್ ಬೌನ್ಸ್ ಪ್ರಕರಣ, 42 ಅಪರಾಧಿಕ ಕಾಂಪೌಂಡ್ ಪ್ರಕರಣಗಳು, 76 ಅಪಘಾತ ವಿಮಾ ಪ್ರಕರಣಗಳು, 14 ಕೌಟುಂಬಿಕ ಪ್ರಕರಣಗಳು, 144 ಅಮಲ್ ಜಾರಿ ಪ್ರಕರಣಗಳು, ಕರಾರಿಗೆ ಸಂಬಂಧಿಸಿದ 10 ದಾವೆಗಳು, ವಿವಿಧ ರೀತಿಯ 94 ಸಿವಿಲ್ ದಾವೆಗಳು, ಅಪರಾಧಿಕ ಕಾಂಪೌಂಡಬಲ್ ಪ್ರಕರಣಗಳು (ವಿವಿಧ ಅಪರಾಧಿಕ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳು) ಇತರೆ ಅಪರಾಧಿಕ ಕಾಯ್ದೆಗಳ ಸಾವಿರಕ್ಕೂ ಹೆಚ್ಚು ಪ್ರಕರಣಗಳು ಇತ್ಯರ್ಥವಾಗಿವೆ.
ಅಲ್ಲದೇ, ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟು 9 ದಂಪತಿಗಳು, ಅಂದರೆ ಹಿರಿಯೂರು ನ್ಯಾಯಾಲಯದಲ್ಲಿ ಮೂರು ದಂಪತಿಗಳು, ಮೊಳಕಾಲ್ಮೂರು ನ್ಯಾಯಾಲಯದಲ್ಲಿ ಇಬ್ಬರು ಹಾಗೂ ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ನ್ಯಾಯಾಲಯದಲ್ಲಿ ತಲಾ ಒಂದು ದಂಪತಿ ತಮ್ಮ ವೈಮನಸ್ಸು ಬಿಟ್ಟು ಮತ್ತೆ ಒಂದಾಗಿದ್ದಾರೆ. ವಿಶೇಷವಾಗಿ ಸುಮಾರು 374 ಸಿವಿಲ್ ದಾವೆಗಳು ರಾಜಿಯಾಗಿರುತ್ತದೆ. ಅಲ್ಲದೇ 200 ಚೆಕ್ ಅಮಾನ್ಯ ಪ್ರಕರಣಗಳು ರಾಜಿಯಾಗಿದ್ದು, ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಟ್ಟಾರೆ ಮೊತ್ತ ರೂ 17,36,39,597/- ಆಗಿರುತ್ತದೆ. ಮುಂಬರುವ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚು ಪ್ರಕರಣಗಳನ್ನು ರಾಜೀ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಬಿ.ಗೀತಾ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page