ಜಿಲ್ಲಾ ಸ್ವೀಪ್ ಸಮಿತಿ ಸಭೆಯಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ಯುವ ಮತದಾರರ ನೋಂದಣಿಗೆ ಎಲ್ಲ ಕಾಲೇಜುಗಳಲ್ಲಿ ವಿಶೇಷ ಅಭಿಯಾನ

by | 24/11/23 | ಸುದ್ದಿ

ಚಿತ್ರದುರ್ಗ ನ.24:
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೋಂದಾಯಿಸುವ ಸಲುವಾಗಿ ಜಿಲ್ಲೆಯ ಪಿಯುಸಿ, ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಸೇರಿದಂತೆ ಎಲ್ಲ ಕಾಲೇಜುಗಳಲ್ಲಿ ನೊಂದಣಿ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಧಾನಸಭಾ ಕ್ಷೇತ್ರವಾರು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಚುರ ಪಡಿಸಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು 18 ವರ್ಷ ಮಾತ್ರವಲ್ಲದೆ, 2006 ಡಿಸೆಂಬರ್ 31 ರ ಒಳಗೆ ಜನಿಸಿರುವ ಎಲ್ಲರನ್ನೂ ಅಂದರೆ, 17 ವರ್ಷ ಪೂರ್ಣಗೊಂಡವರನ್ನೂ ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ನಮೂನೆ-06 ಪಡೆದುಕೊಳ್ಳಬೇಕು. ಡಿಸೆಂಬರ್ 9 ರವರೆಗೆ ನೊಂದಣಿಗೆ ಅವಕಾಶವಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಯಾವುದೇ ಅರ್ಹ ವ್ಯಕ್ತಿ ಮತದಾರರ ಪಟ್ಟಿಯಿಂದ ಹೊರಗುಳಿಯದೆ, ವ್ಯವಸ್ಥಿತ ರೀತಿಯಲ್ಲಿ ಮತಪಟ್ಟಿಯಲ್ಲಿ ನೊಂದಾಯಿಸುವ ಕೆಲಸ ಆಗಬೇಕು ಎಂದು ಸೂಚನೆ ನೀಡಿದರು.
ಸ್ವೀಪ್ ಕಾರ್ಯಕ್ರಮದ ಅಡಿಯಲ್ಲಿ ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ವಿಶೇಷ ಸಹಾಯಕ ಮತದಾರರ ನೋಂದಣಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ತಾಲ್ಲೂಕು ಪಂಚಾಯಿತಿ ಇಒಗಳು ಎಲ್ಲ ಕಾಲೇಜುಗಳಿಗೆ ಭೇಟಿ ನೀಡಿ, ಯುವ ಮತದಾರರ ನೊಂದಣಿಗೆ ವಿಶೇಷ ಅಭಿಯಾನ, ಜಾಗೃತಿ ಮೂಡಿಸಬೇಕು. ಯುವ ಮತದಾರರ ನೋಂದಣಿಯಲ್ಲಿ ಆಯಾ ತಾಲ್ಲೂಕು ಪಂಚಾಯಿತಿ ಇಒಗಳು ಬಹು ಮುಖ್ಯ ಪಾತ್ರವಹಿಸಲಿದ್ದು, ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಿದೆ. ಯಾವುದೇ ಲೋಪ-ದೋಷಗಳಿಲ್ಲದಂತೆ ಯುವ ಮತದಾರರ ನೋಂದಣಿ ಮಾಡಿಸಿ ಎಂದು ಹೇಳಿದರು.
ನರ್ಸಿಂಗ್ ವಿದ್ಯಾರ್ಥಿಗಳು, ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳ ನೋಂದಣಿಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಸಂಬಂಧಪಟ್ಟ ಪ್ರಾಂಶುಪಾಲರಿಗೆ ಸೂಕ್ತ ನಿರ್ದೇಶನ ನೀಡಿ, ನೋಂದಣಿಗೆ ಕ್ರಮವಹಿಸಬೇಕು. ಅದೇ ರೀತಿಯಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಕಾಲೇಜು, ಐಟಿಐ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆಧಾರ್ ಕಾರ್ಡ್, 2 ಭಾವಚಿತ್ರ, ಜನ್ಮ ದಾಖಲೆಗಾಗಿ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ವಿಳಾಸದ ಪುರಾವೆಗಾಗಿ ತಂದೆ ಅಥವಾ ತಾಯಿಯ ಎಪಿಕ್ ಕಾರ್ಡ್ ಜೆರಾಕ್ಸ್ ಇದಿಷ್ಟು ದಾಖಲೆಗಳೊಂದಿಗೆ ನಮೂನೆ-06 ಭರ್ತಿ ಮಾಡಿ ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಕ್ರಮವಹಿಸಬೇಕು. ಡಿಸೆಂಬರ್ 02 ರ ಒಳಗಾಗಿ ಎಲ್ಲ ಕಾಲೇಜಿನವರು ವಿದ್ಯಾರ್ಥಿಗಳಿಂದ ಭರ್ತಿ ಮಾಡಿದ ನಮೂನೆ-06 ಅನ್ನು ಪಡೆದು, ಕ್ರೋಢೀಕರಿಸಿ ಆಯಾ ತಾ.ಪಂ. ಇಒ ಗಳಿಗೆ ತಪ್ಪದೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಭಾಗವಹಿಸುವ ಮೂಲಕ ಅಗತ್ಯ ಸಹಕಾರ ನೀಡಬೇಕು. ನಾವೆಲ್ಲರೂ ತಂಡದ ರೀತಿಯಲ್ಲಿ ನೋಂದಣಿ ಕಾರ್ಯದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸೋಣ ಎಂದು ಹೇಳಿದರು.
ಉಪವಿಭಾಗಾಧಿಕಾರಿ ಎಂ.ಕಾರ್ತೀಕ್ ಮಾತನಾಡಿ, ಅರ್ಹ ಇರುವ ಯುವ ಮತದಾರರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು. ಮತದಾನದಿಂದ ವಂಚಿತರಾಗಬಾರದು. ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರು ಶೇ.100ರಷ್ಟು ನೊಂದಣಿ ಆಗುವಂತೆ ಕ್ರಮವಹಿಸಬೇಕು. ಮತದಾರರ ನೋಂದಣಿಯನ್ನು ಕೆಲಸ ಎಂದು ಭಾವಿಸದೇ ಪ್ರಜಾಪ್ರಭುತ್ವ ಬಲಗೊಳಿಸುವ ಪವಿತ್ರ ಕಾರ್ಯ ಎಂದು ಪರಿಗಣಿಸಿ, ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುಬ್ರಾನಾಯಕ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ ಸೇರಿದಂತೆ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಇದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page