ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಸೂಚನೆ ಬಾಲಕಾರ್ಮಿಕ ಪದ್ಧತಿ ತಡೆ, ನಿರ್ಮೂಲನೆಗಾಗಿ ಹೆಚ್ಚಿನ ದಾಳಿ ನಡೆಸಿ, ಅರಿವು ಮೂಡಿಸಿ

by | 24/02/23 | ಸುದ್ದಿ


ಚಿತ್ರದುರ್ಗ ಫೆ.24:
ಬಾಲಕಾರ್ಮಿಕ ಪದ್ಧತಿ ತಡೆ ಹಾಗೂ ನಿರ್ಮೂಲನೆ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ದಾಳಿ ನಡೆಸಿ, ಪ್ರಕರಣ ದಾಖಲಿಸಿ ದಂಡ ವಿಧಿಸಬೇಕು. ಜೊತೆಗೆ ಅರಿವು ಹಾಗೂ ಜನಜಾಗೃತಿಯನ್ನೂ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಲು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ದಿಢೀರ್ ಭೇಟಿ ನೀಡಿ, ತಪಾಸಣೆ ನಡೆಸಬೇಕು. ವಿಶೇಷವಾಗಿ ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕುಗಳಲ್ಲಿ ಹೆಚ್ಚು ಹೆಚ್ಚು ತಪಾಸಣೆ ಕಾರ್ಯಕೈಗೊಳ್ಳಬೇಕು. ಇದರ ಜೊತೆಗೆ ಜಿಲ್ಲೆಯಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಅರಿವು ಹಾಗೂ ಜನಜಾಗೃತಿಯನ್ನೂ ಮೂಡಿಸಬೇಕು ಎಂದು ತಾಕೀತು ಮಾಡಿದರು.
ಪ್ರತಿ ಮಾಹೆಯಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕರನ್ನು ಪತ್ತೆ ಹಚ್ಚಿ ತಪಾಸಣೆ ಮಾಡಿದ ವರದಿಯನ್ನು ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯು ಕಾಲಕಾಲಕ್ಕೆ ಜಿಲ್ಲಾಮಟ್ಟದ ಸಮಿತಿಗೆ ಸಭೆಯ ವರದಿ ಸಲ್ಲಿಸಬೇಕು. ತಾಲ್ಲೂಕು ಮಟ್ಟದ ಸಮಿತಿ ಸಭೆ ನಡೆಸದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ ಮಾತನಾಡಿ, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಕಾರಿ ಸಮಿತಿ ಸಭೆ ಆಯೋಜಿಸಲಾಗುತ್ತಿದೆ. ಸಮಿತಿಯಲ್ಲಿ 12 ಮಂದಿ ಸಮಿತಿ ಸದಸ್ಯರಿದ್ದಾರೆ. ಪ್ರತಿಯೊಂದು ತಾಲ್ಲೂಕಿನಲ್ಲಿಯೂ ತಾಲ್ಲೂಕು ಟಾಸ್ಕ್ ಪೋರ್ಸ್ ಸಮಿತಿ ಕಾರ್ಯನಿರ್ವಹಿಸಲಿದ್ದು, ತಹಶೀಲ್ದಾರ್ ತಾಲ್ಲೂಕು ಸಮಿತಿಯ ಅಧ್ಯಕ್ಷತೆರಾಗಿದ್ದು, ಕಾರ್ಮಿಕ ನಿರೀಕ್ಷಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಪಟ್ಟಂತೆ ದಾಳಿ ನಡೆಸಿ, ವರದಿಯನ್ನು ಜಿಲ್ಲಾ ಸಮಿತಿಗೆ ಕಳಿಸುತ್ತಾರೆ. ಕಳೆದ ಒಂದು ವರ್ಷದಿಂದ ಸಮರ್ಪಕವಾಗಿ ದಾಳಿ ನಡೆಯುತ್ತಿಲ್ಲ ಎಂದು ಹೇಳಿದರು.
ಜಿಲ್ಲೆಯಾದ್ಯಂತ 1986ರ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣದಡಿ ಕಾರ್ಮಿಕರು ನಿರೀಕ್ಷಕರು ತಪಾಸಣೆ ನಡೆಸುತ್ತಿದ್ದು, 2022ರ ಏಪ್ರಿಲ್ 01 ರಿಂದ ಇಲ್ಲಿಯವರೆಗೆ 227 ತಪಾಸಣೆ ಮಾಡಲಾಗಿದೆ. ಇದರಲ್ಲಿ ಮೂವರು ಬಾಲ ಕಾರ್ಮಿಕರನ್ನು ಪತ್ತೆ ಮಾಡಲಾಗಿದ್ದು, ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‍ಐಆರ್ ಮಾಡಲಾಗಿದೆ. ಎರಡು ಪ್ರಕರಣಗಳು 18 ವರ್ಷ ಮೇಲ್ಪಟ್ಟಿರುವುದರಿಂದ ಮುಖ್ಯವಾಹಿನಿಗೆ ತರಲಾಗಿದೆ ಎಂದರು.
ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಮಾತನಾಡಿ, ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯು ಪ್ರತಿ ಮಾಹೆಯು ದಾಳಿ ಮಾಡಿ ವರದಿ ಸಲ್ಲಿಸಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ. ಹಿರಿಯೂರು, ಹೊಸದುರ್ಗ ಹಾಗೂ ಚಿತ್ರದುರ್ಗದಲ್ಲಿ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸಲಾಗಿದೆ. ಚಳ್ಳಕೆರೆ, ಮೊಳಕಾಲ್ಮುರು ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ ಸಮಿತಿ ಸಭೆ ನಡೆಸಿ ವರದಿ ಸಲ್ಲಿಸಬೇಕಿದೆ. ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ದಾಳಿ ನಡೆಸಲಾಗುತ್ತಿದೆ ಎಂದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ತಹಶೀಲ್ದಾರ್ ನಾಗವೇಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Latest News >>

ಭಗವಂತನಲ್ಲಿ ಪ್ರೇಮಭಕ್ತಿ ಅವಶ್ಯವಾದದ್ದು:- ಸ್ವಾಮಿ ಪ್ರಕಾಶಾನಂದಜೀ ಮಹಾರಾಜ್ ಅಭಿಪ್ರಾಯ.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯಲ್ಲಿರುವ ವಾಸವಿ ಕಾಲೋನಿಯ ಶ್ರೀ ಶಾರದಾಶ್ರಮದಲ್ಲಿ ಆಯೋಜಿಸಿದ್ದ ಎರಡನೇ ದಿನದ ಶ್ರೀಮದ್ ಭಾಗವತ ಸಪ್ತಾಹ...

ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮದಲ್ಲಿ ಸಚಿವ ಡಿ.ಸುಧಾಕರ್ ಶಿಕ್ಷಣದಿಂದ ಸ್ವಾವಲಂಬಿ ಜೀವನ ಸಾಧ್ಯ

ಚಿತ್ರದುರ್ಗ ಜುಲೈ27: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರವಹಿಸಲಿದ್ದು, ಶಿಕ್ಷಣ ಪಡೆಯುವುದರಿಂದ ಸ್ವಾವಲಂಬನೆಯಿAದ ಜೀವನ ಮಾಡುವ...

ಸಂಗೀತ ಹಾಗೂ ಕಲೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಗೀತ ಸಿಂಚನದಂತಹ ಕಾರ್ಯಕ್ರಮಗಳು ಅತ್ಯಗತ್ಯ ವಾಣಿವಿಲಾಸ ವಿದ್ಯಾಸಂಸ್ಥೆ ಅಧ್ಯಕ್ಷ: ಬಿ.ಎಸ್.ರಘುನಾಥ್

ಹಿರಿಯೂರು : ಇಂದಿನ ಆಧುನಿಕ ಜಗತ್ತಿನಲ್ಲಿ ಸಂಗೀತ, ನೃತ್ಯ ಮತ್ತು ನಾಟಕಗಳಂತಹ ಜಾನಪದ ಕಲೆಗಳು ನಶಿಸಿ ಹೋಗುತ್ತಿದ್ದು, ಸಂಗೀತ ಹಾಗೂ ಕಲೆಗಳನ್ನು...

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page